ಬೆಂಗಳೂರು: ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ ಹುಡುಕುವುದು ಬೇಡ. ಪ್ರಹ್ಲಾದ್ ಜೋಶಿ (Pralhad Joshi) ಪಾರ್ಥೇನಿಯಂ ಇದ್ದಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನಿತೀಶ್ ಕುಮಾರ್ ಡಿಎನ್ಎ ಬಗ್ಗೆ ಚರ್ಚೆ ಆಗಿಲ್ವಾ? ಪೇಶ್ವೆ ಸಮಾಜದ ಡಿಎನ್ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಹುನ್ನಾರ ಮಾಡಿದ್ದಾರೆ ಅಂತ ಹೇಳಿದೆ. ಇದಕ್ಕೆ ಯಾಕೆ ಗಾಬರಿ? ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು
ನಾನು ಸಮಾಜದ ಬಗ್ಗೆ ಅಗೌರವ ತೋರಿಲ್ಲ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಹಳೆಯ ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಬ್ರಾಹ್ಮಣ ಸಮಾಜದ ಬಗ್ಗೆ ಗೌರವವಿದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.
ಪ್ರಹ್ಲಾದ್ ಜೋಶಿಯನ್ನು ಕರ್ನಾಟಕದ ಸಿಎಂ ಮಾಡಲು ಆರ್ಎಸ್ಎಸ್ ಹುನ್ನಾರ ನಡೆಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಳೇ ಕರ್ನಾಟಕ ಭಾಗದ ಬ್ರಾಹ್ಮಣರಂತೆ ಒಳ್ಳೆಯ ಸಂಸ್ಕೃತಿಯವರಲ್ಲ. ಶೃಂಗೇರಿ ಮಠವನ್ನು ಧ್ವಂಸ ಮಾಡಿದ, ಮಹಾತ್ಮ ಗಾಂಧಿಯನ್ನು ಕೊಂದ ವಂಶಕ್ಕೆ ಸೇರಿದ ಬ್ರಾಹ್ಮಣರು ಎಂದು ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್ಡಿಕೆ ಸ್ಪಷ್ಟನೆ
ಹೆಚ್ಡಿಕೆ ಹೇಳಿಕೆಗೆ ಬಿಜೆಪಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಸಮುದಾಯದ ಮುಖಂಡರು ಖಂಡನೆ ವ್ಯಕ್ತಪಡಿಸಿದರು. ಪ್ರಹ್ಲಾದ್ ಜೋಶಿ ಅವರನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಲಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k