ಮಂಗಳೂರು: ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA), ಸುದೀರ್ಘ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಬೆಂಗಳೂರಿನಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯಕ್ಕೆ 1,500 ಪುಟಗಳ ಸುದೀರ್ಘ ಚಾರ್ಜ್ಶೀಟ್ನ್ನು ಎನ್ಐಎ ಸಲ್ಲಿಸಿದೆ. ಚಾರ್ಜ್ಶೀಟ್ನಲ್ಲಿ 240 ಸಾಕ್ಷಿದಾರರ ಹೇಳಿಕೆ ಇದೆ. ಒಟ್ಟು 20 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈವರೆಗೆ 14 ಮಂದಿ ಬಂಧನವಾಗಿದ್ದು, 6 ಮಂದಿಯ ವಾಂಟೆಡ್ ಲಿಸ್ಟ್ ಇದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ
ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಈಗಾಗಲೇ ಬಹುಮಾನ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್ಐಎ ಘೋಷಿಸಿದೆ.
ಹತ್ಯೆ ಪ್ರಕರಣ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ
ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k