Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡವರು, ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ಹೊರಗಿಡಲಾಗಿದೆ – ಮತದಾರರ ಪರಿಷ್ಕರಣೆಗೆ ಖರ್ಗೆ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಡವರು, ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ಹೊರಗಿಡಲಾಗಿದೆ – ಮತದಾರರ ಪರಿಷ್ಕರಣೆಗೆ ಖರ್ಗೆ ಆಕ್ಷೇಪ

Latest

ಬಡವರು, ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ಹೊರಗಿಡಲಾಗಿದೆ – ಮತದಾರರ ಪರಿಷ್ಕರಣೆಗೆ ಖರ್ಗೆ ಆಕ್ಷೇಪ

Public TV
Last updated: August 2, 2025 4:48 pm
Public TV
Share
3 Min Read
Mallikarjun Kharge 2
SHARE

ನವದೆಹಲಿ: ಕೇಂದ್ರ ಚುನಾವಣಾ ಆಯೋಗ (Election Commission Of India) ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯದವರನ್ನು ಚುನಾವಣಾ ಪ್ರಕ್ರಿಯೆಯಿಂದ ಉದ್ದೇಶಪೂರ್ವಕವಾಗಿ ಹೊರಗಿಡಲಾಗಿದೆ ಎಂದು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಟೀಕಿಸಿದ್ದಾರೆ.

ದೆಹಲಿಯಲ್ಲಿ ವಾರ್ಷಿಕ ಕಾನೂನು ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಕೆಲವು ಕ್ರಮಗಳು ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮತದಾನದ ಹಕ್ಕನ್ನು ನಿರಾಕರಿಸುವಂತಿವೆ ಎಂದು ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಕೆಲವು ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿದೆ. ಇದು ಜನಾಂಗೀಯ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

ಮತದಾರರ ಪಟ್ಟಿಯ ನೋಂದಣಿ ಮತ್ತು ತಿದ್ದುಪಡಿ ಪ್ರಕ್ರಿಯೆಯಲ್ಲಿ ತಾರತಮ್ಯದ ನೀತಿಗಳನ್ನು ಅನುಸರಿಸಲಾಗುತ್ತಿದೆ, ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಕೊರತೆ ಇದೆ ಎಂದು ದೂರಿರುವ ಅವರು, ಈ ಕ್ರಮಗಳಿಂದ ದೇಶದ ಚುನಾವಣಾ ವ್ಯವಸ್ಥೆ ಮೇಲಿನ ನಂಬಿಕೆ ಕುಸಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಪರಂಪರೆ ವೈಭವ ಸಾರುವ ʻದಿ ಒರಿಜಿನಲ್‌ ಆಭರಣʼ ಜುವೆಲ್ಲರ್ಸ್‌ ಮಳಿಗೆ ಉದ್ಘಾಟನೆ

