ಭಕ್ತರಿಗಿಲ್ಲ ಪೂಜೆ, ಪ್ರಸಾದ – ಮತ್ತೆ ಭುಗಿಲೆದ್ದ ಮಹಾಬಲೇಶ್ವರನ ಮೇಲಿನ ಹಕ್ಕು ವಿವಾದ

Public TV
2 Min Read
mahabaleshwar temple 3

-ಹೊರ ಊರಿನ ಭಕ್ತರಿಗೆ ಆತ್ಮಲಿಂಗ ಸ್ಪರ್ಶ, ಪ್ರಸಾದಕ್ಕೆ ನಿರ್ಬಂಧ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ವಿವಾದ ಮತ್ತೆ ತಾರಕಕ್ಕೆ ಏರಿದೆ.

mahabaleshwar temple

ಮಹಾಬಲೇಶ್ವರ ಮಂದಿರದ ಗರ್ಭಗುಡಿಯಲ್ಲಿರುವ ಆತ್ಮಲಿಂಗ ಪೀಠದಲ್ಲಿ ಆಸೀನರಾಗುವ ಮತ್ತು ನಂದಿಗೃಹದಲ್ಲಿನ ಪ್ರಸಾದ ವಿತರಣೆ ವಿಚಾರದಲ್ಲಿ ಉಪಾಧಿವಂತರ ಎರಡು ಬಣಗಳ ನಡುವೆ ವಿವಾದ ಏರ್ಪಟ್ಟಿದೆ. ಹೀಗಾಗಿ ಸೆಪ್ಟೆಂಬರ್ 27ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಸೂಚಿಸಿದ್ದಾರೆ. ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್

mahabaleshwar temple 2

ಈ ಸಂಬಂಧ ದೇವಸ್ಥಾನದ ಉಸ್ತುವಾರಿ ಸಮಿತಿ ಕಾರ್ಯದರ್ಶಿಯಾಗಿರುವ ಉಪ ವಿಭಾಗಾಧಿಕಾರಿ ರಾಹುಲ ಪಾಂಡೆಯವರು ಉಭಯ ಬಣಗಳ ಪ್ರತ್ಯೇಕ ಸಭೆ ನಡೆಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಉಪವಿಭಾಗಾಧಿಕಾರಿ ರಾಹುಲ ಪಾಂಡೆ, ಜಿಲ್ಲೆಯ ಎಲ್ಲ ದೇಗುಲಗಳಲ್ಲಿ ಭಕ್ತರಿಗೆ ಸೇವಾಕಾರ್ಯಗಳನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಆದರೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಎರಡು ಬಣಗಳ ನಡುವಿನ ವಿವಾದದ ಕಾರಣ ಭಕ್ತರಿಗೆ ಅವಕಾಶ ಸಿಗುತ್ತಿಲ್ಲ ಎಂದಿದ್ದಾರೆ.

mahabaleshwar temple

ದೇಗುಲ ನಿರ್ವಹಣಾ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 27ರಂದು ಸಮಿತಿಯ ಸಭೆ ನಡೆಯಲಿದೆ. ಎರಡು ಬಣಗಳ ನಡುವಿನ ವಿವಾದ, ಭಕ್ತರಿಗೆ ಪೂಜೆ ಹಾಗೂ ಸೇವೆಗೆ ವ್ಯವಸ್ಥೆ ವಿಷಯವನ್ನು ಸಭೆಯಲ್ಲಿ ಮಂಡಿಸಲಾಗುವುದು. ಸಭೆಯ ನಿರ್ಣಯದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ. ಇದನ್ನೂ ಓದಿ: MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

mahabaleshwar temple

ಸದ್ಯ ಭಕ್ತರು ಹೊರಭಾಗದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇದ್ದು, ಸ್ಥಳೀಯರು ವೈಯಕ್ತಿಕ ಪೂಜೆ ಸಲ್ಲಿಸಬಹುದಾಗಿದೆ. ಇದರಂತೆ ಸ್ಥಳೀಯರಿಗೆ ಬೆಳಗ್ಗೆ 6 ರಿಂದ 11 ಹಾಗೂ ಅಪರಾಹ್ನ 5 ರಿಂದ ರಾತ್ರಿ 7 ರವರೆಗೆ ಪೂಜೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಉಪಾದೀವಂತ ಪಂಗಡದ ಗುದ್ದಾಟದಿಂದಾಗಿ ಹೊರಭಾಗದಿಂದ ಬರುವ ಭಕ್ತರಿಗೆ ಆತ್ಮಲಿಂಗ ಸ್ಪರ್ಶ ಪೂಜೆ, ಪ್ರಸಾದಗಳಿಗೆ ಅವಕಾಶ ಮಾಡಿಕೊಡಲಾಗಿಲ್ಲ. ಇನ್ನೂ ದೇವಸ್ಥಾನದಲ್ಲಿ ಅಹಿತಕರ ಘಟನೆ ನಡೆಯದಂತೆ ಪೂಲೀಸರ ನಿಯೋಜನೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *