Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮುಸ್ಲಿಮರು ರಾಮ ಮಂದಿರ ಧ್ವಂಸ ಮಾಡುವ ಕನಸನ್ನು ಕಾಣಬೇಡಿ: ಪ್ರಮೋದ್ ಮುತಾಲಿಕ್

Public TV
Last updated: October 20, 2022 12:07 pm
Public TV
Share
3 Min Read
pramod muthalik 1
SHARE

ಹಾವೇರಿ: ಈ ದೇಶದ ಮುಸ್ಲಿಮರು ರಾಮ ಮಂದಿರ (Ram Mandir) ಧ್ವಂಸ ಮಾಡುವ ಕನಸನ್ನು ಕಾಣಬೇಡಿ. ಹಿಂದೂ ಸಮಾಜ ಜಾಗೃತವಿದೆ, ಕಾನೂನಿದೆ, ಸಂವಿಧಾನವಿದೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ (Pramod Muthalik) ಎಚ್ಚರಿಕೆ ನೀಡಿದರು.

ಹಾವೇರಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರವನ್ನು ಬ್ಲಾಸ್ಟ್ ಮಾಡಬೇಕು ಎಂಬ ಪಿಎಫ್‍ಐನವರ (PFI) ಸಂಚು ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಎಟಿಎಸ್‍ನವರು ಬಂಧನ ಮಾಡಿದ ನಂತರ ಐವರು ಈ ಬಗ್ಗೆ ಬಾಯಿಬಿಟ್ಟಿದ್ದಾರೆ. ರಾಮ ಮಂದಿರವನ್ನು ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ ಐವರನ್ನು ಎಟಿಎಸ್‌ನವರು ಬಂಧಿಸಿದ್ದು ಮತ್ತು ಪಿಎಫ್‍ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ ಎಂದರು.

pfi rammandira

ಬಾಬರ್ ದೇವಸ್ಥಾನವನ್ನು ಒಡೆದು ಮಸೀದಿ ಕಟ್ಟಿದ್ದಾರೆ ಎನ್ನುವುದನ್ನು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅದನ್ನು ಧಿಕ್ಕರಿಸಿ ಬಾಬ್ರಿ ಮಸೀದಿ (Babri Masjid) ಕಟ್ತೀವಿ ಅನ್ನೋದು ಡೇಂಜರಸ್ ಮಾನಸಿಕತೆ ಇದೆ. ಈ ದೇಶದ ಮಣ್ಣಿನ ಅನ್ನ ತಿಂದು ಭಾರತದ ಇಸ್ಲಾಮಿನ ಕನಸು ಕಾಣ್ತಿರೋದು ಸರಿಯಲ್ಲ. ನಿಮ್ಮ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಳೇ ಚಾಳಿಯನ್ನೇ ಮುಂದುವರಿಸಿದ ಖಾಸಗಿ ಬಸ್‍ಗಳು- ಫ್ಲೈಟ್ ದರಕ್ಕಿಂತಲೂ ದುಬಾರಿ ಟಿಕೆಟ್

ಈ ದೇಶದಲ್ಲಿ ನಿಮಗೆ ಸಾಕಷ್ಟು ಸ್ವಾತಂತ್ರ್ಯ ಕೊಟ್ಟಿದೆ. ಮತ್ತೆ ಬಾಬ್ರಿ ಮಸೀದಿ ಕಟ್ತೀವಿ ಅನ್ನೋದು ಬಾಬರ್‌ನ ಮಾನಸಿಕತೆ. ಬಾಬರ್ ದುಷ್ಟ, ನೀಚ, ಮತಾಂಧ ಮತ್ತು ದೇಶದ್ರೋಹಿ ಇದ್ದ. ಆ ಮಾನಸಿಕತೆ ಪಿಎಫ್‍ಐನ ಮುಸ್ಲಿಂ ಗೂಂಡಾಗಳಲ್ಲಿ ಇದ್ದಿದ್ದು, ಹೊರಗೆ ಬಿದ್ದಿದೆ. ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ ಸರ್ಕಾರ ಇದನ್ನು ತಡೆದಿದ್ದು ಸ್ವಾಗತಾರ್ಹ. ಮುಲ್ಲಾ, ಮೌಲ್ವಿಗಳು ಮತ್ತು ಮುಸ್ಲಿಂ ಮುಖಂಡರು ತಮ್ಮ ಸಮಾಜದ ಯುವಕರಿಗೆ ಈ ದೇಶಕ್ಕೆ, ಕಾನೂನಿಗೆ ಬದ್ಧರಾಗಿರಬೇಕು ಅನ್ನೋದನ್ನು ಹೇಳಿಕೊಡಬೇಕು ಎಂದು ಹೇಳಿದರು.

