ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆ: ಪ್ರಮೋದ್‌ ಮುತಾಲಿಕ್

Public TV
1 Min Read
Pramod Muthalik

ಚಿಕ್ಕೋಡಿ: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆಯಾಗುತ್ತಿದೆ ಎಂದು ಶ್ರೀರಾಮಸೇನಾ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ. ‌

ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ತಿರುಪತಿ ತಿಮ್ಮಪ್ಪನಷ್ಟೇ ಪ್ರಖ್ಯಾತಿ ಪಡೆದಿರುವ ಅಯ್ಯಪ್ಪ ದೇವಸ್ಥಾನವು ಇದೆ. ಆರು ರಾಜ್ಯಗಳಿಂದ ಐದು ಕೋಟಿ‌ ಜನರು ಅಲ್ಲಿ ಭೇಟಿ ನೀಡ್ತಾರೆ. ಮೂರು ಸಾವಿರ ಕೋಟಿ ರೂ.ಗಿಂತಲೂ ಆದಾಯ ಜಾಸ್ತಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಕ್ಕಳಿಬ್ಬರ ಭೇಟಿಯಾಗಿ ಸೆಲ್ಫಿ, ಆಟೋಗ್ರಾಫ್‌ ನೀಡಿದ ಪ್ರಧಾನಿ

Ayyappa Mala

ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವೆಹಿಕಲ್‌ಗೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ ಐದು ಕೋಟಿ ಭಕ್ತರಿಗೆ ಅನುಕೂಲವಾಗುವಂತಹ ಸೌಕರ್ಯ ಒದಗಿಸಿಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ ಉಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವಸ್ಥಾನ ಮಂಡಳಿಯನ್ನು ಕೇರಳ ಸರ್ಕಾರ ಹೆದರಿಸುವ ಕೆಲಸ ಮಾಡ್ತಿದೆ. ಇಷ್ಟೆಲ್ಲಾ ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ನೆರವಿಗೆ ಕರ್ನಾಟಕ ಸರ್ಕಾರ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು. ಸಾವಿರಾರು ಕೋಟಿ ಆದಾಯದ ಸಂಪೂರ್ಣ ಹಣ ಭಕ್ತಾದಿಗಳ ಅನುಕೂಲಕ್ಕಾಗಿ ಉಪಯೋಗಿಸಬೇಕು. ಅನ್ನ ವಿತರಣೆ ಕಾರ್ಯಕ್ರಮ ಈ ಹಿಂದೆ ಇದ್ದಂತೆ ಜರುಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಂದಿನ ಚುನಾವಣೆಯಲ್ಲಿ ಪುಲ್ವಾಮಾ, ಈಗ ರಾಮನ ಫೋಟೋ ಹಿಡಿದಿದ್ದಾರೆ- ಕೇಂದ್ರದ ವಿರುದ್ಧ ಸುಧಾಕರ್‌ ಕಿಡಿ

ಹಿಂದೂ ಸಂಘಟನೆಗಳು ಅನ್ನದಾನವನ್ನು ಉಚಿತವಾಗಿ ಮಾಡುತ್ತಿದ್ದವು. ಆದರೆ ಕೇರಳ ಸರ್ಕಾರ ಬ್ಯಾನ್ ಮಾಡಿ, ಪೊಲೀಸ್ ವ್ಯವಸ್ಥೆಗೆ ನೀಡಲಾಗಿದೆ. ಇದರಿಂದಾಗಿ ಅನೇಕ ಭಕ್ತಾದಿಗಳಿಗೆ ಅನ್ನ ಸಿಗ್ತಾ ಇಲ್ಲ. ಭಕ್ತಾದಿಗಳಿಗೆ ನೀರಿನ ವ್ಯವಸ್ಥೆ ಹಾಗೂ ಸ್ನಾನ ಮಾಡುವ ವ್ಯವಸ್ಥೆ ಮಾಡಬೇಕಾಗಿದೆ. ಮೊದಲಿದ್ದ ಮಾದರಿಯಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಮುತಾಲಿಕ್ ಆಗ್ರಹಿಸಿದ್ದಾರೆ.

Share This Article