ರಾಮನಗರ: ಲೋಕಸಭಾ ಚುನಾವಣೆ (Lok Sabha Election) ಹತ್ತಿರ ಹಿನ್ನೆಲೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತೋಟದ ಮನೆಗೆ ಸಂಸದ ಪ್ರತಾಪ್ ಸಿಂಹ (Pratap Simha) ಭೇಟಿ ನೀಡಿ ಧನ್ಯವಾದ ಹೇಳಿದ್ದಾರೆ.
ಬಿಡದಿಯ ಕೇತಗಾನಹಳ್ಳಿ ತೋಟದ ಮನೆಗೆ ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು. ಇದನ್ನೂ ಓದಿ: ದೆಹಲಿಯಲ್ಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆ?
ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ (Vikram Simha) ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹ ಪರವಾಗಿ ಹೆಚ್ಡಿಕೆ ಬ್ಯಾಟಿಂಗ್ ಮಾಡಿದ್ದರು. ಹಾಗಾಗಿ ಇಂದು ಖುದ್ದು ಭೇಟಿಯಾಗಿ ಸಂಸದ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಫೆ.1ಕ್ಕೆ ಕೇಂದ್ರ ಹಣಕಾಸು ಬಜೆಟ್ – ಅಂದೇ ಬಜೆಟ್ ಮಂಡನೆ ಯಾಕೆ?
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಂಡಿರುವ ಪ್ರತಾಪ್ ಸಿಂಹ, ಕಷ್ಟಕಾಲದಲ್ಲಿ ಸತ್ಯಸಂಗತಿ ಜನರ ಮುಂದಿಟ್ಟು ಬೆನ್ನಿಗೆ ನಿಂತಿದ್ದಕ್ಕೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.