Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸುವವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ: ಸಿದ್ದುಗೆ ತಿರುಗೇಟು ನೀಡಿದ ಜೋಶಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸುವವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ: ಸಿದ್ದುಗೆ ತಿರುಗೇಟು ನೀಡಿದ ಜೋಶಿ

Public TV
Last updated: July 2, 2022 11:19 pm
Public TV
Share
3 Min Read
pralhad joshi
SHARE

ಬೆಂಗಳೂರು: ನೋಟ್ ಬ್ಯಾನ್ ಮಾಡುವ ಮೂಲಕ ದೇಶದ ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಆಗಿಲ್ಲ, ಯಾರು ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸಿದ್ದಾರೋ ಅಂತವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

SIDDRAMIHA
ಟ್ವೀಟ್‍ನಲ್ಲಿ ಏನಿದೆ:
ಸುಳ್ಳಿನ ಪುಸ್ತಕ ಬಿಡುಗಡೆ ಮಾಡಿದ ಸಿದ್ದರಾಮಯ್ಯ ನವರೇ ಮೊದಲು ನೀವು ಸತ್ಯಾಂಶ ತಿಳಿದು ನಂತರದಲ್ಲಿ ಜನರಿಗೆ ತಿಳಿಸಲು ಪ್ರಯತ್ನಿಸಿ. ಮೌನ ಸರ್ಕಾರದ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಕೇವಲ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ, ನಿಮ್ಮ ಮನಮೋಹನ್ ಸಿಂಗ್ ಅವರ ಸರ್ಕಾರದ ಬಗ್ಗೆ ಕೂಡ ಸ್ವಲ್ಪ ಮಾತನಾಡಿ. ಯಾರ ಶಕ್ತಿ ಏನೆಂದು ಅರಿತ ಜನರೇ ಇಂದು ಮೋದಿ ಅವರನ್ನು ಪ್ರಧಾನಿ ಮಾಡಿದ್ದಾರೆ. ಭ್ರಷ್ಟಾಚಾರ ಹಗರಣಗಳನ್ನು ಮಾಡಿ ದೇಶವನ್ನು ಲೂಟಿ ಮಾಡುತ್ತಿದ್ದ ಕಾಂಗ್ರೆಸ್‍ನಿಂದ ಅಧಿಕಾರವನ್ನು ಕಿತ್ತು ಬಿಜೆಪಿಯ ಕೈಗೆ ನೀಡಿರುವುದು ಜನರ ಸ್ವತಃ ನಿರ್ಧಾರ. ಇದನ್ನು ಸಹಿಸಲಾಗದ ನೀವು ಸುಳ್ಳಿನ ಸರಮಾಲೆಯನ್ನು ಪುಸ್ತಕದ ಮೂಲಕ ಬಿಡುಗಡೆ ಮಾಡಿದ್ದೀರಿ. ನಮ್ಮ ಸರ್ಕಾರ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಲಕ್ಷಾಂತರ ಪರಿವಾರಗಳಿಗೆ ರೇಷನ್ ನೀಡಿದೆ. 22 ಲಕ್ಷ ಫಲಾನುಭವಿಗಳು ನಮ್ಮ ಅಟಲ್ ಪಿಂಚಣಿ ಯೋಜನೆ ಉಪಯೋಗ ಪಡೆದಿದ್ದಾರೆ.  ಇದನ್ನೂ ಓದಿ: 8 ವರ್ಷಗಳಲ್ಲಿ ದೇಶದ ಒಟ್ಟು ಸಾಲ 102 ಲಕ್ಷ ಕೋಟಿ ರೂ. ಪ್ರತಿಯೊಬ್ಬರ ತಲೆ ಮೇಲೆ 1.70 ಲಕ್ಷ ರೂ. ಸಾಲ: ಸಿದ್ದು