DEEPAVALI

ಬರುವ ದೀಪಾವಳಿಯನ್ನು (Diwali) ಹಲಾಲ್ (Halal) ಮುಕ್ತ ದೀಪಾವಳಿಗೆ ಅಭಿಯಾನ ಶುರು ಮಾಡಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎಲ್ಲ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಅಭಿಯಾನ ಮಾಡುತ್ತಿದ್ದೇವೆ. ಹಲಾಲ್ ಅನ್ನೋದು ಕುರಾನ್‍ನಲ್ಲಿ ಮಾಂಸದ ಆಹಾರದಲ್ಲಿ ಮಾತ್ರವಿತ್ತು. ಇವತ್ತು ಹಲಾಲ್ ಅನ್ನೋದು ಮಾಂಸದಲ್ಲಿ ಮಾತ್ರವಲ್ಲ, ಎಲ್ಲ ಪದಾರ್ಥಗಳಲ್ಲೂ ಹಲಾಲ್ ಸರ್ಟಿಫಿಕೇಟ್ ಇದೆ. ಇದ್ರಿಂದ ಲಕ್ಷಾಂತರ ಕೋಟಿ ಹಣ ಅಲ್ ಜಮಾಯತ್ ಅಲ್ ಉಲೇಮಾ ಟ್ರಸ್ಟ್ ಅನ್ನೋದಕ್ಕೆ ಜಮಾ ಆಗಿದೆ. ಈ ಹಣ ದುಷ್ಟರಿಗೆ, ಭಯೋತ್ಪಾದಕರಿಗೆ, ಮುಸ್ಲಿಂ ಗೂಂಡಾಗಳಿಗೆ ಹೋಗ್ತಿದೆ. ಇದನ್ನು ತಡೆಯಲು ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸಲ್ಲ, ಆದರೆ ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕ

ಕಾಂತಾರ (Kantara) ಚಿತ್ರ ಇಡೀ ಕರ್ನಾಟಕ ಮಾತ್ರವಲ್ಲ, ದೇಶದಲ್ಲೇ ಕನ್ನಡದ ಡಿಂಡಿಮ ಬಾರಿಸುತ್ತಿದೆ. ಕನ್ನಡದ ನೆಲ, ಸಂಸ್ಕೃತಿಯನ್ನು ಇಡೀ ದೇಶದ ಮೂಲೆ ಮೂಲೆಗೆ ತೆಗೆದುಕೊಂಡು ಹೋಗಿದ್ದಾರೆ. ಇದು ಹೆಮ್ಮೆಯ ವಿಷಯ. ಆದರೆ ಒಬ್ಬ ದುಷ್ಟ, ಒಬ್ಬ ನೀಚ, ಒಬ್ಬ ನಾಸ್ತಿಕವಾದಿ ನಟ ಚೇತನ್ ಕಲ್ಲು ಹಾಕುವ ಪ್ರಯತ್ನ ಮಾಡಿದ್ದು ಖಂಡನೀಯ. ನಮ್ಮ ಹಿಂದೂ ಸಮಾಜ ಒಡೆಯುವ ಪ್ರಕ್ರಿಯೆ ಮಾಡ್ತಿರೋದು ಸರಿಯಲ್ಲ ಎಂದು ಕಿಡಿಕಾರಿದರು.

