ದೊಡ್ಡ ಗೌಡರಿಗೆ ಸ್ನಾಯು ಸೆಳೆತ- ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

Public TV
1 Min Read
devegowda

ಬೆಂಗಳೂರು: ದೆಹಲಿಯಿಂದ ಶುಕ್ರವಾರವಷ್ಟೇ ವಾಪಾಸ್ಸಾಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಇಂದು ಸ್ನಾಯು ಸೆಳೆತವಾಗಿ ಕಾಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.

ದೆಹಲಿಯಿಂದ ತಮ್ಮ ನಿವಾಸಕ್ಕೆ ನಿನ್ನೆ ರಾತ್ರಿ ಮಾಜಿ ಪ್ರಧಾನಿ ದೇವೇಗೌಡರು ವಾಪಾಸ್ಸಾಗಿದ್ದರು. ಇಂದು ಬೆಳಗ್ಗೆ ಕೊಠಡಿ ಬಳಿ ದೇವೇಗೌಡರು ಹೋಗುತ್ತಿದ್ದ ವೇಳೆ ಕಾಲು ಎಡವಿದ್ದರಿಂದ ಅವರ ಕಾಲಿಗೆ ಏಟಾಗಿದ್ದು, ಕಾಲು ಊದಿಕೊಂಡಿದೆ. ಅಲ್ಲದೆ ಸ್ನಾಯು ನೋವು ಕಾಣಿಸಿಕೊಂಡಿದ್ದು, ಮಧ್ಯಾಹ್ನದ ವೇಳೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ ಎಂಬುದಾಗಿ ತಿಳಿದುಬಂದಿದೆ.

vlcsnap 2018 11 18 16h23m22s502

ಕಾಲು ನೋವಿನ ನಡುವೆಯೂ ಜನರಿಗೆ ಬೇಸರ ಆಗಬಾರದೆಂದು ತಮ್ಮ ನಿವಾಸಕ್ಕೆ ಬಂದಿರುವ ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ. ಜನರ ಬಳಿ ಮಾತನಾಡಿದ ಬಳಿಕ ದೇವೇಗೌಡರು ಮಧ್ಯಾಹ್ನ ಸುಮಾರು 12 ಗಂಟೆ ಬಳಿಕ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಲಿದ್ದಾರೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *