ಚಿತ್ರದುರ್ಗ: ಅತ್ಯಾಚಾರ ಆರೋಪ ಪ್ರಕರಣವೊಂದು ರಾಜಕೀಯ ಸ್ವರೂಪ ಪಡೆದು ಹಿಂಸೆಗೆ ತಿರುಗಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.
ಅಪ್ರಾಪ್ತ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಕಾಂಗ್ರೆಸ್ ನಾಯಕಿ ಮುನಿರಾ ಎಂಬವರು ಪೊಲೀಸರ ಮೇಲೆ ಕಲ್ಲು ತೂರುವಂತೆ ಪ್ರತಿಭಟನಾಗಾರರಿಗೆ ಪ್ರಚೋದಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
- Advertisement 2
- Advertisement 3
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 200ಕ್ಕೂ ಹೆಚ್ಚು ಯುವಕರು ಪೊಲೀಸರ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆಗ ಇನ್ನಷ್ಟು ಆಕ್ರೋಶಗೊಂಡ ಯುವಕರು, ಸರ್ಕಾರಿ ಬಸ್, ಆಂಬ್ಯುಲನ್ಸ್, ಪೊಲೀಸರ ವಾಹನ, ಬೈಕ್ಗಳ ಮೇಲೆ ಕಲ್ಲುಗಳನ್ನು ತೂರಿದ್ದಾರೆ.
- Advertisement 4
ಪ್ರಚೋದನೆ ನೀಡಿದ್ದ ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಮುನಿರಾ ಸೇರಿದಂತೆ 150ಕ್ಕೂ ಹೆಚ್ಚು ಜನರನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.