Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರಿಯ ಯೋಜನೆಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ: ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಪ್ರಿಯ ಯೋಜನೆಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ: ಬಿಎಸ್‍ವೈ

Bengaluru City

ಜನಪ್ರಿಯ ಯೋಜನೆಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ: ಬಿಎಸ್‍ವೈ

Public TV
Last updated: August 17, 2019 3:55 pm
Public TV
Share
2 Min Read
CM BSY
SHARE

ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿದ್ದ ಯೋಜನೆಗಳಿಗೆ ಬಿ.ಎಸ್.ಯಡಿಯೂರಪ್ಪ ಬ್ರೇಕ್ ಹಾಕಲಿದ್ದಾರೆ. ಈ ಮೂಲಕ ಅನೇಕ ಯೋಜನೆಗಳು ರದ್ದು ಆಗಲಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿತ್ತು. ಇದನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿಗಳು ಜನಪರ ಯೋಜನೆಗಳನ್ನು ಮುಂದುವರಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ಯ ಭಾಗ್ಯಯೋಜನೆಯನ್ನು ಕೂಡ ರದ್ದು ಮಾಡುವುದಿಲ್ಲ. ಈ ಯೋಜನೆ ಮುಂದುವರಿಸಲು ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆ ಕಡತಕ್ಕೆ ಈಗಾಗಲೇ ಸಹಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.

ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ. pic.twitter.com/WMXt9QfGdC

— CM of Karnataka (@CMofKarnataka) August 17, 2019

ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಅನ್ನಭಾಗ್ಯದ ಅಕ್ಕಿಯನ್ನು ಕಡಿತಗೊಳಿಸಿ ಆ ಹಣವನ್ನು ಕೃಷಿ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಬಂದಿದೆ. ಒಂದು ವೇಳೆ ಸರ್ಕಾರ ಇಂತಹ ನಿರ್ಧಾರ ಕೈಗೊಂಡಲ್ಲಿ ಸದನದ ಹೊರಗೆ ಹಾಗೂ ಒಳಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಬಡತನ ರೇಖೆಗಿಂತ ಕೆಳಗಿದ್ದ 4 ಕೋಟಿ ಬಡವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆದರೆ ಬಿಜೆಪಿ ಸರ್ಕಾರ ಅನ್ನಭಾಗ್ಯದ ಯೋಜನೆ ಅಡಿ ನೀಡುವ ಅಕ್ಕಿಯನ್ನು 7 ಕೆ.ಜಿ.ಗಿಂತ ಕಡಿಮೆ ಮಾಡುವ ಕುರಿತು ಚರ್ಚೆ ನಡೆಸಿದೆ. ಅನ್ನಭಾಗ್ಯದಲ್ಲಿ ಉಳಿದ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಲು ಮುಂದಾಗಿದೆ. ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ. ನೀಡಲಿ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ ಬಡವರ ಅಕ್ಕಿ ಕಡಿತ ಮಾಡಿ ಹಣ ಕೊಡುವುದು ಬಡವರ ವಿರೋಧಿ ಚಿಂತನೆ ಆಗಿದೆ ಎಂದು ಕಿಡಿಕಾರಿದ್ದರು.

ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ.#MyPressconference

— Siddaramaiah (@siddaramaiah) August 17, 2019

ಇಂದಿರಾ ಕ್ಯಾಂಟೀನ್‍ನಲ್ಲೂ ಗುಣಮಟ್ಟದ ಆಹಾರ ಸಿಗಬೇಕು. ಅದರ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಬೇಕು. ಇದು ಸಹ ಬಡವರಿಗೆ, ಹಸಿದವರಿಗೆ ರಿಯಾಯಿತಿ ದರದಲ್ಲಿ ಮಾಡಿದ ಕಾರ್ಯಕ್ರಮ. ಬೆಂಗಳೂರಿನ ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚುವರಿ ಇಂದಿರಾ ಕ್ಯಾಂಟೀನ್ ಆಗಬೇಕಿದೆ. ಇಂದಿರಾ ಕ್ಯಾಂಟೀನ್‍ಗೆ ಸರ್ಕಾರದಿಂದ ಹಣ ನೀಡಲು ಆಗಲ್ಲ. ನೀವೇ ಮಾಡಿಕೊಳ್ಳಿ ಎಂದು ಬಿಬಿಎಂಪಿಗೆ ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್ ಯೋಜನೆಗೆ 200 ಕೋಟಿ ರೂ.ಗಳೂ ಖರ್ಚಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದ ಇದು ನಿರಂತರವಾಗಿ ನೆಡೆಯಬೇಕು ಎಂದು ಆಗ್ರಹಿಸಿದರು.

2.30 ಲಕ್ಷ ಕೋಟಿ ರೂ. ರಾಜ್ಯದ ಬಜೆಟ್ ಇದೆ. ಕಾಲೇಜು ವಿಧ್ಯಾರ್ಥಿಗಳಿಗೆ, ಆಸ್ಪತ್ರೆಗಳ ಕಡೆ ಇದು ತುಂಬಾ ಅನುಕೂಲ ಆಗಿದೆ. ಜೊತೆಗೆ ಕಾಲೇಜು, ಆಸ್ಪತ್ರೆಗಳ ಕಡೆ ಈ ಯೋಜನೆ ಮುಂದುವರೆಸಿ ಎಂದು ಬೇಡಿಕೆ ಹೆಚ್ಚಿದೆ. ಹೀಗಾಗಿ ಅನ್ನಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್ ಯೋಜನೆ ಬಿಟ್ಟರೆ ನಾನು ಸುಮ್ಮನಿರಲ್ಲ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಎಚ್ಚರಿಸಿದ್ದರು.

ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ.
ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ.

— Siddaramaiah (@siddaramaiah) August 17, 2019

TAGGED:anna bhagyabjpbs yeddyurappacongressIndira CanteenPublic TVsiddaramaiahಅನ್ನಭಾಗ್ಯಇಂದಿರಾ ಕ್ಯಾಂಟೀನ್ಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
11 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
23 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
42 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
55 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?