ಬೆಳಗಾವಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement 2
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಅಣ್ಣಾಸಾಹೇಬ ಜೊಲ್ಲೆ ಚುನಾವಣೆಯಲ್ಲಿ ಎಲ್ಲಿಯೂ ಸಹ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಕೇವಲ ಯಕ್ಸಂಬಾ ಹಾಗೂ ಬೋರಗಾಂವ ಪಟ್ಟಣ ಪಂಚಾಯ್ತಿಗೆ ಮಾತ್ರ ಒತ್ತು ನೀಡಿದ್ದಾರೆ. ಆದರೂ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿರುವುದು ದುರ್ದೈವ. ಬೋರಗಾಂವ ಪಟ್ಟಣ ಪಂಚಾಯ್ತಿಯಲ್ಲಿ ಒಂದು ಸ್ಥಾನ ಆಯ್ಕೆಯಾಗಿಲ್ಲ. ಯಕ್ಸಂಬಾ ಪಟ್ಟಣ ಪಂಚಾಯ್ತಿಯಲ್ಲಿ ಕೇವಲ ಒಬ್ಬರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ ಎಂದು ಸಿಡಿದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್
- Advertisement 3
- Advertisement 4
ಸಂಸದ ಹಾಗೂ ಸಚಿವೆ ತಮ್ಮ ಕಾರ್ಯ ವೈಖರಿ ಬಗ್ಗೆ ಚಿಂತನೆ ಮಾಡಬೇಕು. ಅವರ ಹೆಸರು ತೆಗೆದುಕೊಳ್ಳಲು ನನಗೆ ಮರ್ಯಾದೆ ಅನಿಸುವುದಿಲ್ಲ. ಜೊಲ್ಲೆ ದಂಪತಿ ಕ್ಷೇತ್ರದ ಜನರಿಂದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