ಡಿಎಪಿ, ಪೊಟ್ಯಾಷ್‍ಗಾಗಿ ರಾಜ್ಯದಿಂದ ಕೇಂದ್ರಕ್ಕೆ ಬೊಮ್ಮಾಯಿ ಮನವಿ

1 Min Read

ನವದೆಹಲಿ: ರಾಜ್ಯದಲ್ಲಿನ ರೈತರಿಗೆ ಅನುಕೂಲ ಕಲ್ಪಿಸಲು ಹಿಂಗಾರು ಹಂಗಾಮಿಗೆ 32,000 ಟನ್ ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಗೊಬ್ಬರ ಪೂರೈಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶುಕ್ರವಾರ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿಎಪಿ ಗೊಬ್ಬರ ಸಬ್ಸಿಡಿ ಪ್ರಮಾಣ ಶೇ.140 ಏರಿಕೆ – ಕೇಂದ್ರದಿಂದ ಐತಿಹಾಸಿಕ ನಿರ್ಧಾರ 


ಡಿಎಪಿ ಮಾತ್ರವಲ್ಲದೆ, ರಾಜ್ಯಕ್ಕೆ 10,000 ಟನ್ ಪೊಟ್ಯಾಷ್ ಗೊಬ್ಬರದ ಬೇಡಿಕೆ ಇದೆ. ಅದರ ಪೂರೈಕೆಗೂ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ. ಸದ್ಯ ರಾಜ್ಯದಲ್ಲಿ ಯುರಿಯಾ ಗೊಬ್ಬರದ ಕೊರತೆ ಇಲ್ಲ. ಕೊರತೆ ಇರುವ ಗೊಬ್ಬರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿ ಮೇಲೆ ಅನುಮಾನ

ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿ ಅಗಿರುವ ಬಗ್ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಜನತೆಗೆ ಮೊದಲ ಹಂತದ ಲಸಿಕೆಯನ್ನೂ, ಶೇ 70ರಷ್ಟು ಅರ್ಹರಿಗೆ ಎರಡನೇ ಹಂತದ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ಈಗ ರಾಜ್ಯದಲ್ಲಿ 51 ಲಕ್ಷ ಡೋಸ್ ಲಸಿಕೆ ಸಂಗ್ರಹ ಇದೆ ಎಂದೂ ಅವರು ವಿವರಿಸಿದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ

Share This Article
Leave a Comment

Leave a Reply

Your email address will not be published. Required fields are marked *