ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಪ್ರಭು ಚವ್ಹಾಣ್

Public TV
1 Min Read
bdr 3 1

ಬೀದರ್ : ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಧ್ವಜಾರೋಹಣ ಮಾಡಿದರು.

bdr1 1

ಕೊವೀಡ್ ನಿಯಮಗಳ ಪಾಲನೆಯೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ವನ್ನು ಬೀದರ್ ನ ಪೊಲೀಸ್ ಪೇರೆಡ್ ಮೈದಾನದಲ್ಲಿ ಸಚಿವ ಪ್ರಭು ಚವ್ಹಾಣ್ ನೆರವೇರಿಸಿದರು. ಧ್ವಜಾರೋಹಣದ ಬಳಿಕ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಮಾಡಿದರು. ಬಳಿಕ ಕಾರ್ಯಕ್ರಮದಲ್ಲಿ ವಿವಿಧ ಪೊಲೀಸ್ ತಂಡಗಳಿಂದ ಕವಾಯತು ನಡೆಯಿತು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವ- ರಾಯಚೂರಿನಲ್ಲಿ ಜನಪ್ರತಿನಿಧಿಗಳು ಗೈರು

bdr1

ಧ್ವಜಾರೋಹಣದ ವೇಳೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಾಸ್ಕ್ ಹಾಕದೆ ಕೊವೀಡ್ ನಿಯಮಗಳ ಉಲ್ಲಂಘನೆ ಮಾಡಿದರು. ಶಾಸಕ ರಹೀಂಖಾನ್, ಎಂ.ಎಲ್.ಸಿ ವಿಜಯ್ ಸಿಂಗ್, ಡಿಸಿ ರಾಮಚಂದ್ರನ್ ಆರ್, ಎಸ್ಪಿ ನಾಗೇಶ್ ಭಾಗಿಯಾಗಿದ್ದರು.  ಇದನ್ನೂ ಓದಿ: ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

Share This Article
Leave a Comment

Leave a Reply

Your email address will not be published. Required fields are marked *