Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನವರೇ ಪರಮೇಶ್ವರ್ ಮೇಲೆ ಕ್ರಮ ಆಗ್ಬೇಕು ಅಂತಾ ಇಡಿಗೆ ಮಾಹಿತಿ ನೀಡಿದ್ದು: ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್‌ನವರೇ ಪರಮೇಶ್ವರ್ ಮೇಲೆ ಕ್ರಮ ಆಗ್ಬೇಕು ಅಂತಾ ಇಡಿಗೆ ಮಾಹಿತಿ ನೀಡಿದ್ದು: ಪ್ರಹ್ಲಾದ್ ಜೋಶಿ

Districts

ಕಾಂಗ್ರೆಸ್‌ನವರೇ ಪರಮೇಶ್ವರ್ ಮೇಲೆ ಕ್ರಮ ಆಗ್ಬೇಕು ಅಂತಾ ಇಡಿಗೆ ಮಾಹಿತಿ ನೀಡಿದ್ದು: ಪ್ರಹ್ಲಾದ್ ಜೋಶಿ

Public TV
Last updated: May 22, 2025 4:16 pm
Public TV
Share
3 Min Read
Prahlad Joshi 1
SHARE

ಗದಗ: ಕಾಂಗ್ರೆಸ್‌ನ(Congress) ಒಂದು ಗುಂಪು ಪರಮೇಶ್ವರ್ ಮೇಲೆ ಕ್ರಮ ಆಗಬೇಕು ಅಂತ ಇಡಿಗೆ ಎಲ್ಲಾ ಮಾಹಿತಿ ನೀಡಿದೆ. ಯಾರು ಕಳುಹಿಸಿದ್ದು ಅಂತಾ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಸ್ಫೋಟಕ ಹೇಳಿಕೆ ನೀಡಿದರು.

ಗೃಹಸಚಿವ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ ಕುರಿತು ಗದಗದಲ್ಲಿ(Gadag) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಪರಮೇಶ್ವರ್(G Parameshwar) ಅವರನ್ನು ಸೋಲಿಸಿದ್ದು ಯಾರು? ಇದೇ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರನ್ನು ಸೋಲಿಸಿದ್ದು, ಇದು ಜಗತ್ ಜಾಹಿರ ವಿಚಾರ. ಸಿದ್ದರಾಮಯ್ಯನವರೇ, ಜನರು ಇತಿಹಾಸವನ್ನು ಅಷ್ಟು ಬೇಗ ಮರೆಯೋದಿಲ್ಲ ಟಾಂಗ್ ಕೊಟ್ಟರು. ಇದನ್ನೂ ಓದಿ: ಸಿದ್ದರಾಮಯ್ಯ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು, ಈಗ ಮರೆವು ಜಾಸ್ತಿಯಾಗಿದೆ: ಸೋಮಣ್ಣ

ಗೋಲ್ಡ್ ಸ್ಮಗ್ಲಿಂಗ್‌ನಿಂದ ಹಿಡಿದು ಎಲ್ಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಇಡಿಗೆ ಪತ್ರ ಬರೆಯುತ್ತಿದ್ದವರು ಯಾರು? ಕಾಂಗ್ರೆಸ್‌ನ ಒಂದು ಗುಂಪು ಪರಮೇಶ್ವರ್ ಮೇಲೆ ಕ್ರಮ ಆಗಬೇಕು ಎಂದು ಇಡಿಗೆ ಎಲ್ಲಾ ಮಾಹಿತಿ ಕಳುಹಿಸುತ್ತಾರೆ. ಇಷ್ಟೆಲ್ಲಾ ಮಾಡಿ ಈಗ ಡ್ರಾಮ ಮಾಡ್ತಿದ್ದೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

