ನವದೆಹಲಿ: ಕೇಂದ್ರದಿಂದ ರಾಜ್ಯಕ್ಕೆ 4,195 ಕೋಟಿ ರೂ. ಅನುದಾನ ಬಾಕಿಯಿದೆ ಎನ್ನುತ್ತ ಸಿಎಂ ಸಿದ್ದರಾಮಯ್ಯ ಬೂಟಾಟಿಕೆ ಪ್ರದರ್ಶಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ(Prahlad Joshi) ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ(Siddaramaiah) ಅವರು ತಮ್ಮ ಸರ್ಕಾರದ ಆರ್ಥಿಕ ದುರುಪಯೋಗ, ಆಡಳಿತ ವೈಫಲ್ಯ, ಅಸಮರ್ಥತೆ ಒಪ್ಪಿಕೊಳ್ಳುವುದನ್ನು ಬಿಟ್ಟು ಕೇಂದ್ರದ ಮೇಲೆ ವೃಥಾ ಆರೋಪ ಹೊರಿಸುತ್ತಿದ್ದಾರೆ. ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Bengauru Rains Photo Gallery – ಮತ್ತೆ ಮಳೆಯಾಗಿದೆ…!
ಕೇಂದ್ರದಿಂದ ಬಾಕಿ ಇರುವ 4,195 ಕೋಟಿ ರೂ. ಅನುದಾನದ ಬಗ್ಗೆ ದೂರು ನೀಡುವುದು ಸಿಎಂ ಅವರ ಬೂಟಾಟಿಕೆ ಪ್ರದರ್ಶನವಾಗಿದೆ ಅಷ್ಟೇ. ಪಿಎಂಎವೈ (ಗ್ರಾಮೀಣ), ಸ್ವಚ್ಛ ಭಾರತ ಮಿಷನ್ (ನಗರ), ಅಮೃತ್, ಪೋಷಣ್, ಸಮಗ್ರ ಶಿಕ್ಷಾ ಮುಂತಾದ ಅನೇಕ ಪ್ರಮುಖ ಯೋಜನೆಗಳು ಸೇರಿ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ 5,000 ಕೋಟಿ ರೂ.ಗೂ ಹೆಚ್ಚು ಅನುದಾನ ಇನ್ನೂ ಹಾಗೇ ಇದ್ದು, ಮೊದಲು ಇದರ ಸಮರ್ಪಕ ಬಳಕೆ ಮಾಡಿಕೊಳ್ಳಲಿ ಎಂದು ಕಿವಿ ಹಿಂಡಿದ್ದಾರೆ. ಇದನ್ನೂ ಓದಿ: ಕೊನೆ ಕ್ಷಣದವರೆಗೂ ಆಪರೇಷನ್ ಸಿಂಧೂರದ ಟಾರ್ಗೆಟ್ ಟಾಪ್ ಸೀಕ್ರೆಟ್ – ಗೊತ್ತಿದ್ದಿದ್ದು ಅಜಿತ್ ದೋವಲ್ಗೆ ಮಾತ್ರ!
ರಾಜ್ಯಕ್ಕೆ ಈಗಾಗಲೇ ನೀಡಿದ್ದ ಹಣ ಸಂಪೂರ್ಣ ಬಳಸಿಕೊಂಡಿದ್ದರೂ ಕೇಂದ್ರ ಅನುದಾನ ತಡೆಹಿಡಿದ ಯಾವುದಾದರೂ ನಿರ್ದಿಷ್ಟ ಯೋಜನೆಗಳಿದ್ದರೆ ಸಿಎಂ ಸ್ಪಷ್ಟಪಡಿಸಲಿ. ಅದು ಬಿಟ್ಟು ಹೋದಲ್ಲಿ, ಬಂದಲ್ಲಿ ಕೇಂದ್ರ ಸರ್ಕಾರ ಹಣ ನೀಡಿಲ್ಲ ಎನ್ನುವುದು ಸಿಎಂ ಅವರ ವಾಕ್ಚಾಳಿಯಾಗಿದೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರೆಡ್ಡಿ ಮಗನ ಜೊತೆ ಶ್ರೀಲೀಲಾ ಡ್ಯುಯೆಟ್- ‘ಜೂನಿಯರ್’ ಚಿತ್ರದ ಸಾಂಗ್ ಔಟ್
ಕೇಂದ್ರದಿಂದ ಬಿಡುಗಡೆಯಾದ ಹಣವನ್ನು ಖರ್ಚು ಮಾಡುವಲ್ಲಿ ಸಹ ರಾಜ್ಯ ಸರ್ಕಾರ ವಿಫಲವಾಗಿದೆ. ಇನ್ನು, ಡಿಸಿಎಂ ಡಿ.ಕೆ ಶಿವಕುಮಾರ್(D K Shivakumar) ಅವರೇ ಈ ಹಿಂದೆ ಕಾಂಗ್ರೆಸ್ನ(Congress) ಜನಪ್ರಿಯ ಗ್ಯಾರಂಟಿಗಳಿಗೆ 40,000 ಕೋಟಿ ರೂ. ಮೀಸಲಿಡಬೇಕಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದರು. ಇವರ ಸರ್ಕಾರದಲ್ಲಿ ಅಭಿವೃದ್ಧಿಗೆ ಯಾವುದೇ ಹಣ ಉಳಿದಿಲ್ಲ ಎಂಬುದನ್ನು ಬಹಿರಂಗವಾಗೇ ಒಪ್ಪಿಕೊಂಡರು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: 18ನೇ ಆವೃತ್ತಿ, ಮೇ 18ರಂದೇ ಪ್ಲೇ-ಆಫ್ಗೆ ಎಂಟ್ರಿ – 18ರ ನಂಟು ಮುಂದುವರಿಸಿದ ಆರ್ಸಿಬಿ
ರಾಜ್ಯ ಸರ್ಕಾರದಲ್ಲಿ ಸುಸ್ಥಿರವಲ್ಲದ ಗ್ಯಾರಂಟಿಗಳಿಗೆ 58,000 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ 2024ರ ಜನವರಿಯಲ್ಲೇ ಅಪಸ್ವರ ಎತ್ತಿದ್ದರು. ಇದು ಹಣಕಾಸಿನ ದುರುಪಯೋಗವನ್ನು ದೃಢಪಡಿಸುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಆಧಾರ ರಹಿತ ಆರೋಪ ಮಾಡುವುದನ್ನು ನಿಲ್ಲಿಸಲಿ. ಮೊದಲು ತನ್ನ ಬಳಿ ಇರುವ ಗಣನೀಯ ಪ್ರಮಾಣದ ಹಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಗಮನ ನೀಡಲಿ ಎಂದು ಸಿಎಂಗೆ ಚಾಟಿ ಬೀಸಿದ್ದಾರೆ.