Kantara

ಕಾಂತಾರ ಬಗ್ಗೆ ಅತ್ಯಂತ ಹೆಮ್ಮೆ ಪಡಬೇಕಾದ ವಿಷಯವಾಗಿದೆ. ಕಾಂತಾರ ಚಿತ್ರದ ತಂಡಕ್ಕೆ ಅಭಿನಂದನೆ ಹೇಳುತ್ತೇನೆ. ಚೇತನ್ ಅವರೇ ನಿಮ್ಮ ಒಡಕು ಬಾಯಿ, ಹಿಂದೂ ವಿರೋಧಿ ಬಾಯಿ, ದೇಶದ್ರೋಹಿ ಬಾಯಿಯನ್ನು ಸ್ವಲ್ಪ ಮುಚ್ಚಬೇಕು. ನೀವು ಒಳ್ಳೆಯ ನಟರಾಗಿರಬೇಕೇ ವಿನಃ ಹಿಂದೂ ವಿರೋಧಿ, ದೇಶದ್ರೋಹಿ ಅಥವಾ ಸಮಾಜ ಕಂಟಕದ ಕೆಲಸವನ್ನು ನಿಮ್ಮಿಂದ ಆಪೇಕ್ಷಿಸಿರಲಿಲ್ಲ. ನಿಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಳ್ಳಿ. ಆದಿವಾಸಿ, ಬುಡಕಟ್ಟು ಜನಾಂಗ ಎಂದು ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡಬೇಡಿ ಎಂದು ಆಗ್ರಹಿಸಿದರು.

ಹಿಂದೂ, ಹಿಂದುತ್ವ ಅನ್ನೋದು ಎಲ್ಲರನ್ನೂ ಜೋಡಿಸುತ್ತಿದೆ. ಇಲ್ಲಿ ಜಾತಿಯಿಲ್ಲ, ಬೇಧವಿಲ್ಲ. ಹಿಂದೂ ಶಬ್ದಕ್ಕೆ ಯಾಕೆ ನಿಮಗೆ ಹೊಟ್ಟೆ ಉರಿತಿದೆ. ನಿಮ್ಮ ಹೇಳಿಕೆ ಕನ್ನಡ ವಿರೋಧಿ. ಕನ್ನಡಕ್ಕೆ ದ್ರೋಹತನವನ್ನು ನೀವು ಮಾಡಬೇಡಿ. ನೀವು ಹುಟ್ಟಿದ್ದು ಅಮೆರಿಕದಲ್ಲಿ, ಬೆಳೆದಿದ್ದು ಅಮೆರಿಕ ಸಂಸ್ಕೃತಿಯಲ್ಲಿ. ಪಬ್, ಕ್ಲಬ್‍ಗಳಲ್ಲಿ ಬೆಳೆದಂಥವರು, ಈ ಮಣ್ಣಿನ ಬಗ್ಗೆ ನಿಮಗೆ ಗೊತ್ತಿಲ್ಲ. ಒಡೆಯುವ ಕೆಲಸ, ದೇಶದ್ರೋಹಿ ಕೆಲಸ ನೀವು ಮಾಡಬೇಡಿ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:DiwaliKantaraPFIpramod muthalikಕಾಂತಾರಪಿಎಫ್‍ಐಪ್ರಮೋದ್ ಮುತಾಲಿಕ್ರಾಮಮಂದಿರ
Share This Article
Facebook Whatsapp Whatsapp Telegram

Cinema Updates

Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
3 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
4 hours ago
Bro code ravi mohan
ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ
4 hours ago
Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
1 day ago

You Might Also Like

Banas River
Crime

ಸ್ನಾನ ಮಾಡಲು ನದಿಗೆ ಇಳಿದಿದ್ದ 8 ಮಂದಿ ಸಾವು – ಮೂವರ ರಕ್ಷಣೆ

Public TV
By Public TV
14 minutes ago
Vatal Nagaraj 1
Bengaluru City

ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

Public TV
By Public TV
21 minutes ago
Digital Arrest of Nigeria Engineer
Bengaluru City

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

Public TV
By Public TV
57 minutes ago
Boyfriend
Bengaluru City

ರಸ್ತೆಯಲ್ಲೇ ಮಹಿಳೆಯರನ್ನ ತಬ್ಬಿಕೊಂಡು ತುಟಿಗೆ ಚುಂಬಿಸ್ತಿದ್ದ – ಬೆಂಗಳೂರಿನ ಬೀದಿ ಕಾಮಣ್ಣ ಪೊಲೀಸ್‌ ವಶಕ್ಕೆ

Public TV
By Public TV
57 minutes ago
Sriramulu 1 1
Bellary

ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ಭಿಕ್ಷುಕರ ದೇಶ ಆಗಿತ್ತು: ಶ್ರೀರಾಮುಲು ವಿವಾದಾತ್ಮಕ ಹೇಳಿಕೆ

Public TV
By Public TV
57 minutes ago
Kalaburagi Murder copy
Crime

ಕಲಬುರಗಿ | ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?