ಧರ್ಮ ಒಡೆಯಲು ಹೋಗಿಲ್ಲವೆಂದು ಹೇಳಲು ಧೈರ್ಯ ಇದೆಯಾ: ಪ್ರತಾಪ್ ಸಿಂಹ ಪ್ರಶ್ನೆ

Public TV
1 Min Read
PRATAP SIMHA

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮನವಿ ಸಲ್ಲಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದನ್ನು ಅವರು ಇಲ್ಲ ಎಂದು ಹೇಳಲು ಧೈರ್ಯ ಇದೆಯಾ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ಧರ್ಮ ಒಡೆಯುವ ಕೆಲಸ ಮಾಡಲು ಹೋಗಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಅವರು ಇಂದು ನಾವು ಏನು ಮಾಡಿಲ್ಲ. ಈ ಪತ್ರ ನಕಲಿ ಎನ್ನುತ್ತಿದ್ದಾರೆ ವಿನಃ ಪತ್ರ ನಕಲಿ ಹೆಡರ್ ಬಗ್ಗೆ ತನಿಖೆ ನಡೆಸದೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂಬ ಕಾರಣಕ್ಕೆ ಪತ್ರಕರ್ತರನ್ನು ಬಂಧನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

mb patil

ಧರ್ಮವನ್ನು ಒಡೆಯೊವುದು ತಪ್ಪಲ್ಲ, ಆದರೆ ಯಾವುದೋ ಲೆಟರ್ ಹೆಡ್ ತಪ್ಪೆಂದು ಪತ್ರಕರ್ತರನ್ನ ಜೈಲಿಗೆ ಕಳಿಸುವುದು ಎಷ್ಟು ಸರಿ? ಲೆಟರ್ ಹೆಡ್ ಬಗ್ಗೆ ತನಿಖೆ ನಡೆಸಬೇಕೆ ವಿನಾ: ರಾಜಕಾರಣ ನಡೆಸೋದು ಸರಿಯಲ್ಲ ಎಂದರು. ಇದೇ ವೇಳೆ ಜಿ.ಟಿ ದೇವೇಗೌಡರ ಹೇಳಿಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಾಯಕರು ಕೂಡ ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಮೈತ್ರಿ ಧರ್ಮ ಎಂದು ಹೇಳಿ ಜೆಡಿಎಸ್ ಪಕ್ಷಕ್ಕೆ ತುಮಕೂರು, ಹಾಸನ, ಮಂಡ್ಯ ಕ್ಷೇತ್ರದಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದರು.

ಸದ್ಯ ಪತ್ರಕರ್ತ ಹೇಮಂತ್ ಅವರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಲು ಇಲ್ಲಿಗೆ ಆಗಮಿಸಿದ್ದು, ಕಾನೂನು ಹೋರಾಟ ಮಾಡಲಾಗುತ್ತದೆ ಎಂದರು.

DEEKESHI copy

ಸ್ಪಷ್ಟನೆ: ಸಚಿವ ಡಿ.ಕೆ ಶಿವಕುಮಾರ್ ಕಾಲಿಗೆ ನಮಸ್ಕಾರಿಸಿದ ಬಗ್ಗೆ ಸ್ಪಷ್ಟನೆ ನೀಡಿ, ಹಿರಿಯರು ಯಾರೇ ಸಿಕ್ಕರೂ ಆರ್ಶೀವಾದ ಪಡೆದುಕೊಳ್ಳುತ್ತೇನೆ. ಇದು ನಮ್ಮ ಸಂಪ್ರದಾಯ. ಕಾಂಗ್ರೆಸ್ ಪಕ್ಷದ ನಾಯಕರಾದ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿದಂತೆ ಹಲವು ನಾಯಕರ ಬಳಿ ಆಶೀರ್ವಾದ ಪಡೆದಿದ್ದೇನೆ. ಆದರೆ ಇದಕ್ಕೆ ರಾಜಕೀಯ ಬಣ್ಣದ ಲೇಪನ ಮಾಡಲಾಗಿದೆ ಎಂದರು.

DEEKESHI copy

Share This Article
Leave a Comment

Leave a Reply

Your email address will not be published. Required fields are marked *