Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

Districts

`ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

Public TV
Last updated: May 24, 2025 4:25 pm
Public TV
Share
3 Min Read
Pranav Foundation
SHARE

– ಮೂರು ತಿಂಗಳಲ್ಲಿ 100ಕ್ಕೂ ಅಧಿಕ ಮಕ್ಕಳು ಶಾಲೆಗೆ ಸೇರ್ಪಡೆ

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗದ ಪೆರೆಜೆ ಗ್ರಾಮದ (Peraje Village) ಸರ್ಕಾರಿ ಶಾಲೆಯೊಂದು ಮಕ್ಕಳ ಕೊರತೆಯಿಂದಾಗಿ ಮುಚ್ಚುವ ಹಂತಕ್ಕೆ ತಲುಪಿತ್ತು. ಪೆರೆಜೆ ಗ್ರಾಮದ ಸೇರಿ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಆ ಶಾಲೆಯೇ ಆಸರೆಯಾಗಿತ್ತು. ಒಂದು ಕಾಲದಲ್ಲಿ ಸಾವಿರಾರು ಮಕ್ಕಳಿಂದ ತುಂಬಿ ತುಳುತ್ತಿದ್ದ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿಲ್ಲ ಎಂದು ಪೋಷಕರು ಮಕ್ಕಳನ್ನು ಆ ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದರು. ಖಾಸಗಿ ಶಾಲೆಗಳನ್ನ (Private School) ಪೋಷಕರು ಮುಖ ಮಾಡಿದ್ರು. ಕ್ರಮೇಣ ದಾಖಲಾತಿ ಕೊರತೆಯಿಂದ ಆ ಶಾಲೆಯೇ ಮುಚ್ಚುವ ಹಂತಕ್ಕೆ ತಲುಪಿತ್ತು. ಇಂತಹ ಪರಿಸ್ಥಿತಿಯಲ್ಲಿ ʻನಿಮ್ಮ ಪಬ್ಲಿಕ್‌ ಟಿವಿʼಯ (Public TV) ಒಂದೇ ಒಂದು ಕರೆಯಿಂದ ಶಾಲೆಗೆ ಮರುಜೀವ ಸಿಕ್ಕಿದೆ. ಹೌದು ʻಪಬ್ಲಿಕ್ ಟಿವಿʼಯು ಗಡಿಭಾಗದ ಸರ್ಕಾರಿ ಶಾಲೆಯನ್ನು ಉಳಿಸಬೇಕೆಂದು ಪ್ರಣವ್ ಫೌಂಡೇಶನ್‌ ಸದಸ್ಯರ ಬಳಿ ಕೇಳಿಕೊಂಡಿತ್ತು. ಇಂದು ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಪೆರಜೆ ಸರ್ಕಾರಿ ಶಾಲೆ ಬೆಳೆದು ನಿಂತಿದೆ.

Pranav Foundation 5

ಹೌದು. ಪೆರಜೆ ಗ್ರಾಮದ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಮಕ್ಕಳಿಗೆ 1982 ರಿಂದ 2000 ಇಸವಿ ವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಈ ಶಾಲೆ ಜ್ಞಾನಾರ್ಜನೆ ನೀಡಿತ್ತು. ಕಾಲಕ್ರಮೇಣ ಈ ಶಾಲೆಯ ಹಿರಿಯ ಶಿಕ್ಷಕರು ನಿವೃತ್ತಿ ಹೊಂದಿದರು. ಇದರಿಂದ ಹೊಸ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಮೂಲ ಸೌಕರ್ಯಗಳಿಲ್ಲ ಎನ್ನುವ ಕಾರಣಕ್ಕಾಗಿ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾದರು. ಇದರಿಂದ ಇಡೀ ಶಾಲೆಯೇ ವಿದ್ಯಾರ್ಥಿಗಳಿಲ್ಲದೇ ಬಣಗುಡುತ್ತಿತ್ತು. ಶಿಕ್ಷಣ ಇಲಾಖೆ ಕೂಡ ಶಾಲೆಯನ್ನು ಮುಚ್ಚುವಂತೆ ಆದೇಶ ನೀಡಿತ್ತು. ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ – ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶ

Pranav Foundation 4

ಇದಾದ ಬಳಿಕ ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ನಮ್ಮ ಮಡಿಕೇರಿಯ ʻಪಬ್ಲಿಕ್ ಟಿವಿʼ ಜಿಲ್ಲಾ ವರದಿಗಾರ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಶಾಲೆಯನ್ನ ಉಳಿಸಿಕೊಂಡುವಂತೆ ಮನವಿ ಮಾಡಿದ್ರು. ಬಳಿಕ ʻಪಬ್ಲಿಕ್‌ ಟಿವಿʼ ಪ್ರಣವ್ ಫೌಂಡೇಶನ್‌ಗೆ ಸಸ್ಯರಿಗೆ ಕರೆ ಮಾಡಿ ಪರಿಸ್ಥಿತಿಯನ್ನ ಮನವರಿಕೆ ಮಾಡಿಕೊಟ್ಟಿತ್ತು. ನಂತರ ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಪ್ರಣವ್ ಫೌಂಡೇಶನ್‌ನ ಸದಸ್ಯರು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಬಳಿಕ ಮೂರೇ ತಿಂಗಳ ಅವಧಿಯಲ್ಲಿ ಶಾಲೆಯ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಿದ್ದಾರೆ. ಯಾವ ಖಾಸಗಿ ಶಾಲೆಗೂ ಕಮ್ಮಿ ಇಲ್ಲದಂತೆ ಶಾಲೆಯ ವಾತಾವರಣವನ್ನ ಬದಲಾಯಿಸಿದ್ದಾರೆ. ಇದನ್ನೂ ಓದಿ: ಸಿಇಟಿ ಫಲಿತಾಂಶ ಪ್ರಕಟ – ಟಾಪರ್‌ಗಳು ಯಾರು?