ಪರಮೇಶ್ವರ್ ಬಗ್ಗೆ ನಮಗೆ ಗೌರವ ಇದೆ. ಅವರು ಒಬ್ಬ ಸಭ್ಯ ರಾಜಕಾರಣಿ. ಕಾಂಗ್ರೆಸ್‌ನ ಒಂದು ಗುಂಪಿನವರು ಮಾಹಿತಿಗಳನ್ನೆಲ್ಲಾ ಇಡಿಗೆ ಕಳುಹಿಸಿದ್ದು. ಯಾರು ಕಳುಹಿಸಿದ್ದು ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಗುಪ್ತಚರ ಇಲಾಖೆ ಅವರ ಬಳಿ ಇದೆ. ಅವರ ಬಳಿ ಕೇಳಿದ್ರೆ ಯಾರು ಅಂತ ಹೇಳ್ತಾರೆ. ಇಂತಹ ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಇವರೇ ಮಾಹಿತಿಯನ್ನು ಬೇಕಂತಲೆ ಕೊಟ್ಟಿದ್ದಾರೆ. ಇಡಿ ಕರ್ತವ್ಯದಂತೆ ತನಿಖೆ ಮಾಡ್ತಿದೆ. ಪರಮೇಶ್ವರ್‌ಗೆ ತೊಂದರೆ ಕೊಡಬೇಕು ಎಂಬ ಯಾವ ಉದ್ದೇಶವೂ ಕೇಂದ್ರ ಸರ್ಕಾರಕ್ಕೆ ಇಲ್ಲ. ಕಾನೂನು ಪ್ರಕಾರ ತಪ್ಪು ಮಾಡಿದ್ರೆ. ನಾನೇ ತಪ್ಪು ಮಾಡಲಿ, ಸಿದ್ದರಾಮಯ್ಯ, ಪರಮೇಶ್ವರ್ ತಪ್ಪು ಮಾಡಲಿ. ನಮ್ಮ ಪಕ್ಷದವರು ಇನ್ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗುತ್ತೆ. ಎಲ್ಲದಕ್ಕೂ ರಾಜಕಾರಣ ಬೆರಸಿದ್ರೆ, ನಿಮ್ಮ ಪಕ್ಷದವರು ಏನೇನು ಮಾಡಿದ್ದಾರೆಂಬುದು ಮುಂದೆ ನಿಮಗೇ ತೊಂದರೆ ಆಗುತ್ತದೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ದೈವ ಶಕ್ತಿ ಇರೋವರೆಗೆ ಯಾರು ನನ್ನನ್ನು ಕಾಡೋಕೆ ಆಗಲ್ಲ: ಹೆಚ್.ಡಿ ರೇವಣ್ಣ

ಎಲ್ಲಾ ಸರ್ಕಾರಿ ಆಸ್ಪತ್ರೆ ಆವರಣದ ಜನೌಷಧೀಯ ಕೇಂದ್ರ ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶದ ಕುರಿತು ಪ್ರತಿಕ್ರಿಯಿಸಿದರು. ರಾಜೀವ್ ಗಾಂಧಿ ದೇಹಾಂತ್ಯವಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಪರಿವಾರದ ಪ್ರಧಾನ ಮಂತ್ರಿ ಇಲ್ಲ. ಅವರದ್ದೇ ಸರ್ಕಾರ ಇದ್ದಾಗಲೂ, ಯಾವ ಪ್ರಧಾನಮಂತ್ರಿ ಹೆಸರು ಬಂದ್ರೂ ಇವರಿಗೆ ಉರಿಯುತ್ತಿತ್ತು. ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ತಡೆದುಕೊಳ್ಳಲು ಆಗ್ತಿಲ್ಲ. ಪ್ರಧಾನ ಮಂತ್ರಿ ಕುರ್ಚಿ ಅಂದ್ರೆ, ಗಾಂಧಿ ಪರಿವಾರದವರಿಗೆ ಮಾಡಿಟ್ಟ ಮೀಸಲು ಅಂತ ತಿಳಿದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಾ.ನಗರ| ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ವಧು

