Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯಾದ್ಯಂತ ಬಿಜೆಪಿ ಡಬಲ್ ಎಂಜಿನ್ ಸರ್ಕಾರಗಳ ಸಾಧನೆ ಸಾರಲಿವೆ `ಪ್ರಗತಿ ರಥ’ – ಎಸ್.ವಿ. ರಾಘವೇಂದ್ರ

Public TV
Last updated: February 21, 2023 5:58 pm
Public TV
Share
3 Min Read
SV Raghavendra
SHARE

ಬೆಂಗಳೂರು: ರಾಜ್ಯ ಮತ್ತು ಕೇಂದ್ರದ ಬಿಜೆಪಿ (BJP) ಸರ್ಕಾರಗಳ ಸಾಧನೆಯನ್ನು ಪ್ರತಿ ಗ್ರಾಮ ಮತ್ತು ಬೂತ್‌ಗಳಿಗೆ ತಲುಪಿಸುವ ಉದ್ದೇಶದಿಂದ ಪ್ರಗತಿ ರಥಗಳು (Pragati Ratha) ರಾಜ್ಯದಲ್ಲಿ ಸಂಚರಿಸಲಿವೆ ಎಂದು ರಾಜ್ಯ ಸಂಚಾಲಕ ಎಸ್.ವಿ. ರಾಘವೇಂದ್ರ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಗತಿ ರಥಕ್ಕಾಗಿ ಎಲ್‌ಇಡಿ ಸ್ಕ್ರೀನ್ ಇರುವ 135 ವಾಹನಗಳನ್ನು ಸಿದ್ಧಪಡಿಸಲಾಗಿದೆ. 224 ಕ್ಷೇತ್ರಗಳಲ್ಲಿ, 58 ಸಾವಿರಕ್ಕೂ ಹೆಚ್ಚು ಬೂತ್‌ಗಳಲ್ಲಿ ಪ್ರಗತಿ ರಥಗಳು ಸಂಚರಿಸಲಿವೆ. ರಥದ ಮೂಲಕ ಕಾರ್ನರ್ ಮೀಟಿಂಗ್, ಭಾಷಣ ಮಾಡಲು ಮೈಕ್, ಸ್ಪೀಕರ್, ಲೈವ್ ಸ್ಟ್ರೀಮ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.

narendra modi hubballi roadshow 6

ರಥಗಳನ್ನು ಗಮನಿಸಲು ಜಿಪಿಎಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಜೆಪಿ ಬ್ರ‍್ಯಾಂಡಿಂಗ್ ಮೂಲಕ ರಥ ಸಂಚರಿಸಲಿದೆ. ಸಲಹಾ ಪೆಟ್ಟಿಗೆಯನ್ನೂ ಈ ರಥ ಒಳಗೊಂಡಿರುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಜನರ ಸಲಹೆ ನಿರೀಕ್ಷಿಸಲಾಗಿದೆ. ಒಟ್ಟು 22.40 ಲಕ್ಷ ಸಲಹೆ ನಿರೀಕ್ಷೆ ಇದೆ. ಕ್ಯೂಆರ್ ಕೋಡ್ ಸಹ ಇದೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಏಕವಚನದಲ್ಲೇ ಬೈದಾಡಿಕೊಂಡ ಸಚಿವ ಮುರುಗೇಶ್ ನಿರಾಣಿ – ಮರಿತಿಬ್ಬೇಗೌಡ

ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ (Government) ಸಾಧನೆಗಳ ವಿಡಿಯೋ ಪ್ರದರ್ಶನ ನಡೆಯಲಿದೆ. 33 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ನೀರು, ವಿದ್ಯುತ್, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಕಳಸಾ ಬಂಡೂರಿಗೆ ಹಣ, ಬೆಳಗಾವಿ ಕಿತ್ತೂರು ರೈಲ್ವೇ ಕಾಮಗಾರಿ, ಬೆಂಗಳೂರು (Bengaluru) ಅಭಿವೃದ್ಧಿ ಸೇರಿ ವಿವಿಧ ಯೋಜನೆಗಳ ಕುರಿತು ತಿಳಿಸಲಿದ್ದೇವೆ. ಯುಪಿಎ ಸರ್ಕಾರ ಕೊಟ್ಟ ಹಣಕ್ಕಿಂತ 9 ಪಟ್ಟು ಹೆಚ್ಚು ಹಣವನ್ನು ರೈಲ್ವೆಗೆ ನೀಡಿದ್ದು, ಕೊಪ್ಪಳದಲ್ಲಿ ಕುಶಲಕರ್ಮಿಗಳಿಗೆ ನೆರವು, 4 ಸಾವಿರ ಕಿಮೀ ಹೆದ್ದಾರಿಗಳ ಅಭಿವೃದ್ಧಿ ಕುರಿತಂತೆ ವಿವರಗಳು ಇರಲಿವೆ ಎಂದು ಮಾಹಿತಿ ನೀಡಿದರು.

