Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಕುಣಿಯಲು ಬಾರದೇ ನೆಲ ಡೊಂಕುʼ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಪ್ರಹ್ಲಾದ್ ಜೋಶಿ‌ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ʻಕುಣಿಯಲು ಬಾರದೇ ನೆಲ ಡೊಂಕುʼ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಪ್ರಹ್ಲಾದ್ ಜೋಶಿ‌ ವ್ಯಂಗ್ಯ

Karnataka

ʻಕುಣಿಯಲು ಬಾರದೇ ನೆಲ ಡೊಂಕುʼ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಪ್ರಹ್ಲಾದ್ ಜೋಶಿ‌ ವ್ಯಂಗ್ಯ

Public TV
Last updated: August 8, 2025 10:03 pm
Public TV
Share
4 Min Read
PRALHAD JOSHI 2
SHARE

* ಸಾಂಸ್ಥಿಕ ಸಂಸ್ಥೆಗಳ ಮೇಲೆ ವೃಥಾ ಆರೋಪ ಮಾಡುವುದು ಮೂರ್ಖತನ
* ಬೆಂಗಳೂರಲ್ಲಿ ಚುನಾವಣಾ ಆಯೋಗ ಕರೆದರೂ ತೆರಳದ ರಾಹುಲ್‌ ಗಾಂಧಿ
* ರಾಹುಲ್‌ ಗಾಂಧಿ ಅವರದ್ದು ‌ʻಹಿಟ್‌ & ರನ್‌ ಕೇಸ್‌ʼ

ನವದೆಹಲಿ: ʻಕುಣಿಯಲು ಬಾರದವರು ನೆಲ ಡೊಂಕುʼ ಅಂದರಂತೆ. ರಾಹುಲ್‌ ಗಾಂಧಿಯವರು (Rahul Gandhi) ಅದೇ ವರ್ತನೆ ತೋರುತ್ತಿದ್ದಾರೆ. ಚುನಾವಣಾ ಆಯೋಗದಂತಹ ಸಾಂಸ್ಥಿಕ ಸಂಸ್ಥೆಗಳ ಮೇಲೆ ವೃಥಾ ಆರೋಪ ಮಾಡುವ ಇವರದ್ದು ಮೂರ್ಖತನ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವ್ಯಂಗ್ಯವಾಡಿದ್ದಾರೆ.

ನವದೆಹಲಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದ ಮಾಹಿತಿ ಪಡೆದುಕೊಳ್ಳಲು ಆಯೋಗ ಕರೆದರೂ ತೆರಳಿಲ್ಲ. ಇವರ ಆರೋಪಗಳೆಲ್ಲ ನಿರಾಧಾರ ಎಂದು ಇದರಿಂದಲೇ ಗೊತ್ತಾಗುತ್ತದೆ. ಇದನ್ನೂ ಓದಿ: ಮನೆ ನಂ.35ರಲ್ಲಿ 80 ಮಂದಿ ವಾಸ | 10*15 ಅಡಿಯಲ್ಲಿ ಎಷ್ಟು ಜನ ಇರೋಕಾಗುತ್ತೆ? – ರಾಹುಲ್ ಆರೋಪಕ್ಕೆ ಮಾಲೀಕನ ಪ್ರತಿಕ್ರಿಯೆ

ರಾಹುಲ್‌ ಗಾಂಧಿ ಅವರನ್ನು ಮಧ್ಯಾಹ್ನ 1 ಗಂಟೆಯಿಂದ 3 ಗಂಟೆವರೆಗೆ ಕರೆದರೂ ಹೋಗಿಲ್ಲ. ಬೆಂಗಳೂರಲ್ಲೇ ಇದ್ದರೂ ಭೇಟಿ ನೀಡಿಲ್ಲ. ತಮ್ಮ ಪರವಾಗಿ ಬೇರೆಬ್ಬೊರನ್ನು ಕಳಿಸಿಕೊಡುವುದಾಗಿ ಹೇಳಿದ್ದೇಕೆ? ಎಂದು ಪ್ರಶ್ನಿಸಿದರು.

ಬೆಂಗಳೂರು ಫ್ರೀಡಂ ಪಾರ್ಕ್‌ಗೂ ಚುನಾವಣಾ ಆಯೋಗದ ಕಚೇರಿಗೆ ಐದೇ ನಿಮಿಷದ ಹಾದಿ. ನಡೆದೇ ಹೋಗಬಹುದು. ಹಾಗಿದ್ದರೂ ರಾಹುಲ್‌ ಗಾಂಧಿ ಹೋಗಿ ದಾಖಲೆಗಳನ್ನು ಒದಗಿಸಿಲ್ಲ. ಬೇರೊಬ್ಬರನ್ನು ಕಳಿಸುವುದಾಗಿ ಹೇಳಿದ್ದಾರೆ. ಆರೋಪ ಮಾಡುವ ತಾವು ಬೇರೆಯವರನ್ನು ಕಳಿಸುವುದೆಂದರೆ ಏನರ್ಥ? ಇದವರ ಸುಳ್ಳು ಆರೋಪಗಳನ್ನು ಸಾಬೀತುಪಡಿಸುತ್ತದೆ ಎಂದರು.

