– ರಥ ಎಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದ ಕೇಂದ್ರ ಸಚಿವ
ಹುಬ್ಬಳ್ಳಿ: ಹನುಮ ಜಯಂತಿ ಪ್ರಯುಕ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಬೆಳಗಾವಿ (Belagavi) ಜಿಲ್ಲೆಯ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ್ದ ಸಚಿವರು, ರಾಮಧೂತ ಹನುಮನನ್ನು ಸ್ತುತಿಸುತ್ತಾ ಭಕ್ತಿ ಸಮರ್ಪಿಸಿದರು. ಇದನ್ನೂ ಓದಿ: ಸರ್ಕಾರದ ವಿರುದ್ಧದ 60% ಕಮಿಷನ್ ಆರೋಪ ಸೇರಿಸಿ ಎಸ್ಐಟಿ ತನಿಖೆ ನಡೆಸಲಿ: ಬೊಮ್ಮಾಯಿ
ಪ್ರಹ್ಲಾದ್ ಜೋಶಿಯವರು ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ದೇವರ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: IPL 2025 | ಗುಜರಾತ್ಗೆ ಮಾರ್ಕ್ರಮ್, ಪೂರನ್ ಪಂಚ್ – ಲಕ್ನೋಗೆ 6 ವಿಕೆಟ್ಗಳ ಸೂಪರ್ ಜಯ