ಬೆಳಗಾವಿ: ಮೋಡ ಬಿತ್ತನೆಗೆ (Cloud Seeding) ಸರ್ಕಾರ ಹಣ ಕೊಡದಿದ್ದರೆ, ನಾನೇ ಹಣ ಹಾಕಿ ಮೋಡ ಬಿತ್ತನೆ ಮಾಡಿಸುತ್ತೇನೆ ಎಂದು ಶಾಸಕ ಪ್ರಕಾಶ್ ಕೋಳಿವಾಡ (Prakash Koliwad) ಹೇಳಿದ್ದಾರೆ.
ಅಧಿವೇಶನದ (Session) ಶೂನ್ಯವೇಳೆಯಲ್ಲಿ ಸರ್ಕಾರದ ಗಮನ ಸೆಳೆದ ಅವರು, ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮೋಡಗಳು ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಮೋಡ ಬಿತ್ತನೆ ಮಾಡುವುದರಿಂದ ಕಡಿಮೆ ವೆಚ್ಚದಲ್ಲಿ ಮಳೆ ತರಿಸಿ ರೈತರಿಗೆ ಅನುಕೂಲ ಮಾಡಬಹುದು. ಅದಕ್ಕಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದಕ್ಕೆ ಉತ್ತರ ನೀಡಿದ ಸಚಿವ ಹೆಚ್.ಕೆ ಪಾಟೀಲ್, ಅತ್ಯಂತ ಗಂಭೀರ ಹಾಗೂ ಮಹತ್ವದ ವೈಜ್ಞಾನಿಕ ವಿಚಾರ ಎತ್ತಿದ್ದಾರೆ. ಕಡಿಮೆ ವೆಚ್ಚದಲ್ಲಿ ಮೋಡ ಬಿತ್ತನೆ ಮಾಡಬಹುದು. ಈ ಬಗ್ಗೆ ಉಪಮುಖ್ಯಮಂತ್ರಿಗಳು ಹೆಚ್ಚು ಮಾಹಿತಿ ಕೊಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಇನ್ನೊಂದು ತಿಂಗಳಲ್ಲಿ ಬಂಗಲೆ ಖಾಲಿ ಮಾಡ್ಬೇಕು – ವಿಧಾನಸಭೆಯಲ್ಲಿ ಗೆದ್ದ ಸಂಸದರಿಗೆ ಸೂಚನೆ
ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಈ ಹಿಂದೆ ಹೆಚ್.ಕೆ ಪಾಟೀಲ್ ಈ ಕಾರ್ಯವನ್ನು ಮಾಡಿದ್ದರು. ಹಣಕಾಸು ಇಲಾಖೆಯವರ ಜೊತೆ ಮೋಡ ಬಿತ್ತನೆ ಬಗ್ಗೆ ಮಾತಾಡಿ ನಿರ್ಧಾರ ಮಾಡುತ್ತೇನೆ. ಸುಮಾರು 50 ಲಕ್ಷದಿಂದ 1 ಕೋಟಿ ರೂ. ವೆಚ್ಚ ಆಗಬಹುದು. ಹಣ ಬಿಡುಗಡೆ ಮಾಡಿದರೆ ಸಿಎಜಿಯವರು ಹಾಗೂ ವಿಪಕ್ಷಗಳು ಗಲಾಟೆ ಮಾಡಬಹುದು. ಚರ್ಚೆ ಮಾಡಿ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಈ ವೇಳೆ, ಸರ್ಕಾರ ಹಣ ಕೊಡದಿದ್ರೆ ನಾನೇ ನನ್ನ ಸ್ವತಃ ಹಣದಿಂದ ಮಾಡುತ್ತೇನೆ ಎಂದು ಪ್ರಕಾಶ್ ಕೋಳಿವಾಡ ಅವರು ಹೇಳಿದ್ದಾರೆ. ಇದನ್ನೂ ಓದಿ: ಮುರುಘಾ ಮಠದ ಉಸ್ತುವಾರಿ ವಿರುದ್ಧ 24 ಲಕ್ಷ ರೂ. ದುರ್ಬಳಕೆ ಆರೋಪ- ವೈರಲಾಯ್ತು ನೋಟಿಸ್