ಪ್ರಧಾನ ಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಅಡಿಯಲ್ಲಿ 19, 950 ಕೋಟಿ ಸಾಲ ಮಂಜೂರಾಗಿ ಇದು ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟಿದೆ. ಬೀದಿ ಬದಿಯ ವ್ಯಾಪಾರಿಗಳ ಕಲ್ಯಾಣಕ್ಕಾಗಿ 1.42 ಲಕ್ಷ ಖಾತೆಗಳಿಗೆ ರೂ.10,000 ವರ್ಕಿಂಗ್ ಕ್ಯಾಪಿಟಲ್ ಸಾಲ ನೀಡಲಾಗಿದೆ. ಮೇ ತಿಂಗಳಲ್ಲಿ 10.41 ಲಕ್ಷ ಕೋಟಿಯ ಬೆಲೆಯ 594.63 ಕೋಟಿ ಯುಪಿಐ ಟ್ರಾನ್ಸಾಕ್ಷನ್‌ಗಳು ಭಾರತದಲ್ಲಿ ಆಗಿವೆ ಇದು ನಮ್ಮ ಪ್ರಗತಿ ಹಾಗೂ ಉನ್ನತಿಯನ್ನು ಪ್ರದರ್ಶಿಸುತ್ತದೆ. ಆಂತರಿಕ ಮತ್ತು ಬಾಹ್ಯವಾಗಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಅತ್ಯಂತ ಬಲಿಷ್ಠಗೊಳಿಸಿ ಸೈನಿಕರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದು ನಮ್ಮ ಕೇಂದ್ರ ಸರ್ಕಾರ. ನಿರಂತರವಾಗಿ ನಡೆಯುತ್ತಿದ್ದ ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ದೇಶದ ಭದ್ರತೆಗೆ ಯಾವುದೇ ಅಪಾಯ ಎದುರಾಗದಂತೆ ನೋಡಿಕೊಂಡಿದ್ದು ನಮ್ಮ ಕೇಂದ್ರ ಸರ್ಕಾರ.

ಸುಳ್ಳಿನ ಪುಸ್ತಕ ಬಿಡುಗಡೆ ಮಾಡಿದ @siddaramaiah ನವರೇ
ಮೊದಲು ನೀವು ಸತ್ಯಾಂಶ ತಿಳಿದು ನಂತರದಲ್ಲಿ ಜನರಿಗೆ ತಿಳಿಸಲು ಪ್ರಯತ್ನಿಸಿ
1/14

— Pralhad Joshi (@JoshiPralhad) July 2, 2022

ಕಾಶ್ಮೀರ ಪಂಜಾಬ್ ಹಾಗೂ ಈಶಾನ್ಯ ಭಾರತವನ್ನು ಹೊರತುಪಡಿಸಿ 2016 ರಿಂದ ಈಚೆಗೆ ದೇಶದಲ್ಲಿ ಭಯೋತ್ಪಾದನೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಇದು ದೇಶದ ರಕ್ಷಣೆಯಲ್ಲಿ ಸರ್ಕಾರದ ದೃಢತೆಯನ್ನು ತೋರಿಸುತ್ತದೆ. 2014ಕ್ಕೆ ಹೋಲಿಸಿದರೆ ಇಂದು ದೇಶದಲ್ಲಿ ನಕ್ಸಲ್ ಹಿಂಸಾಚಾರ ಗಣನೀಯವಾಗಿ ಕಡಿಮೆಯಾಗಿದೆ. 2014ರಲ್ಲಿ 1, 089 ಹಿಂಸಾಚಾರಗಳು ನಡೆದರೆ 2022 ರಲ್ಲಿ ಇದು 509ಕ್ಕೆ ಇಳಿದಿದೆ. 53% ಹಿಂಸಾಚಾರ ಕಡಿಮೆಯಾಗಿದೆ. ಜನರಿಗೆ ಬೇಕಾದ ಮೂಲಸೌಕರ್ಯ ಒದಗಿಸುವಲ್ಲಿ ನಮ್ಮ ಸರ್ಕಾರದ ಸಾಧನೆ ಏನೆಂಬುದನ್ನು ಸ್ವತಃ ಅಂಕಿ ಅಂಶಗಳೇ ಹೇಳುತ್ತದೆ, ಇದನ್ನು ಅರಿತು ನೀವು ಪುಸ್ತಕ ಬಿಡುಗಡೆ ಮಾಡಿದರೆ ಅದಕ್ಕೊಂದು ತೂಕ ಇರುತ್ತದೆ. ನೋಟ್ ಬ್ಯಾನ್ ಮಾಡುವ ಮೂಲಕ ದೇಶದ ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಆಗಿಲ್ಲ, ಯಾರು ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸಿದ್ದಾರೋ ಅಂತವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ, ಅದರಲ್ಲಿ ಆಶ್ಚರ್ಯವೇನಿಲ್ಲ. ಯಾಕೆಂದರೆ ನೋಟ್ ಬ್ಯಾನ್ ನಂತರ ಭಾರತದಲ್ಲಾದ ಡಿಜಿಟಲ್ ವ್ಯವಹಾರವು ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ, ಇದು ಬದಲಾಗುತ್ತಿರುವ ಭಾರತಕ್ಕೆ ಒಂದು ಅಡಿಪಾಯ ಎಂದರೂ ತಪ್ಪಾಗದು.