Pranav Foundation 6

5 ದಶಕಗಳನ್ನು ಪೂರೈಸಿದ ಪೆರೆಜೆ ಗ್ರಾಮದ ಜ್ಯೋತಿ ಪ್ರೌಢಶಾಲೆ ಸಂಪೂರ್ಣವಾಗಿ ಶಿಥಿಲಗೊಂಡಿತ್ತು. ಸುಣ್ಣ-ಬಣ್ಣ ಕಾಣದೇ ಅದೆಷ್ಟೋ ವರ್ಷಗಳಾಗಿತ್ತು. ಈ ಶಾಲೆಯನ್ನ ಮೇಲ್ದರ್ಜೆಗೆ ತೆಗೆದುಕೊಂಡು ಹೋಗಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ಶಾಲೆಯನ್ನು ದತ್ತು ಪಡೆದ ಪ್ರಣವ್ ಫೌಂಡೇಶನ್‌ನ ಸದಸ್ಯರು ಆಧುನಿಕ ಸ್ಪರ್ಶ ನೀಡಿದ್ದಾರೆ‌. ಈ‌ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಉಚಿತ ಶೈಕ್ಷಣಿಕ ಪ್ರವಾಸ, ಉಚಿತ ಕಲಿಕಾ ಸಾಮಗ್ರಿ, ಕಂಪ್ಯೂಟರ್ ಡಿಜಿಟಲ್ ಶಿಕ್ಷಣ, ಡಿಜಿಟಲ್ ಗ್ರಂಥಾಲಯ, ಸ್ಪೋಕನ್‌ ಕ್ಲಾಸ್, ಪೌಷ್ಠಿಕ ಆಹಾರ ಸೌಲಭ್ಯ ಕಲ್ಪಿಸಿರುವುದಲ್ಲದೇ, ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸ್ಕೂಲ್ ಬಸ್ ಸೌಲಭ್ಯ ಸಹ ಕಲ್ಪಿಸಿದ್ದಾರೆ. ಇದನ್ನೂ ಓದಿ: ನಿರಂತರ ಮಳೆ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ಜೀವಕಳೆ – ರೈತರ ಮೊಗದಲ್ಲಿ ಮಂದಹಾಸ

Pranav Foundation 2

ಇನ್ನೂ ಈ ಶಾಲೆಗೆ ಶಿಕ್ಷಕರು ಇಲ್ಲದೇ ಶಾಲೆಗಳಿಗೆ ಮಕ್ಕಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ‌ ಎಂದು ಅರಿತ ಸದಸ್ಯರು ಶಾಲೆಗೆ ಸುತ್ತಮುತ್ತಲಿನಲ್ಲಿ‌ ಇರುವಂತಹ ಅತೀ ಹೆಚ್ಚು ಓದಿರುವ ಯುವತಿಯರನ್ನೇ ಅತಿಥಿ ಶಿಕ್ಷಕನಾಗಿ ನೇಮಕ ಮಾಡಿಕೊಂಡಿದ್ದಾರೆ.

Pranav Foundation 3

ಅಷ್ಟೇ ಅಲ್ಲದೇ ಇಲ್ಲಿರುವ ಸುಮಾರು 5-6 ಶಿಕ್ಷಕರಿಗೆ ಪ್ರಣವ್ ಫೌಂಡೇಶನ್‌ನ ಸದಸ್ಯರೇ ದಾನಿಗಳ ನೆರವಿನಿಂದ ಪ್ರತಿ ತಿಂಗಳು ತಲಾ ಒಬ್ಬ ಶಿಕ್ಷಕರಿಗೆ 12,000 ರಿಂದ 60,0000 ರೂ.ವರೆಗೆ ವೇತನ ನೀಡುತ್ತಿದ್ದಾರೆ. ಇಂತಹ ಕೆಲಸ ಮಾಡುವುದಕ್ಕೆ ʻಪಬ್ಲಿಕ್ ಟಿವಿʼಯ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ ಸರ್ ಪ್ರೇರಣೆ ಎನ್ನುತ್ತಾರೆ ಪ್ರಣವ್ ಫೌಂಡೇಶನ್‌ನ ಸದಸ್ಯರು‌.

TAGGED:government schoolhr ranganathKodaguPranav FoundationPublic TVಪಬ್ಲಿಕ್ ಟಿವಿಪೆರಜೆ ಗ್ರಾಮಪ್ರಣವ್‌ ಫೌಂಡೇಶನ್‌ಸರ್ಕಾರಿ ಶಾಲೆಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

child died in Haveri bus Accident
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
2 minutes ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
27 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
38 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
48 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
57 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?