ರಾಹುಲ್‌ ಗಾಂಧಿ ಹಿಟ್‌ & ರನ್‌ ಕೇಸ್‌: ರಾಹುಲ್‌ ಗಾಂಧಿ ಅವರದ್ದು ಒಂದು ರೀತಿ ಹಿಟ್‌ & ರನ್‌ ಕೇಸ್‌ ಇದ್ದಂತೆ. ಮನಬಂದಂತೆ ಮಾತನಾಡುತ್ತಾರೆ. ಉತ್ತರ ಕೇಳಿದರೆ ನಾಪತ್ತೆಯಾಗುತ್ತಾರೆ. ಯಾವುದೇ ಪ್ರಕರಣ ಸಹ ದಾಖಲಿಸುವುದಿಲ್ಲ. ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ ಚುನಾವಣೆ ಸಂಬಂಧಿತ ಎಲ್ಲಾ ಆರೋಪಗಳಿಗೆ ಅಫಿಡವಿಟ್‌ ಸಲ್ಲಿಸುವಂತೆ ಚುನಾವಣಾ ಆಯೋಗ ಹೇಳಿದೆ. ಆದರೆ ಈವರೆಗೂ ಸಲ್ಲಿಸಿಲ್ಲ. ಎಲ್ಲಾ ಬೋಗಸ್‌ ಆರೋಪಗಳಾಗಿದ್ದಕ್ಕಾಗಿ ಬೆಂಗಳೂರಲ್ಲಿ ಖುದ್ದು ಆಹ್ವಾನಿಸಿದರೂ ಹಾಜರಾಗಿಲ್ಲ ಎಂದು ಕಿಡಿಕಾರಿದರು.

rahul gandhi 2

ಯಾರೋ ಬರೆದು ಕೊಟ್ಟದ್ದನ್ನು ಓದ್ತಾರೆ: ರಾಹುಲ್‌ ಗಾಂಧಿ ಯಾರೋ ಬರೆದುಕೊಟ್ಟದ್ದನ್ನು ಓದುತ್ತಾರೆ. ರಿಪಿಟ್‌ ಕೇಳಿದರೆ ತಡಬಡಿಸುತ್ತಾರೆ. ಇವರೊಬ್ಬ ಬೇಜವಾಬ್ದಾರಿ ರಾಜಕಾರಣಿ. ಗಂಭೀರತೆ ಎನ್ನುವುದೇ ಇಲ್ಲ. ಹತಾಶೆ, ನಿರಾಶೆಯಿಂದ ಏನೇನೋ ಮನಬಂದಂತೆ ಮಾತನಾಡುತ್ತಾರೆ ಎಂದು ಆರೋಪಿಸಿದರು.