ಜಗತ್ತು ಕೊರೊನಾ ಬಗ್ಗೆ ಚಿಂತಿಸುತ್ತಿರುವಾಗ 200 ಕೋಟಿಗೂ ಅಧಿಕ ಉಚಿತ ಲಸಿಕೆ ನೀಡಿ ಜಗತ್ತಿಗೆ ಮಾದರಿಯಾಗಿ ನಿಂತ ಭಾರತ ಇಂದು ಜಗತ್ತಿನ ಮುಂದುವರಿದ ದೇಶಗಳಿಗೆ ಲಸಿಕೆ ರಫ್ತು ಮಾಡುತ್ತಿದೆ. ಇದು ನರೇಂದ್ರ ಮೋದಿಯವರ ನಾಯಕತ್ವದ ಸರ್ಕಾರದ ಸಾಧನೆ ಎಂಬುದನ್ನು ಜಗತ್ತು ಒಪ್ಪಿಕೊಂಡಿದೆ, ಆದರೆ ಕಾಂಗ್ರೆಸ್ ಮಾತ್ರ ಟೀಕಿಸುವುದರಲ್ಲಿ ಮಗ್ನವಾಗಿದೆ. 130 ಕೋಟಿ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ನಮ್ಮ ಸರ್ಕಾರ ತೆಗೆದುಕೊಂಡ ನಿರ್ಧಾರಗಳು ನಿಜಕ್ಕೂ ಶ್ಲಾಘನೀಯ ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

Live Tv

Share This Article
Facebook Whatsapp Whatsapp Telegram
Previous Article RAIN 1 ಭಾರೀ ಮಳೆಯಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧ – ರಾಜ್ಯದ ವಿವಿಧೆಡೆ ಭೂಕುಸಿತ, ಭೂಮಿ ಕಂಪಿಸಿದ ಅನುಭವ
Next Article Sanna Irshad Mattoo 1 ಪ್ಯಾರಿಸ್‌ಗೆ ಹೋಗ್ತಿದ್ದ ಪುಲಿಟ್ಜರ್ ವಿಜೇತೆಗೆ ದೆಹಲಿ ಏರ್‌ಪೋರ್ಟ್‌ನಲ್ಲಿ ತಡೆ

Latest Cinema News

Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood
Give Karnataka Ratna to Ambareesh Request from fans
ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಿ- ಅಭಿಮಾನಿಗಳಿಂದ ಮನವಿ
Cinema Karnataka Latest Sandalwood

You Might Also Like

Ship Headed To Somalia Loaded With Rice Sugar Catches Fire At Gujarat Jetty
Crime

ಗುಜರಾತ್‌ ಕಡಲ ತೀರದಲ್ಲಿ ಸೊಮಾಲಿಯಕ್ಕೆ ಹೊರಡಬೇಕಿದ್ದ ಹಡಗಿಗೆ ಬೆಂಕಿ – ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

30 minutes ago
train
Dharwad

ದಸರಾ 2025 | ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು

32 minutes ago
air india express
Bengaluru City

ಬೆಂಗಳೂರು – ವಾರಣಾಸಿ ವಿಮಾನದಲ್ಲಿ ಟಾಯ್ಲೆಟ್ ಹುಡುಕುತ್ತಾ ಕಾಕ್‌ಪಿಟ್‌ಗೆ ಪ್ರವೇಶಿಸಲು ಯತ್ನಿಸಿದ ಪ್ರಯಾಣಿಕ!

38 minutes ago
Digital Arrest
Crime

ನಿವೃತ್ತ ಬ್ಯಾಂಕ್‌ ಅಧಿಕಾರಿಗೆ ಬರೋಬ್ಬರಿ 1 ತಿಂಗಳು ಡಿಜಿಟಲ್‌ ಅರೆಸ್ಟ್‌ – 23 ಕೋಟಿ ವಂಚನೆ

51 minutes ago
sudha murthy
Bengaluru City

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ – ದೂರು ದಾಖಲು

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?