ELECTION COMMISSION OF INDIA

ಸಂವಿಧಾನ ಒಂದು ಪುಸ್ತಕ ಅಲ್ಲ, ಅದು ಪ್ರಜಾಪ್ರಭುತ್ವ ವ್ಯವಸ್ಥೆಯ ಆತ್ಮ, ಎಲ್ಲರಿಗೂ ಅಧಿಕಾರ ನೀಡುವ ಶಕ್ತಿ ಹೊಂದಿದೆ. ಆದರೆ ಸಂವಿಧಾನ ಈಗ ಅಪಾಯದಲ್ಲಿದೆ. ಅಧಿಕಾರದಲ್ಲಿರುವ ನಾಯಕರು ಸಂವಿಧಾನ ಬದಲಿಸುವ ಉದ್ದೇಶ ಹೊಂದಿದ್ದಾರೆ. ಸಮಾಜವಾದ, ಜಾತ್ಯತೀತವಾದ ಪದ ಪೀಠಿಕೆಯಿಂದ ಬದಲಿಸುವ ಉದ್ದೇಶ ಬಿಜೆಪಿ, ಆರ್‌ಎಸ್‌ಎಸ್ ಹೊಂದಿದೆ. ಆದರೆ ಅವರಿಗೆ ದೇಶದ ಜನರು ಲೋಕಸಭೆ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ. ಇದರ ಕ್ರೆಡಿಟ್ ರಾಹುಲ್ ಗಾಂಧಿ (Rahul Gandhi) ಅವರಿಗೆ ನೀಡಬೇಕು ಎಂದರು. ಇದನ್ನೂ ಓದಿ: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಸಂವಿಧಾನದಲ್ಲಿ ಸಮಾಜವಾದ, ಜಾತ್ಯತೀತವಾದ ಪದ ತೆಗೆಯಲು ಹೊರಟವರು ಅವರ ಪಕ್ಷದ ಸಂವಿಧಾನದಲ್ಲಿ ಸಮಾಜವಾದ, ಜಾತ್ಯತೀತವಾದ ಪದ ಬಳಸಿದ್ದಾರೆ. ಸಮಾಜವಾದ, ಜಾತ್ಯತೀತವಾದ ಪದ ತೆಗೆಯಲು ಅವರಿಗೆ ಸಾಧ್ಯವಿಲ್ಲ. ಎಲ್ಲವನ್ನೂ ನಿಯಂತ್ರಣ ಮಾಡಲು ಪ್ರಯತ್ನಿಸುವುದು ಸರ್ವಾಧಿಕಾರದ ಪ್ರವೃತ್ತಿ. ಕೆಲ ನ್ಯಾಯಧೀಶರು ಒಂದು ಧರ್ಮದ ಬಗ್ಗೆ ಮಾತನಾಡುತ್ತಾರೆ. ಅಂಥವರು ಆರ್‌ಎಸ್‌ಎಸ್ ನ್ಯಾಯಾಧೀಶರು, ದೇಶದ ಪ್ರಧಾನಿ ಸದಾ ದೇಶದ ಜನರನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸಂವಿಧಾನ ಪಾಲನೆಗೆ ಅವರನ್ನು ಆಯ್ಕೆ ಮಾಡಿದರೆ, ಅವರು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದಾರೆ, ಕರ್ನಾಟಕದ ಬೆಂಗಳೂರು ಸೆಂಟ್ರಲ್‌ನಲ್ಲಿ ಮತದಾರರು ಹೇಗೆ ಬದಲಾದರು ಇದು ಚುನಾವಣಾ ಆಯೋಗವಾ ಅಥಾವ ಮೋದಿ ಸರ್ಕಾರದ ಗಿಣಿಯೇ? ಬಿಹಾರದಲ್ಲಿ 65% ಮತದಾರರನ್ನು ತೆಗೆದು ಹಾಕಲಾಗಿದೆ. ಇದನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಹಾರ ಚುನಾವಣಾ ಕರಡು ಪಟ್ಟಿಯಲ್ಲಿ ನನ್ನ ಹೆಸರಿಲ್ಲ, ಚುನಾವಣೆಗೆ ಸ್ಪರ್ಧಿಸೋದು ಹೇಗೆ..?: ತೇಜಸ್ವಿ ಯಾದವ್ ಆರೋಪ

ಪ್ರಧಾನಿ ಮೋದಿ ಸಂಸತ್‌ಗೆ ಬಂದು ಕಲಾಪವನ್ನು ಟಿವಿಯಲ್ಲಿ ನೋಡುತ್ತಾರೆ, ಅವರಿಗೇನು ಭಯ? ನೇರ ಬಂದು ಕಲಾಪದಲ್ಲಿ ಭಾಗಿಯಾಗಬಹುದಲ್ವ? ಅವರು ನಮ್ಮ ನಾಯಕರು ತಲೆ ಬಾಗಬಾರದು. ಡೊನಾಲ್ಡ್ ಟ್ರಂಪ್ ಮುಂದೆಯೂ ತಲೆ ಬಾಗಬಾರದು. ನಮ್ಮ ಸಂಖ್ಯೆ ಸಂಸತ್‌ನಲ್ಲಿ ಕಡಿಮೆ ಇದೆ ಎಂದು ನಮ್ಮನ್ನು ಹೆದರಿಸುತ್ತಿದ್ದಾರೆ, ಆದರೆ ಟ್ರಂಪ್ ಮುಂದೆ ತಲೆ ಬಗ್ಗಿಸುತ್ತಿದ್ದಾರೆ. ದೇಶದ ಘನತೆ ಹಾಳುಗೆಡವುತ್ತಿದ್ದಾರೆ. ಶ್ರಾವಣ ಇರುವ ಕಾರಣ ಮೋದಿ ಮೌನ ವೃತದಲ್ಲಿರಬೇಕು, ಅದಕ್ಕೆ ಅವರು ಮಾತನಾಡುತ್ತಿಲ್ಲ, ಬಹುಶಃ ಸಂಸತ್ ಅಧಿವೇಶನ ಅಂತ್ಯವಾಗುವವರೆಗೂ ಮೌನ ವೃತದಲ್ಲಿರುತ್ತಾರೆ. ದೇವರಿಂದ ಬಂದವರಲ್ವ ಅದಕ್ಕೆ ಮೌನ ವೃತ ಎಂದು ಪ್ರಧಾನಿ ಮೋದಿಯನ್ನು ವ್ಯಂಗ್ಯವಾಡಿದರು. ಇದನ್ನೂ ಓದಿ: ಚುನಾವಣಾ ಆಯೋಗ ಸಂಪೂರ್ಣ ಸತ್ತು ಹೋಗಿದ್ದು, ತನ್ನ ಸ್ವಾಯತ್ತತೆ ಕಳೆದುಕೊಂಡಿದೆ: ರಾಹುಲ್ ಗಾಂಧಿ

ಮಾಜಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಬಗ್ಗೆ ಪ್ರಸ್ತಾಪಿಸಿದ ಅವರು, ಸದನದಲ್ಲಿ ಪ್ರತಿಪಕ್ಷಗಳ ಮಾತನಾಡುವ ಹಕ್ಕನ್ನು ಹತ್ತಿಕ್ಕುತ್ತಿದ್ದರು. ಆದರೆ ಅವರು ಮುಕ್ತವಾಗಿ ಮಾತನಾಡಲು ಪ್ರಾರಂಭಿಸಿದಾಗ ಮತ್ತು ಅವರು ಒಂದು ಕಾಲದಲ್ಲಿ ಬಲವಾಗಿ ಸಮರ್ಥಿಸಿಕೊಂಡಿದ್ದ ಕೇಂದ್ರದೊಂದಿಗೆ ವಿವಿಧ ವಿಷಯಗಳ ಬಗ್ಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರಾಕರಿಸಿದಾಗ ಸ್ವತಃ ಕೊಡಲಿ ಪೆಟ್ಟು ಬೀಳುವ ಶಿಕ್ಷೆಯನ್ನು ಎದುರಿಸಿದರು ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಮೊದಲ ಬಾರಿ ಅಂಗಾಂಗ ಸಾಗಾಟ – ತುರ್ತು ಕಸಿಗಾಗಿ ಯಕೃತ್ ಸಾಗಣೆ

ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಿರ್ಣಯವನ್ನು ಹಿಂಪಡೆಯಲು ವಿರೋಧ ಪಕ್ಷದ ಸದಸ್ಯರು ಮಾಜಿ ರಾಜ್ಯಸಭೆಯ ಅಧ್ಯಕ್ಷರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಒತ್ತಡ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದರು. ಅವರಿಗೆ ನಿರ್ಣಯವನ್ನು ಹಿಂತೆಗೆದುಕೊಳ್ಳಿ ಅಥವಾ ರಾಜೀನಾಮೆ ನೀಡಿ ಎಂದು ಬೆದರಿಕೆ ಹಾಕಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

TAGGED:bjpcongressElection Commission of Indiamallikarjun khargeNew Delhiಕಾಂಗ್ರೆಸ್ಕೇಂದ್ರ ಚುನಾವಣಾ ಆಯೋಗನವದೆಹಲಿಬಿಜೆಪಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
5 hours ago
Rehan Ahmed Will Jacks
Cricket

16 ಎಸೆತಗಳಲ್ಲಿ 44 ರನ್‌ – ಇಂಗ್ಲೆಂಡಿಗೆ ರೋಚಕ ಜಯ, ಸೋತರೂ ನ್ಯೂಜಿಲೆಂಡಿಗಿದೆ ಸೆಮಿ ಅವಕಾಶ

Public TV
By Public TV
6 hours ago
temple theft
Chamarajanagar

ಗುಂಡ್ಲುಪೇಟೆ ತಾಲೂಕಿನ 6 ದೇವಸ್ಥಾನಗಳಲ್ಲಿ ಕಳವು

Public TV
By Public TV
6 hours ago
Hindu activist fatally attacked by Muslim youths in Napoklu Madikeri
Districts

ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

Public TV
By Public TV
7 hours ago
Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
8 hours ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?