ಮಂಗಳೂರು: ನಮ್ಮದೇ ಸರ್ಕಾರದ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ . ನಮ್ಮ ಮನಸ್ಸಿನಲ್ಲಿ ಎಷ್ಟು ನೋವಿದೆ ಎಂಬುದು ಸರ್ಕಾರಕ್ಕೆ ಗೊತ್ತಾಗಬೇಕು ಎಂದು ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಆಕ್ರೋಶ ಹೊರಹಾಕಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಮ್ಮದೇ ರಾಜ್ಯಾಧ್ಯಕ್ಷರನ್ನು ನಮ್ಮ ಕಾರ್ಯಕರ್ತರು ತಡೆದು ನಿಲ್ಲಿಸಿದ್ದಾರೆ. ಕೊಲೆ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಯಾಕೆ?. ಕೊಲೆ ಮಾಡಿದ ಆರೋಪಿಗಳನ್ನು ಜೈಲಿನಲ್ಲಿ ಇಟ್ಟು ಬಿರಿಯಾನಿ ತಿನ್ನಿಸಬೇಡಿ. ಆರೋಪಿಗಳನ್ನು ಎನ್ಕೌಂಟರ್ ಮಾಡಿ ಮುಗಿಸಿ ಬಿಡಿ ಎಂದು ಆಗ್ರಹಿಸಿದ್ದಾರೆ.
ಎನ್ಕೌಂಟರ್ ಮಾಡುವ ಗಂಡಸ್ತನ ಈ ಸರ್ಕಾರಕ್ಕೆ ಇದೆಯೇ? ಹಿಂದೂ ಸಮಾಜ ಎಚ್ಚೆತ್ತುಕೊಂಡಿದೆ. ಹಿಂದೂ ಸಮಾಜ ಎಚ್ಚೆತ್ತುಕೊಂಡಿದೆ. ಈಗ ನ್ಯಾಯ ಒದಗಿಸುತ್ತಿದ್ದರೆ ನಮಗೆ ಸಮಾಜ ಪಾಠ ಕಲಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ
Live Tv
[brid partner=56869869 player=32851 video=960834 autoplay=true]