ನವದೆಹಲಿ: ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿ, ಅವುಗಳನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ತರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), 354 (ಮಹಿಳೆಯ ಮೇಲೆ ಹಲ್ಲೆ) ಮತ್ತು 498-A (ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವ ಪತಿ ಅಥವಾ ಪತಿಯ ಸಂಬಂಧಿ) ಅಡಿಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: ಕುತುಬ್ ಮಿನಾರ್ ಮಸೀದಿಯಲ್ಲಿ ನಮಾಜ್ ತಡೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಕೋರ್ಟ್ ನಕಾರ
ಕಕ್ಷಿದಾರ ಮಹಿಳೆಯೊಬ್ಬರು ಸೆಕ್ಷನ್ 376, 354 ಮತ್ತು 498-A ಅಡಿಯಲ್ಲಿ ತನ್ನ ಮಾವನ ವಿರುದ್ಧ ದಾಖಲಿಸಿದ್ದ FIR ಅನ್ನು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ರದ್ದುಗೊಳಿಸಿದ ಈ ಅಭಿಪ್ರಾಯ ಪಟ್ಟಿದ್ದಾರೆ.
ಸಾಮಾನ್ಯವಾಗಿ IPC ಸೆಕ್ಷನ್ 376ರ ಅಡಿಯಲ್ಲಿ ದಾಖಲಿಸಲಾದ ಪ್ರಕರಣಗಳನ್ನು ರದ್ದುಗೊಳಿಸಬಾರದು, ಅವರನ್ನು ಸಮಾಜದ ವಿರುದ್ಧ ಅಪರಾಧಿಗಳೆಂದು ಪರಿಗಣಿಸಬೇಕು. ಹೀಗಿದ್ದೂ ಮಹಿಳೆಯ ಭವಿಷ್ಯದ ಮೇಲೆ ಅವಲಂಬಿತವಾದಾಗ, ಆಕೆ ತನ್ನನ್ನು ಅತ್ಯಾಚಾರ ಎಸಗಿಲ್ಲ ಎಂದು ಹೇಳಿದಾಗ ಎಫ್ಐಆರ್ ರದ್ದುಗೊಳಿಸುವುದು ನಮ್ಮ ಹಿತಾಸಕ್ತಿಯಾಗಿದೆ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಹಲವು ದೇಶಗಳಲ್ಲಿ ಬ್ಯಾನ್ : ಭಾರತದ ಹೆಸರು ಕೆಡಿಸುವ ಹುನ್ನಾರ ಎಂದ ನಿರ್ದೇಶಕ
ಐಪಿಸಿಯ ಸೆಕ್ಷನ್ 376, 377, 498-A ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಇದೇ ಸೆಕ್ಷನ್ ಅಡಿಯಲ್ಲಿ ಚಾರ್ಜ್ ಶೀಟ್ ಸಹ ಸಲ್ಲಿಸಲಾಗಿದೆ. ಆದರೆ ಅಪರಾಧ ಪ್ರಕ್ರಿಯಾ ಸಂಹಿತೆಯ (CRPC) ಸೆಕ್ಷನ್ 164ರ ಅಡಿಯಲ್ಲಿ ನೀಡಿದ ಹೇಳಿಕೆಯಲ್ಲಿ ದೂರುದಾರರು ತನ್ನ ಮಾವ ಅತ್ಯಾಚಾರ ಪ್ರಯತ್ನ ಮಾತ್ರ ಮಾಡಿದ್ದಾರೆ ಅತ್ಯಾಚಾರ ಮಾಡಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ.
ತನ್ನ ಸ್ವಂತ ಇಚ್ಛೆಯಿಂದ ಆಕೆ ರಾಜಿ ಮಾಡಿಕೊಂಡಿದ್ದಾರೆ. ಇದರಿಂದ ಎಫ್ಐಆರ್ ರದ್ದುಗೊಳಿಸಲು ಯಾವುದೇ ಅಭ್ಯಂತರವಿಲ್ಲ ಎಂದು ದೂರುದಾರರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಜೂನ್ 13 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್
ದೂರುದಾರರು ರಾಜಿ ಮಾಡಿಕೊಳ್ಳಲು 10 ಲಕ್ಷ ರೂ. ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವೀಕರಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸುವುದು ಸೂಕ್ತವೆಂದು ನ್ಯಾಯಾಲಯ ಪರಿಗಣಿಸಿತು. ಅಲ್ಲದೆ ಅರ್ಜಿದಾರರಿಗೆ ಒಂದು ವಾರದೊಳಗೆ ದೆಹಲಿ ಹೈಕೋರ್ಟ್ ವಕೀಲರ ಕಲ್ಯಾಣ ನಿಧಿಗೆ 12,500 ರೂ ಮೊತ್ತವನ್ನು ಠೇವಣಿ ಮಾಡುವಂತೆ ಸೂಚಿಸಿತು.
ಯಾವುದೇ ಪ್ರಕರಣವು ಮುಕ್ತಾಯವಾಗುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಅಲ್ಲದೆ ಇದು ವಿಚಾರಣೆಯನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಮೂರ್ತಿ ಶರ್ಮಾ ದೂರುದಾರರ ನಿಲುವನ್ನು ಶ್ಲಾಘಿಸಿದರು. ಅರ್ಜಿದಾರರ ಪರ ವಕೀಲರಾದ ಅಭಿಷೇಕ್ ಶರ್ಮಾ, ರಾಹುಲ್ ಶರ್ಮಾ ಮತ್ತು ಹಿರಿಯ ವಕೀಲ ಅರುಣ್ ಭಾರದ್ವಾಜ್ ವಾದ ಮಂಡಿಸಿದ್ದರು.