ಮೈಸೂರು: ಪ್ರತಾಪ್ ಸಿಂಹ (Prathap Simha) 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ನೂರಕ್ಕೆ ನೂರರಷ್ಟು ಅವರಿಗೆ ಟಿಕೆಟ್ ಸಿಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡರು (GT Deve Gowda) ಸಂಸದರ ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಕಳೆದ 2 ಚುನಾವಣೆಯಲ್ಲಿ ಪ್ರತಾಪ್ ಸಿಂಹ ಬೆಂಬಲಿಸಿದ್ದೆ. ಈಗಲೂ ಬೆಂಬಲಿಸುತ್ತೇನೆ. ಅವರಿಗೆ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಸುಧಾಕರ್, ರಕ್ಷಾರಾಮಯ್ಯ ಚಿಕ್ಕಬಳ್ಳಾಪುರದ ಎಂಪಿ ಆಗಲಿ- ಅಭಿಮಾನಿಗಳಿಂದ ಹರಕೆ
ಟಿಕೆಟ್ ತಪ್ಪುತ್ತೆ ಎಂಬ ವಿಚಾರ ನಮಗೆ ಗೊತ್ತಿಲ್ಲ. ತುಳಿಸಿ ದಾಸಪ್ಪ ನಂತರ ಮೈಸೂರಿನಿಂದ (Mysuru) ಒಕ್ಕಲಿಗರು ಸಂಸದರಾಗಿದ್ದಾರೆ. ಪ್ರತಾಪ್ ಸಿಂಹರಿಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಮಾರ್ಚ್ 13, 14 ಲೋಕಸಭಾ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ: ಡಿಕೆಶಿ
ಟಿಕೆಟ್ ಕೈ ತಪ್ಪೋ ಭೀತಿ: ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಿಜೆಪಿ (BJP) ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ (Yaduveer Wadiyar) ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಕಳೆದ ಕೆಲ ದಿನಗಳಿಂದ ಯದುವೀರ್ ಒಡೆಯರ್ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿರಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್ ಒಡೆಯರ್ ಹೆಸರು ಪ್ರಸ್ತಾಪವಾಗಿದೆ. ಇದನ್ನೂ ಓದಿ: ನಿಪ್ಪಾಣಿ ರಾಮಮಂದಿರದ ಒಂದೇ ಒಂದು ಕಲ್ಲನ್ನೂ ಅಲುಗಾಡಿಸಲು ಆಗಲ್ಲ: ಮುತಾಲಿಕ್
ಅಭಿಯಾನ ಆರಂಭ: ಸಂಸದರಿಗೆ ಟಿಕೆಟ್ ಕೈ ತಪ್ಪುವ ಭೀತಿಯ ಬೆನ್ನಲ್ಲೇ ಸಾರ್ವಜನಿಕರು ಪ್ರತಾಪ್ ಸಿಂಹ ಬೆನ್ನಿಗೆ ನಿಂತಿದ್ದಾರೆ. ಪ್ರತಾಪ್ ಸಿಂಹರಿಗೆ ಟಿಕೆಟ್ ಕೊಡದಿದ್ದರೆ ಹೋರಾಟದ ಜೊತೆಗೆ ನೋಟ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ಕೆಲವರು ಮತ್ತೊಮ್ಮೆ ಪ್ರತಾಪ್ ಸಿಂಹ ಎಂದರೆ, ಇನ್ನೂ ಕೆಲವರು ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಬಗ್ಗೆಯೂ ಪೋಸ್ಟ್ನಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಹಿ ಸಂಗ್ರಹ ಅಭಿಯಾನ ಮಾಡಲಾಗುತ್ತಿದ್ದು, ‘ವಿ ವಾಂಟ್ ಪ್ರತಾಪ್ ಸಿಂಹ’ ಎಂದು ಟ್ರೆಂಡ್ ಸೃಷ್ಟಿಸಲಾಗಿದೆ. ಪ್ರತಾಪ್ ಸಿಂಹ ಕೊಡುಗೆಗಳ ಪಟ್ಟಿ ನೀಡಿ ಟಿಕೆಟ್ ಕೊಡಿ ಅಂತ ಒತ್ತಾಯಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ: ಬಿಎಸ್ವೈ