ಕೋರ್ಟ್‌ಗೂ ಹೋಗಿಲ್ಲ: ಇವಿಎಂ ದೋಷ ಎಂದಾಯಿತು. ಈಗ ಚುನಾವಣಾ ಆಯೋಗದ ಮೇಲೆ ವೃಥಾ ಆರೋಪ ಮಾಡುತ್ತಿದ್ದಾರೆ. ದಾಖಲೆ ಸಹಿತ ಕೋರ್ಟ್‌ಗೂ ಹೋಗುವುದಿಲ್ಲ, ಹಾಗೇ ಬಾಯಿಗೆ ಬಂದಂತೆ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಸಿಸಿ ಟಿವಿ ದೃಶ್ಯ ಕೇಳುತ್ತಿದ್ದಾರೆ. ಆದರೆ, ಸಿಸಿ ಟಿವಿ ದೃಶ್ಯ ಸಂಗ್ರಹ ಸಹಜವಾಗಿ 45 ದಿನ ಮಾತ್ರವಿರುತ್ತದೆ. ಈಗ ಕೇಳಿದರೆ ಹೇಗೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಒಂದೂ ಆಕ್ಷೇಪಣೆ ಸಲ್ಲಿಸಿಲ್ಲ: ಕರ್ನಾಟಕದಲ್ಲಿ 2024ರಲ್ಲಿ ನಡೆದ ಚುನಾವಣೆ ವೇಳೆ ಒಟ್ಟು 9 ಲಕ್ಷ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಆದರೆ, ಕಾಂಗ್ರೆಸ್‌ ಪಕ್ಷದಿಂದ ಒಂದೇ ಒಂದು ಎಲೆಕ್ಷೆನ್‌ ಪಿಟಿಶನ್‌ ಸಲ್ಲಿಕೆಯಾಗಿಲ್ಲ. ಮತಪಟ್ಟಿ, ಮತದಾನದಲ್ಲಿ ಲೋಪವಾಗಿದ್ದರೆ ಏಕೆ ಆಕ್ಷೇಪಣೆ ಸಲ್ಲಿಸಲಿಲ್ಲ? ಎಂದು ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್‌ ಬಿಎಲ್‌ಎಗಳು ಕತ್ತೆ ಕಾಯ್ತಿದ್ರಾ?: ಯಾವುದೇ ಚುನಾವಣೆ ಇರಲಿ ಸಾಮಾನ್ಯವಾಗಿ ಬಿಎಲ್‌ಎಗಳು ಎಲ್ಲಾ ಕಡೆ ಹೋಗಿ ಕೆಲಸ ಮಾಡಿದ್ದಾರೆ. 2024ರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮಹದೇವಪುರದಲ್ಲಿ ಲೋಪ ಕಂಡುಬಂದಿದ್ದರೆ ಏಕೆ ಗಮನಕ್ಕೆ ತರಲಿಲ್ಲ? ಕಾಂಗ್ರೆಸ್‌ನ ಬಿಎಲ್‌ಎಗಳು ಏನು ಕತ್ತೆ ಕಾಯುತ್ತಾ ಇದ್ದರಾ? ಎಂದು ವಾಗ್ದಾಳಿ ನಡೆಸಿದರು.

ಅಭ್ಯರ್ಥಿ ನಿದ್ದೆ ಮಾಡುತ್ತಿದ್ದರಾ?: ಚುನಾವಣಾ ಆಯೋಗ ಮತದಾರರ ಕರಡು ಪ್ರತಿಯನ್ನು ಅಭ್ಯರ್ಥಿಗಳು ಮತ್ತು ಜಿಲ್ಲಾ ಮಟ್ಟದ, ರಾಜ್ಯಮಟ್ಟದಲ್ಲಿ ಎಲ್ಲಾ ಪಾರ್ಟಿಗಳಿಗೂ ಕೊಟ್ಟಿರುತ್ತದೆ. ಆಗೇಕೆ ನೋಡಲಿಲ್ಲ. ಫಲಿತಾಂಶ ಬಂದ ತಕ್ಷಣ ಬೆಂಗಳೂರು ಸೆಂಟ್ರಲ್‌ ಎಲೆಕ್ಷೆನ್‌ ಪಿಟಿಷನ್‌ ಏಕೆ ಫೈಲ್‌ ಮಾಡಲಿಲ್ಲ? ಅಭ್ಯರ್ಥಿ ಏನು ನಿದ್ದೆ ಮಾಡುತ್ತಿದ್ದರಾ? ಅಥವಾ ರಾಹುಲ್‌ ಗಾಂಧಿ ರೀತಿ ಬೇರೆ ಲೋಕ, ಬೇರೆ ದೇಶದಲ್ಲಿ ಇದ್ದರಾ? ಎಂದು ಅಸಮಾಧಾನ ಹೊರಹಾಕಿದರು.

ನಾನೂ ಬೂತ್‌ ಏಜೆಂಟ್‌ ಆಗಿ ಕೆಲಸ ಮಾಡಿದ್ದೇನೆ. ಮತಪಟ್ಟಿಗೆ ಸಹಿ ಮಾಡಿಕೊಡಬೇಕು. ಲೋಪವಿದ್ದರೆ ಆಗೇಕೆ ಮಾಡಿ ಕೊಟ್ಟಿರಿ? ಬೆಂಗಳೂರು ಸೆಂಟ್ರಲ್‌ನ 6 ವಿಧಾನಸಭಾ ಕ್ಷೇತ್ರಗಳ ಪೈಕಿ 5ರಲ್ಲಿ ಬಿಜೆಪಿ ಲೀಡ್‌ ಬಂದಿದೆ. 6ನೇ ಬೂತ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಇನ್ನು, ಶಿರಸಿ ವಿಧಾನಸಭಾ ಕ್ಷೇತ್ರ ಬಿಜೆಪಿಯದ್ದು. ಅಲ್ಲಿ ನಾವು ಸೋತಿದ್ದೇವೆ. ಹಾಗಾದರೆ ಅಲ್ಲಿಯೂ ಇವಿಎಂ, ಆಯೋಗ ಸರಿ ಇಲ್ಲವೇ? ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರ ಚುನಾವಣೆ ಬಳಿಕ 70 ಲಕ್ಷ ವೋಟರ್‌ ಸೇರ್ಪಡೆಯಾಗಿದ್ದಾರೆ ಎಂದರು. ಆಮೇಲೆ 1 ಕೋಟಿ ಎಂದರು. ಹೀಗೆ ದಿನೇದಿನೇ ಮನಸೋ ಇಚ್ಛೆ ಹೇಳಿಕೆ ನೀಡತೊಡಗಿದ್ದಾರೆ ರಾಹುಲ್‌ ಗಾಂಧಿ. ಸಂಶಯಪಟ್ಟ ಇವರಿಗೆ ಆಯೋಗ 40 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. ಇದು ಸಾಮಾನ್ಯವೆಂದು ಸ್ಪಷ್ಟಪಡಿಸಿತು. ಆದರೂ ರಾಹುಲ್‌ ಗಾಂಧಿ ಈಗಲೂ ಮನಬಂದಂತೆ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು.

