ಹಾಸನ: ವಿಧಾನ ಪರಿಷತ್ ಚುನಾವಣೆಗೆ ಹಾಸನದಿಂದ ಯಾರು ಸ್ಪರ್ಧಿಸುತ್ತಾರೆ ಎಂದು ಇನ್ನೂ ನಿರ್ಧಾರವಾಗಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ಹಾಸನದ ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್ಸಿ ಚುನಾವಣೆಗೆ ಹಾಸನದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ. ಇಂದು ಮಧ್ಯಾಹ್ನ ಜಿಲ್ಲೆಯ ಜೆಡಿಎಸ್ ಶಾಸಕರು, ಮುಖಂಡರು, ಕಾರ್ಯಕರ್ತರು ಸಭೆ ಸೇರುತ್ತಿದ್ದಾರೆ. ಅವರೆಲ್ಲ ಸೇರಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದು ಅಂತಿಮವಾಗಿರುತ್ತದೆ ಎಂದಿದ್ದಾರೆ. ಇದನ್ನೂ ಓದಿ: 299 ರೂ. ಚೂಡಿದಾರ್ ಕೊಳ್ಳಲು ಹೋಗಿ 1ಲಕ್ಷ ಕಳೆದುಕೊಂಡ ಮಹಿಳೆ
ನಮ್ಮ ಕುಟುಂಬಕ್ಕೆ ಕೊಡಬೇಕೆಂದು ಎಲ್ಲೂ ಹೇಳಿಲ್ಲ, ಎಲ್ಲೂ ಕೇಳಿಲ್ಲ. ಇಂದು ಚರ್ಚೆ ನಡೆಯುತ್ತದೆ. ನಂತರ ತೀರ್ಮಾನ ಆಗುತ್ತದೆ. ಇನ್ನೂ ಚರ್ಚೆಯಾಗಿಲ್ಲ, ಹೀಗಾಗಿ ಚರ್ಚೆಯಾಗದೆ ಆ ಬಗ್ಗೆ ಏನು ಉತ್ತರ ಕೊಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