narendra modi hubballi roadshow

ಶಿವಮೊಗ್ಗ ಸೇರಿ 8 ವಿಮಾನ ನಿಲ್ದಾಣ ನಿರ್ಮಾಣದಿಂದ ಆಗುವ ಪ್ರಯೋಜನ ಸೇರಿ ರಾಜ್ಯದ ಎಲ್ಲ ಭಾಗಗಳ ಅಭಿವೃದ್ಧಿಗೆ ಕೈಗೊಂಡ ಕ್ರಮಗಳನ್ನು ವಿಡಿಯೋ ಮೂಲಕ ವಿವರಿಸಲಾಗುತ್ತದೆ. ಮೆಟ್ರೋ ಅಭಿವೃದ್ಧಿಗೆ ನೀಡಿದ ಅನುದಾನ, ಲಂಬಾಣಿ ತಾಂಡಾಗಳ ಹಕ್ಕುಪತ್ರ ಕುರಿತು ಜಾಗೃತಿ ಮೂಡಿಸುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಹ ಸಂಚಾಲಕರಾಗಿ ಮಂಗಳೂರಿನ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ ಅವರನ್ನ ನೇಮಿಸಲಾಗಿದೆ ಎಂದರು. ಇದನ್ನೂ ಓದಿ: ರೈತರ ಸಾಲ ಮನ್ನಾ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಎಸ್.ಟಿ. ಸೋಮಶೇಖರ್

SV Raghavendra 2

ವಿಧಾನಪರಿಷತ್ ಸದಸ್ಯ ಮತ್ತು ಬೆಂಗಳೂರು ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ ಮಾತನಾಡಿ, ಪ್ರಗತಿ ರಥಕ್ಕೆ ಇದೇ ಫೆಬ್ರವರಿ 24ರಂದು ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೆಂದ್ರ ಜಿಲ್ಲೆ ಮತ್ತು ದಕ್ಷಿಣ ಜಿಲ್ಲೆ “ಪ್ರಗತಿ ರಥ” ಸಂಚಾಲಕರು ಮತ್ತು ಸಹ ಸಂಚಾಲಕರ ಸಭೆಯಲ್ಲಿ ಭಾಗವಹಿಸಿ ಸಿದ್ಧತೆಗಳ ಬಗ್ಗೆ ವಿವರಿಸಲಾಯಿತು.
ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಗತಿ ರಥ ಯಶಸ್ವಿಯಾಗಿ ತಲುಪಲಿದೆ.#PragatiRatha #BJPkarnataka pic.twitter.com/3QJnTpo1uJ

— Raghavendra SV (@RaghavendraBJP) February 19, 2023

ಒಂದು ರಥವು ಕನಿಷ್ಠ 15 ದಿನಗಳ ಕಾಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದೆ. ಕರಾವಳಿ ಮತ್ತಿತರ ಕಡೆ ದೂರದ ಪ್ರದೇಶಗಳನ್ನು ಭೇಟಿ ಮಾಡಲು ಪ್ರತಿ ಕ್ಷೇತ್ರಕ್ಕೆ ಒಂದು ರಥ ಇರಲಿದೆ. ಬೆಂಗಳೂರಿನಲ್ಲಿ 2 ವಿಧಾನಸಭಾ ಕ್ಷೇತ್ರಕ್ಕೆ ಒಂದು ರಥ ನೀಡಿದ್ದೇವೆ ಎಂದು ಹೇಳಿದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibjpKarnataka Election 2023Nalin Kumar Kateelnarendra modiಎಸ್.ವಿ ರಾಘವೇಂದ್ರನಳಿನ್ ಕುಮಾರ್ ಕಟೀಲ್ಪ್ರಗತಿ ರಥಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

You Might Also Like

BESCOM smart meter
Bengaluru City

ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

Public TV
By Public TV
12 minutes ago
Haryana Muder by father in law
Crime

ಕೊಲೆಗೂ ಮುಂಚೆ ಸೊಸೆಯ ರೇಪ್ – ಮಗನ ಜೊತೆಗೂಡಿ 10 ಅಡಿ ಗುಂಡಿಯಲ್ಲಿ ಶವ ಹೂತಿಟ್ಟ ಕಿಲಾಡಿ ಮಾವ

Public TV
By Public TV
15 minutes ago
siddaramaiah dk shivakumar 1
Bengaluru City

ಸಿದ್ದರಾಮಯ್ಯ ಆಪ್ತರಿಂದ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ: ಸಿಎಂ ಸಮರ್ಥನೆ, ಜಾರಿಕೊಂಡ ಡಿಸಿಎಂ, ಅಸಲಿ ಕಹಾನಿ ಏನು!?

Public TV
By Public TV
26 minutes ago
basavaraja rayareddy
Bengaluru City

ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್

Public TV
By Public TV
40 minutes ago
ram gopal varma 1
Cinema

ಮಣಿರತ್ನಂ ಸಿನಿಮಾಗಳು ನನಗೆ ಇಷ್ಟವಿಲ್ಲ: ರಾಮ್ ಗೋಪಾಲ್ ವರ್ಮಾ ಸ್ಫೋಟಕ ಹೇಳಿಕೆ

Public TV
By Public TV
44 minutes ago
Kalki 2898 AD
Bollywood

ಕಲ್ಕಿ 2898ADಗೆ ಒಂದು ವರ್ಷದ ಸಂಭ್ರಮ : ಕಲ್ಕಿ ಪಾರ್ಟ್-2 ಯಾವಾಗ..?

Public TV
By Public TV
60 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?