ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಪ್ರಮಾಣ ವಚನ ಸ್ವೀಕಾರ

Public TV
1 Min Read
HIGH COURT JUDGE

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ (High Court) ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ (Prasanna balachandra Varale) ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.

ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ: ಮುರುಘಾ ಮಠದಲ್ಲಿ ಮಗು ಪತ್ತೆ – ಮಗುವಿನ ಹಿನ್ನೆಲೆ ಬಗ್ಗೆ ರೋಚಕ ಟ್ವಿಸ್ಟ್

HIGH COURT JUDGE 1

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಸಚಿವ ಗೋವಿಂದ್ ಕಾರಜೋಳ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದರು. ಇದನ್ನೂ ಓದಿ: ಬೆಂಗಳೂರು ಹೋಟೆಲ್‌ ಮಾಲೀಕರಿಗೆ ಗುಡ್‌ನ್ಯೂಸ್‌ – ಮಧ್ಯರಾತ್ರಿ 1 ಗಂಟೆವರೆಗೂ ಹೋಟೆಲ್‌ ತೆರೆಯಲು ಅನುಮತಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *