ನವದೆಹಲಿ: 2024 ರಲ್ಲಿ ಪುಣೆ ಪೋರ್ಷೆ ಅಪಘಾತದಲ್ಲಿ (Porsche crash) ಟೆಕ್ಕಿಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯ ರಕ್ತದ ಮಾದರಿಗಳನ್ನು ಬದಲಿಸಿದ್ದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ (Supreme Court) ಜಾಮೀನು ನೀಡಿದೆ.
ಆರೋಪಿಗಳಾದ ಆದಿತ್ಯ ಅವಿನಾಶ್ ಸೂದ್, ಆಶಿಶ್ ಸತೀಶ್ ಮಿತ್ತಲ್ ಮತ್ತು ಅಮರ್ ಸಂತೋಷ್ ಗಾಯಕ್ವಾಡ್ಗೆ ಜಾಮಿನು ದೊರೆತಿದೆ. ಈ ಮೂವರನ್ನು ಕಾರು ಚಲಾಯಿಸುತ್ತಿದ್ದ ಅಪ್ರಾಪ್ತನ ರಕ್ತದ ಮಾದರಿ ಬದಲಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಇದನ್ನೂ ಓದಿ: ಪುಣೆ ಪೋರ್ಷೆ ಕೇಸ್; ಆರೋಪಿಯ ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ – ಬಾಲ ನ್ಯಾಯ ಮಂಡಳಿ

ಜಾಮೀನು ಅರ್ಜಿ ವಿಚಾರಣೆ ವೇಳೆ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅರ್ಜಿದಾರರು ಮೂರು ವರ್ಷಗಳ ಕಾಲ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಸಾಕ್ಷಿಗಳ ಸಂಖ್ಯೆಯನ್ನು ಹೆಚ್ಚಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದೆ. ಈ ವಿಷಯದಲ್ಲಿ ಇನ್ನೂ 159 ಸಾಕ್ಷಿಗಳನ್ನು ವಿಚಾರಣೆ ನಡೆಸಬೇಕಾಗಿದೆ.
ಅಪಘಾತಕ್ಕೆ ಕಾರಣನಾದ ಅಪ್ರಾಪ್ತನ ವಿರುದ್ಧ ವಿಚಾರಣೆ ನಡೆಸಲಾಗುತ್ತಿದೆ. ಹೀಗಾಗಿ, ವಿಚಾರಣೆಯಲ್ಲಿ ಯಾವುದೇ ಪ್ರಗತಿಯಿಲ್ಲದಿದ್ದರೂ ಮತ್ತು ನೂರಕ್ಕೂ ಹೆಚ್ಚು ಪ್ರಾಸಿಕ್ಯೂಷನ್ ಸಾಕ್ಷಿಗಳ ಕಾರಣದಿಂದಾಗಿ ಪ್ರಕರಣ ಬಗೆಹರಿಯುವುದು ವಿಳಂಬವಾಗುವ ಸಾಧ್ಯತೆಯಿದೆ. ಆದ್ದರಿಂದ ಮೇಲ್ಮನವಿದಾರರನ್ನು ನಿರಂತರವಾಗಿ ಜೈಲಿನಲ್ಲಿಡುವುದು ಸರಿಯಲ್ಲ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.
ಏನಿದು ಪ್ರಕರಣ?
2024 ರಲ್ಲಿ ಪುಣೆಯಲ್ಲಿ ಈ ಅಪಘಾತ ನಡೆದಿತ್ತು. ಅಪಘಾತ ನಡೆದಾಗ ಆರೋಪಿ 17 ವರ್ಷದವನಾಗಿದ್ದ. ಕುಡಿದ ಮತ್ತಿನಲ್ಲಿ ಐಷಾರಾಮಿ ಸ್ಪೋರ್ಟ್ಸ್ ಕಾರನ್ನು ಚಲಾಯಿಸಿ ಸ್ಕೂಟರ್ನಲ್ಲಿದ್ದ ಇಬ್ಬರ ಸಾವಿಗೆ ಕಾರಣನಾಗಿದ್ದ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಬಾಲ ನ್ಯಾಯ ಮಂಡಳಿಯು ಅಪ್ರಾಪ್ತ ಆರೋಪಿಗೆ ಜಾಮೀನು ನೀಡಿ, 15 ದಿನಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಲು, ರಸ್ತೆ ಅಪಘಾತಗಳ ಕುರಿತು 300 ಪದಗಳ ಪ್ರಬಂಧ ಬರೆಯಲು ಸೂಚಿಸಿತ್ತು. ಅಲ್ಲದೇ ಮದ್ಯಪಾನ ವ್ಯಸನಕ್ಕೆ ಚಿಕಿತ್ಸೆ ಪಡೆಯಲು ಮತ್ತು ಕೌನ್ಸೆಲಿಂಗ್ ತೆಗೆದುಕೊಳ್ಳಲು ನಿರ್ದೇಶಿಸಿತ್ತು. ಈ ನಿರ್ಧಾರವು ದೇಶಾದ್ಯಂತ ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.
ಪ್ರಕರಣದ ತನಿಖೆ ವೇಳೆ ಸೂದ್ ಮತ್ತು ಮಿತ್ತಲ್ ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗಳಿಗೆ ಬಳಸಿ, ಕಾರಲ್ಲಿದ್ದ ಇಬ್ಬರನ್ನು ಬಚಾವ್ ಮಡಲು ಯತ್ನಿಸಲಾಗಿತ್ತು. ಇದು ಪೊಲೀಸರಿಗೆ ತಿಳಿದು ಅವರನ್ನು ಬಂಧಿಸಿದ್ದರು. ಕಳೆದ ವರ್ಷ ಡಿಸೆಂಬರ್ನಲ್ಲಿ ಬಾಂಬೆ ಹೈಕೋರ್ಟ್ ಸೂದ್ ಮತ್ತು ಮಿತ್ತಲ್ ಇತರ ಆರು ಜನರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು. ಇದನ್ನೂ ಓದಿ: ಪುಣೆ ಅಪಘಾತ ಕೇಸ್ – ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಿ ಮೃತರ ಪೋಷಕರ ಒತ್ತಾಯ

