Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ – ನಿರ್ವಹಣೆಗಿಳಿದ ಬೆಸ್ಕಾಂ ಎಂಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ – ನಿರ್ವಹಣೆಗಿಳಿದ ಬೆಸ್ಕಾಂ ಎಂಡಿ

Bengaluru City

ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ – ನಿರ್ವಹಣೆಗಿಳಿದ ಬೆಸ್ಕಾಂ ಎಂಡಿ

Public TV
Last updated: May 18, 2022 7:30 pm
Public TV
Share
3 Min Read
bengaluru electricity
SHARE

ಬೆಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆಲವಡೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಆಗಿದೆ. ನಿನ್ನೆ ರಾತ್ರಿಯಿಂದಲೇ ವಿದ್ಯುತ್ ಪೂರೈಕೆ ಸರಿಪಡಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ ರಾಜೇಂದ್ರ ಚೋಳನ್ ಖುದ್ದು ಕಾರ್ಯಚರಣೆಗಿಳಿದರು.

ಮಂಗಳವಾರ ರಾತ್ರಿ ಬೆಸ್ಕಾಂನ ಎಲ್ಲಾ ಮುಖ್ಯ ಇಂಜಿನಿಯರ್, ಅಧೀಕ್ಷಕ ಇಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ಪರಿಸ್ಥಿತಿ ನಿಭಾಯಿಸಲು ಸೂಚನೆ ನೀಡಿದ ಅವರು, ವಿದ್ಯುತ್ ವ್ಯತ್ಯಯದ ಕುರಿತು ಮೇಲ್ವಿಚರಣೆ ಹಾಗೂ ಕಾಮಗಾರಿ ಮೇಲೆ ನಿಗಾವಹಿಸಿದರು. ಬೆಸ್ಕಾಂ ಎಂಡಿ ಖುದ್ದು ನಿರ್ವಹಣೆಯಿಂದಾಗಿ ಮಂಗಳವಾರ ರಾತ್ರಿಯೇ ವಿದ್ಯುತ್ ವ್ಯತ್ಯಯವನ್ನು ಕೆಲವಡೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿತ್ತು.

bescom 2

ಇದರ ಮುಂದುವರಿದ ಭಾಗವಾಗಿ, ರಾಜೇಂದ್ರ ಚೋಳನ್ ಕೆಂಗೇರಿ, ರಾಜರಾಜೇಶ್ವರಿ ನಗರ, ಕೋರಮಂಗಲ, ಹೆಚ್‌ಎಸ್‌ಆರ್ ಬಡಾವಣೆ ಹಾಗೂ ಇಂದಿರಾನಗರ ಬೆಸ್ಕಾಂ ವಲಯಗಳಿಗೆ ಬುಧವಾರ ಖುದ್ದು ಭೇಟಿ ನೀಡಿ ವಿದ್ಯುತ್ ಪೂರೈಕೆ ಸರಿಪಡಿಸುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಸಾರ್ವಜನಿಕರ ಜೊತೆ ಮಾತುಕತೆ ನಡೆಸಿದರು. ಭಾರೀ ಮಳೆ ಇದ್ದರೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದ ರೀತಿ ಕ್ರಮ ವಹಿಸಿದ ಬೆಸ್ಕಾಂ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯುತ್ ಪೂರೈಕೆಯಲ್ಲಾಗಿರುವ ಅಡಚಣೆ ಹಾಗೂ ಅದನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ವಹಿಸಿರುವ ಕ್ರಮಗಳ ಕುರಿತು ಬೆಸ್ಕಾಂ ಎಂಡಿ ಮೇಲ್ವಿಚಾರಣೆ ಮಾಡಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ರಾಜರಾಜೇಶ್ವರಿ ನಗರದ ಕೆಂಚನಹಳ್ಳಿ ಸಮೀಪದ ಅಪಾರ್ಟ್ಮೆಂಟ್ ಒಂದರ ನಿವಾಸಿಗಳ ಜತೆ ಬೆಸ್ಕಾಂ ಎಂಡಿ ಮಾತುಕತೆ ನಡೆಸಿದರು. ಭಾರೀ ಮಳೆಯಿಂದಾಗಿ ಅಪಾರ್ಟ್ಮೆಂಟ್ ಜಲಾವೃತವಾಗಿತ್ತು. ಕೆಂಚನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯ ಸರಿಪಡಿಸುವ ಕಾಮಗಾರಿಯ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

