ಮಹದಾಯಿ ಯೋಜನೆಗೆ ತಡೆ – ಶೀಘ್ರ ಸಿಹಿ ಸುದ್ದಿ ಎಂದ ಜಾವಡೇಕರ್

Public TV
1 Min Read
prakash javadekar 1

ನವದೆಹಲಿ: ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಮತ್ತು ರಾಜ್ಯಕ್ಕೆ ಸಿಹಿ ಸುದ್ದಿ ನೀಡುತ್ತೇವೆ ಎಂದು ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ ಮಾತನಾಡಿದ ಅವರು, ಪ್ರಕರಣ ಸುಪ್ರೀಂ ಕೋರ್ಟಿನಲ್ಲಿರುವ ಕಾರಣ ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ತಾತ್ಕಾಲಿಕ ತಡೆ ನೀಡಿದೆ. ಈ ಸಂಬಂಧ ಗುರುವಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಮಿತಿ ಭೇಟಿ ಮಾಡಿ ಚರ್ಚೆ ಮಾಡಿದೆ. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Supreme Court of India

ಈ ಸಮಸ್ಯೆಯ ಪರಿಹಾರಕ್ಕಿರುವುದು ಎರಡೇ ದಾರಿಗಳು ಒಂದು ಗೋವಾ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು ಸಹಮತದಿಂದ ತೀರ್ಮಾನಕ್ಕೆ ಬರಬೇಕು ಅಥಾವ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಅಭಿಪ್ರಾಯಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *