ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಂತ್ರಾಲಯ (Mantralayam) ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸಿದ ಅವರು, ರಥೋತ್ಸವದಲ್ಲಿ ಭಾಗವಹಿಸಿ ಹರಕೆ ತೀರಿಸಿದರು. ಉತ್ಸವರಾಯರ ಪಾದಪೂಜೆ, ಮಂಚಾಲಮ್ಮ ದೇವಿ ಪೂಜೆ, ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 8 ತಾಲೂಕುಗಳ ಶಾಲೆಗಳಿಗೆ ಜೂ.17 ರಂದು ರಜೆ
ಮಠದಲ್ಲಿ ಸಂಜೆ ನಡೆದ ಉತ್ಸವಗಳಲ್ಲಿ ಭಾಗವಹಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶಿರ್ವಚನ ಪಡೆದರು. ಫಲ ಮಂತ್ರಾಕ್ಷತೆ ನೀಡಿ ಶ್ರೀಗಳು ಆಶಿರ್ವದಿಸಿದರು. ಇದನ್ನೂ ಓದಿ: ಶಬರಿಮಲೆ ಬೆಟ್ಟ ಇಳಿಯುವಾಗ ಹೃದಯಾಘಾತ – 18 ವರ್ಷದ ಅಯ್ಯಪ್ಪ ಭಕ್ತ ಸಾವು