ನವದೆಹಲಿ: ಈ ಬಾರಿಯ ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿದ್ದಕ್ಕೆ ನಾನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
- Advertisement 2
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಆಯ್ಕೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಐತಿಹಾಸಿಕ ದಸರಾ ಉದ್ಘಾಟನೆಗೆ ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಯ್ಕೆ ಮಾಡುವುದು ವಾಡಿಕೆ. ಆದರೆ ಈ ವಾಡಿಕೆ ಕೈಬಿಟ್ಟು ರಾಜಕೀಯ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ ಗಣ್ಯರನ್ನು ಮೊದಲ ಬಾರಿಗೆ ಅಯ್ಕೆ ಮಾಡಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆರ್ಎಸ್ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ
- Advertisement 3
- Advertisement 4
ಮೈಸೂರು ಜೊತೆಗೆ ಎಸ್.ಎಂ ಕೃಷ್ಣ ಅವರಿಗೆ ಭಾವನಾತ್ಮಕ ಸಂಬಂಧ ಇದೆ. 20 ವರ್ಷಗಳ ಹಿಂದೆ ಮೈಸೂರು ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದ್ದರು. ನಾಲ್ಕು ಪಥದ ರಸ್ತೆಯನ್ನು ಆ ಕಾಲದಲ್ಲಿ ಮಾಡಿಕೊಟ್ಟರು. ಇದರಿಂದ ಮೈಸೂರು ಅಭಿವೃದ್ಧಿ ಕಂಡಿತ್ತು. ಅಲ್ಲದೇ ರಿಂಗ್ ರೋಡ್ ಕೂಡಾ ಎಸ್ಎಂ ಕೃಷ್ಣ ಅವರ ಕಾಲದಲ್ಲಿ ಆಯ್ತು, ಮೈಸೂರಿಗೆ ಅವರ ಕೊಡುಗೆ ಅಪಾರ ಎಂದು ಎಸ್.ಎಂ ಕೃಷ್ಣ ಅವರನ್ನು ಶ್ಲಾಘಿಸಿದರು. ಇದನ್ನೂ ಓದಿ: ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ – ಆಪ್ ವಿರೋಧ
ಎಸ್.ಎಂ ಕೃಷ್ಣ ಆಯ್ಕೆಯನ್ನು ನಾವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬಿಟ್ಟು, ಪಕ್ಷಗಳ ಚೌಕಟ್ಟು ಹೊರತಾಗಿ ನೋಡಬೇಕು. ಮಾಜಿ ಸಿಎಂ, ಕೇಂದ್ರ ಸಚಿವರು, ಮಾಜಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಪ್ರತಾಪ್ ಸಿಂಹ ಹೇಳಿದರು.