ಯಾವಾಗ ಎಷ್ಟು ಸೇರ್ಪಡೆ: 2004 ಮತ್ತು 2009ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲೇ ಹೆಚ್ಚು ಹೊಸ ಮತದಾರರ ಸೇರ್ಪಡೆಯಾಗಿದೆ. 2024ರಲ್ಲಿ ಶೇ.4.7, 2009ರಲ್ಲಿ ಶೇ.4.1ರಷ್ಟು ಹೆಚ್ಚಿನ ಮತದಾರರ ಸೇರ್ಪಡೆ ಆಗಿದೆ. 2014ರಲ್ಲಿ ಶೇ.3.4ರಷ್ಟು ಆಗಿದೆ. ಇನ್ನು ಎನ್‌ಡಿಎ ಕಾಲದಲ್ಲಿ ಶೇ.4.4ರಷ್ಟು ಹೊಸ ಮತದಾರರ ಸೇರ್ಪಡೆಯಾಗಿದೆ. ಇದರಲ್ಲಿ ಯಾವುದೇ ಲಾಜಿಕ್‌ ಇಲ್ಲ. ಹೊಸ ಮತದಾರರ ಹೆಚ್ಚು ಸೇರ್ಪಡೆಯಾದಾಗ ಆಗೆಲ್ಲ ಇವರೇ ಗೆದ್ದಿದ್ದಾರೆ ಎಂದು ತಿರುಗೇಟು ನೀಡಿದರು.

ಲೂಟ್‌ ದುಖಾನ್‌-ಜೂಟ್‌ ದುಖಾನ್‌: ರಾಹುಲ್‌ ಗಾಂಧಿಯವರ ಮನಸ್ಥಿತಿ ಹೇಗಿದೆ ಎಂದರೆ, ತಮ್ಮ ಸರ್ಕಾರವಿದ್ದಾಗ ʻಲೂಟ್‌ ದುಖಾನ್‌ʼ, ಚುನಾವಣೆ ವೇಳೆ ʻಮೊಹಬತ್‌ ಕಾ ದುಖಾನ್‌ʼ, ಸೋತ ಮೇಲೆ ʻಜೂಟ್‌ ಕಾ ದುಖಾನ್‌ʼ ಎನ್ನುವಂತಿದೆ. ಇವರಿಗೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಮೇಲೆ ಕನಿಷ್ಠ ಗೌರವವಿಲ್ಲ ಎಂದರು.

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಪತ್ರಿಕೆ ಬಂದ್‌ ಮಾಡಿ, ಟಿವಿ ಬಂದ್‌, ಕಿಶೋರ್‌ ಕುಮಾರ್‌ ಹಾಡು ಬಂದ್‌ ಮಾಡಿ, ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಿ, ಜಯಪ್ರಕಾಶ್‌ ನಾರಾಯಣ ಅವರ ಆರೋಗ್ಯ ಹದಗೆಡುವಂತೆ ಮಾಡಿದ ಈ ಕಾಂಗ್ರೆಸ್ಸಿಗರು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು – ಅಂತರ ಕಾಯ್ದುಕೊಂಡ ರಾಗಾ

TAGGED:congressPralhad JoshiRahul GandhiVote Fraud
Share This Article
Facebook Whatsapp Whatsapp Telegram

Cinema news

Kavya 1
BBK Season 12 | ಟೈಟಲ್‌ ಸನಿಹದಲ್ಲಿ ತಪ್ಪಿದ ಲಕ್‌ – 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌!
Bengaluru City Cinema Latest Main Post TV Shows
Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National
Dhanush Gowda
BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌
Cinema Latest Main Post TV Shows

You Might Also Like

Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
2 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
3 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
3 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
4 hours ago
HT Manju
Bengaluru City

ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

Public TV
By Public TV
4 hours ago
Sara Mahesh
Bengaluru City

ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?