electricity power bescom

ಇಂದಿರಾನಗರದ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಯಾಗಿದ್ದ ವಿದ್ಯುತ್ ಮಾರ್ಗದ ಮರುಸ್ಥಾಪನೆ ಕಾಮಗಾರಿಯನ್ನು ರಾಜೇಂದ್ರ ಚೋಳನ್ ವೀಕ್ಷಿಸಿದರು. ಭಾರೀ ಮಳೆಯಿದ್ದರೂ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಂಡ ಬೆಸ್ಕಾಂ ಕ್ರಮಕ್ಕೆ ಹೆಚ್‌ಎಸ್‌ಆರ್ ಬಡಾವಣೆಯ ನಿವಾಸಿಗಳು ಎಂಡಿ ಅವರನ್ನು ಶ್ಲಾಘಿಸಿದರು. ಮಳೆಯಿಂದಾದ ನಿಖರ ಹಾನಿ ಮತ್ತು ವಿದ್ಯುತ್ ವ್ಯತ್ಯಯ ಕುರಿತು ಬೆಸ್ಕಾಂ ಎಂಡಿ ಬೆಸ್ಕಾಂ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಜೊತೆಗೆ ವಿದ್ಯುತ್ ವ್ಯತ್ಯಯನ್ನು ಸರಿಪಡಿಸಿ, ವಿದ್ಯುತ್ ಪೂರೈಕೆಯನ್ನು ಪುನರ್ ಸ್ಥಾಪಿಸಿರುವ ಪ್ರದೇಶಗಳ ಮಾಹಿತಿ ಪಡೆದರು.

ಮಳೆಯ ನಡುವೆಯೇ, ಬೆಸ್ಕಾಂ ಸಿಬ್ಬಂದಿ ಮಂಗಳವಾರ ರಾತ್ರಿ ಇಡೀ ಕಾರ್ಯಚರಣೆ ನಡೆಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಂಡಿರುವ ಬೆಸ್ಕಾಂ ಲೈನ್ ಮ್ಯಾನ್‌ಗಳ ಕಾರ್ಯವನ್ನು ರಾಜೇಂದ್ರ ಚೋಳನ್ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಲೈನ್ ಮ್ಯಾನ್ ಸಿಬ್ಬಂದಿ ಜೊತೆಗೆ ಮಾತುಕತೆ ನಡೆಸಿದ ಅವರು, ಸುರಕ್ಷತಾ ಕ್ರಮಗಳನ್ನು ಬಳಸಿಕೊಂಡು ಸೇವೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. ಭಾರೀ ಮಳೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದ್ದು, ನಿನ್ನೆ ರಾತ್ರಿಯೇ ಕೆಲವಡೆ ಸಂಪರ್ಕ ಮರು ಸ್ಥಾಪಿಸಲಾಗಿದ್ದು, ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ವಿದ್ಯುತ್ ಸಂಪರ್ಕ ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಶೇ.28 ಜಿಎಸ್‌ಟಿ

electricity bescom power

ವಿದ್ಯುತ್ ವ್ಯತ್ಯಯ ವಿವರ:
ಭಾರೀ ಮಳೆ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ 1912ಗೆ ಮಂಗಳವಾರ ರಾತ್ರಿ 13,734 ಕರೆಗಳು ಬಂದಿದ್ದು, ಈ ಪೈಕಿ 13,165 ಕರೆಗಳು ಪವರ್ ಕಟ್‌ಗೆ ಸಂಬಂಧಿಸಿವೆ. ಬೆಂಗಳೂರು ನಗರ ಜಿಲ್ಲೆಯ ಬೆಸ್ಕಾಂ ವಿಭಾಗದಲ್ಲಿ ಒಟ್ಟು 107 ಫೀಡರ್‌ಗಳು ತೊಂದರೆಗೊಳಗಾಗಿವೆ. ಮಲ್ಲೇಶ್ವರಂ 12, ಹೆಬ್ಬಾಳ 13, ಕೆಂಗೇರಿ 7, ರಾಜಾಜಿನಗರ 4, ಪೀಣ್ಯ 4, ರಾಜರಾಜೇಶ್ವರಿನಗರ 1, ಹೆಚ್‌ಎಸ್‌ಆರ್ ಬಡಾವಣೆ 20, ಇಂದಿರಾನಗರ 4, ಜಾಲಹಳ್ಳಿ 9, ಜಯನಗರ 12, ಕೋರಮಂಗಲ 8, ಶಿವಾಜಿನಗರ 8, ವಿಧಾನಸೌಧ 2 ಹಾಗೂ ವೈಟ್ ಫಿಲ್ಡ್ನಲ್ಲಿ 3 ಫೀಡರ್‌ಗಳು ಮಳೆ, ಗುಡುಗು-ಸಿಡಿಲಿಗೆ ಟ್ರಿಪ್ ಆಗಿತ್ತು.

ಬೆಸ್ಕಾಂ ಸಿಬ್ಬಂದಿ ಬುಧವಾರ ಬೆಳಗ್ಗೆ ವೇಳೆ ಎಲ್ಲಾ ಫೀಡರ್‌ಗಳನ್ನು ದುರಸ್ಥಿ ಮಾಡಿ, ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

TAGGED:bengaluruBESCOMelectricityP Rajendra Cholanrainಪಿ ರಾಜೇಂದ್ರ ಚೋಳನ್ಬೆಂಗಳೂರುಬೆಸ್ಕಾಂಮಳೆವಿದ್ಯುತ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
3 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
4 hours ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
4 hours ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
5 hours ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
5 hours ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?