ಕರುಣಾನಿಧಿಯವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

Public TV
1 Min Read
MODI KARUNANIDi

ನವದೆಹಲಿ: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥರಾದ ಎಂ. ಕರುಣಾನಿಧಿಯರು ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರ್ಥಿಸಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಎಂ. ಕರುಣಾನಿಧಿಯವರು ಇಂದು ಬೆಳಗ್ಗೆ ಅಸ್ವಸ್ಥಗೊಂಡಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರು ಗೋಪಾಲಪುರಂನಲ್ಲಿರುವ ಅವರ ನಿವಾಸದಲ್ಲೇ ಚಿಕಿತ್ಸೆ ಮುಂದುವರಿಸಿದ್ದಾರೆ. ಅಲ್ಲದೇ ಕರುಣಾನಿಧಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ಪತ್ರಿಕಾ ಪ್ರಕಟಣೆಯನ್ನು ಸಹ ಮಾಡಿದ್ದಾರೆ.

ಕರುಣಾನಿಧಿಯವರ ಅನ್ಯಾರೋಗ್ಯ ಹಿನ್ನೆಲೆಯಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಮೂಲಕ, ಕರುಣಾನಿಧಿಯವರ ಪುತ್ರ ಸ್ಟಾಲಿನ್ ಹಾಗೂ ಮಗಳು ಕನಿಮೋಲಿಯವರೇ, ಕರುಣಾನಿಧಿಯವರ ಆರೋಗ್ಯದಲ್ಲಿ ಏರುಪೇರಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಯಾವುದೇ ನೆರವು ಬೇಕಾಗಿದ್ದಲ್ಲಿ ತಕ್ಷಣ ತಿಳಿಸಿ ಎಂದಿದ್ದಾರೆ. ಅವರು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕರುಣಾನಿಧಿಯವರ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಗಣ್ಯರ ದಂಡೇ ಹರಿದುಬರುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ವ್ಯಾಪಕ ಭದ್ರತೆಯನ್ನು ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *