ಚಿಕ್ಕಬಳ್ಳಾಪುರ: ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ (Pradeep Eshwar) ಅವರ ಸಾಕು ತಾಯಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ರತ್ನಮ್ಮ (72) (Rathnamma)ಅವರು ಇಂದು (ಶನಿವಾರ) ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ
ತಾಯಿಯ ನಿಧನದ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಅವರು ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ.
ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಬಳಿಕ ಪ್ರದೀಪ್ ಈಶ್ವರ್ ಅವರು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅಲ್ಲದೆ ಗುರುವಾರ ಬೆಳ್ಳಂಬೆಳಗ್ಗೆ ತಾಲೂಕಿನ ಮೈಲಪ್ಪನಹಳ್ಳಿಗೆ ಅಧಿಕಾರಿಗಳೊಂದಿಗೆ ಗ್ರಾಮದ ಮನೆ ಮನೆಗೂ ತೆರಳಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದರು.