ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಹಿಳಾ ಆಯೋಗದ ಬಳಿಕ ಈಗ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (karnataka State Child Rights Protection Commission) ಎಂಟ್ರಿ ಕೊಟ್ಟಿದೆ.
ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್ಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಾಯ್ಬರೇಲಿಯಿಂದ ಸ್ಪರ್ಧಿಸಲ್ಲ ಪ್ರಿಯಾಂಕಾ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್
- Advertisement 2
- Advertisement 3
ಸಂತ್ರಸ್ತೆ ಒಬ್ಬರು ತನ್ನ ಮಗಳ ಜೊತೆ ಕೂಡ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಇದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯಿಂದ ಅಪ್ರಾಪ್ತ ಹೆಣ್ಣು ಮಕ್ಕಳ ಬಳಕೆ ಪತ್ತೆಯಾದಲ್ಲಿ ಈ ಬಗ್ಗೆ ವರದಿ ನೀಡುವಂತೆ ಎಸ್ಐಟಿಗೆ ಪತ್ರ ಬರೆದಿದ್ದಾರೆ.
- Advertisement 4
ಒಂದು ವೇಳೆ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ ಆಯೋಗ ಪೋಕ್ಸೋ (POCSO Case) ಪ್ರಕರಣದಡಿ ದೂರು ದಾಖಲಿಸಲು ತಯಾರಿ ನಡೆಸಿದೆ.