ಪ್ರಧಾನ ಮಂತ್ರಿ ಜನ ಔಷಧೀಯ ಕೇಂದ್ರ ಬಂದ್ ಮಾಡಿದ್ದಾರೆ. ಔಷಧ ಫ್ರೀ ಕೊಡುತ್ತೇವೆ ಅಂತಾರೆ. ಎಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಔಷಧ ಉಚಿತ ಸಿಗುತ್ತಾ? ಉತ್ತರ ಕರ್ನಾಟಕ ಪ್ರತಿಷ್ಠಿತ ಕಿಮ್ಸ್‌ನಲ್ಲಿ ಔಷಧ ಹೊರಗಡೆ ಬರೆದುಕೊಡ್ತಾರೆ. ನೀವು ಉಚಿತ ಕೊಟ್ರೆ ಜನ ಯಾಕೆ ಪ್ರಧಾನಮಂತ್ರಿ ಔಷಧ ಕೇಂದ್ರಕ್ಕೆ ಹೋಗ್ತಾರೆ. ಉಚಿತ ಔಷಧ ಕೊಟ್ರೆ ಜನೌಷಧೀಯ ಕೇಂದ್ರಕ್ಕೆ ಹೋಗಿ ತೆಗದುಕೊಳ್ಳಲು ಜನರಿಗೆ ಹುಚ್ಚು ಹಿಡಿದಿದ್ಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

ಕಡಿಮೆ ಬೆಲೆಗೆ ಸಿಗುವ ಔಷಧಕ್ಕೂ ಕಲ್ಲು ಹಾಕ್ತಿರಿ. ಯಾಕೆಂದರೆ ಅದರಲ್ಲಿ ಪ್ರಧಾನಮಂತ್ರಿ ಹೆಸರಿದೆ. ಪ್ರಧಾನ ಮಂತ್ರಿ ಪದವನ್ನು ದ್ವೇಷ ಮಾಡ್ತಿದ್ದಾರೆ. ನೆಹರು, ಗಾಂಧಿ ಕುಟುಂಬದವರು ಪ್ರಧಾನಮಂತ್ರಿ ಆಗುವುದಿಲ್ಲ ಅಂತ ಅವರಿಗೂ ಗೊತ್ತಾಗಿದೆ. ದೇಶದ ಅಭ್ಯುದಯವನ್ನು ವಿರೋಧ ಮಾಡ್ತಿದ್ದಾರೆ. ದೇಶವನ್ನೇ ದ್ವೇಷ ಮಾಡ್ತಾ ಹಿಂದೂಸ್ತಾನ ವಿರುದ್ಧ ಹೋರಾಟ ಮಾಡ್ತೇವೆ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ. ಜನೌಷಧೀಯ ಕೇಂದ್ರದ ಬಗ್ಗೆ ಬಡವರ ಹಿತದೃಷ್ಟಿಯಿಂದ ಮರು ಪರಿಶೀಲನೆ ಮಾಡಬೇಕು. ಜನ ಔಷಧೀಯ ಕೇಂದ್ರ ಬಂದ್ ಮಾಡುವ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಆಕ್ರೋಶ ಹೊರಹಾಕಿದರು.

TAGGED:congressED raidG Parameshwargadagprahlad joshiಇಡಿ ರೇಡ್ಕಾಂಗ್ರೆಸ್ಗದಗಜಿ.ಪರಮೇಶ್ವರ್ಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
6 minutes ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
12 minutes ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
28 minutes ago
Assistant Professor Annapoorna
Dharwad

ಅಂಡಮಾನ್‌ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಹೃದಯಾಘಾತಕ್ಕೆ ಬಲಿ

Public TV
By Public TV
48 minutes ago
Wilson Garden
Bengaluru City

ಗಂಡನ ಸೈಕೋ ವರ್ತನೆ ವಿರುದ್ಧ ದೂರು – ನಗ್ನ ಫೋಟೋ ತೆಗೆದು ಬ್ಲ್ಯಾಕ್‌ಮೇಲ್‌ ಅಂತ ಪತಿ ಪ್ರತಿದೂರು!

Public TV
By Public TV
60 minutes ago
Chandrashekar Death
Crime

ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?