Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗ ಸಾಧುಗಳು ಯಾರು? ನೇಮಕಾತಿ ಹೇಗೆ ನಡೆಯುತ್ತೆ? ದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಗ ಸಾಧುಗಳು ಯಾರು? ನೇಮಕಾತಿ ಹೇಗೆ ನಡೆಯುತ್ತೆ? ದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?

Latest

ನಾಗ ಸಾಧುಗಳು ಯಾರು? ನೇಮಕಾತಿ ಹೇಗೆ ನಡೆಯುತ್ತೆ? ದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?

Public TV
Last updated: January 19, 2025 12:22 pm
Public TV
Share
3 Min Read
Naga Sadhus 4
SHARE

ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ (Maha Kumbh Mela) ನಾಗ ಸಾಧುಗಳ (Naga Sadhus) ದೀಕ್ಷೆಗಾಗಿ ಅಭ್ಯರ್ಥಿಗಳ ವಿಶಿಷ್ಟ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.

ಸನಾತನ ಧರ್ಮಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಉದ್ದೇಶದಿಂದ ವಿವಿಧ ಅಖಾರಗಳಲ್ಲಿ ನಾಗಗಳು ಸಿದ್ಧರಾಗಿರುವ ಸಾವಿರಾರು ಯುವ ಸನ್ಯಾಸಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದು ಅಖಾರಗಳು ಈಗಾಗಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿವೆ.

ನಾಗಗಳು ಅಂದರೆ ಯಾರು?
‘ನಾಗ’ ಎಂಬ ಪದವು ಪ್ರಾಚೀನ ಕಾಲದಲ್ಲಿ ಭಾರತದ ಕಾಡುಗಳು ಮತ್ತು ಬೆಟ್ಟಗಳಲ್ಲಿ ಅಲೆದಾಡುತ್ತಿದ್ದ ಹಾವಿನ ಆರಾಧಕರ ಪ್ರಾಚೀನ ಬುಡಕಟ್ಟು ಜನಾಂಗವನ್ನು ಸೂಚಿಸುತ್ತದೆ. ನಾಗ ಸಾಧುಗಳು ಶಿವನೇ (Shiva) ದೇವರೆಂದು ನಂಬುತ್ತಾರೆ.

ನಾಗಾ ಸಾಧುಗಳಾಗುವ ಮೊದಲ ಹೆಜ್ಜೆ ಯಾವುದೆಂದರೆ ಮಾರ್ಗದರ್ಶನ ಮಾಡುವ ಗುರುವನ್ನು ಹುಡುಕಬೇಕಾಗುತ್ತದೆ. ಗುರು ಸಿಕ್ಕಿದ ಬಳಿಕ ಕಠಿಣ ತರಬೇತಿ ಮತ್ತು ಶಿಸ್ತಿನ ಅವಧಿಗೆ ಒಳಗಾಗಬೇಕಾಗುತ್ತದೆ. ಇದರಲ್ಲಿ ಧ್ಯಾನ, ಯೋಗ ಮತ್ತು ಇತರ ಆಧ್ಯಾತ್ಮಿಕ ಅಭ್ಯಾಸಗಳು ಸೇರಿವೆ. ಕಟ್ಟುನಿಟ್ಟಾದ ಬ್ರಹ್ಮಚರ್ಯ ನಿಯಮಗಳನ್ನು ಪಾಲಿಸಬೇಕು ಮತ್ತು ಲೌಕಿಕ ಸುಖಗಳಿಂದ ದೂರವಿರಬೇಕಾಗುತ್ತದೆ.

Naga Sadhus 1

ರಹಸ್ಯ ಸಂದರ್ಶನ:
ಅಖಾರ ಸೇರಲು ನೋಂದಣಿ ಫಾರಂ ನೀಡಲಾಗುತ್ತದೆ. ನಾಗ ಸಾಧುಗಳಾಲು ಇಚ್ಛಿಸಿದ ವ್ಯಕ್ತಿಗಳನ್ನು ರಹಸ್ಯವಾಗಿ ಸಂದರ್ಶಿಸಲಾಗುತ್ತಿದೆ. ಜುನಾ, ಶ್ರೀ ನಿರಂಜನಿ, ಶ್ರೀ ಮಹಾನಿರ್ವಾಣಿ, ಆವಾಹನ್, ಅಟಲ್ ಮತ್ತು ಆನಂದ್ ಅಖಾರಗಳಲ್ಲಿನ ಎಲ್ಲಾ ಮಾನದಂಡಗಳನ್ನು ಪೂರೈಸಿದವರನ್ನು ನಾಗ ಸನ್ಯಾಸದ ದೀಕ್ಷೆ ನೀಡಲಾಗುತ್ತದೆ. ಇದನ್ನೂ ಓದಿ: ನನ್ನ ಹಲವು ಪ್ರಶ್ನೆಗಳಿಗೆ ಸನಾತನ ಧರ್ಮದಲ್ಲಿ ಉತ್ತರ ಸಿಕ್ಕಿತು – ಕುಂಭಮೇಳದಲ್ಲಿ ಆಫ್ರಿಕಾದ ಸಾಧು

Naga Sadhus 3

ಪಿಂಡ ಪ್ರದಾನ ಮಾಡುತ್ತಾರೆ ಯಾಕೆ?
ನಾಗ ಸಾಧುಗಳ ದೀಕ್ಷೆ ಪಡೆಯುತ್ತಿರುವ ಮೊದಲ ಬ್ಯಾಚ್‌ ಸದಸ್ಯರಿಗೆ ಗಂಗಾ ನದಿಯ ದಡದಲ್ಲಿ ಆಚರಣೆಯನ್ನು ನಡೆಸಲಾಗಿದೆ. ಪ್ರತಿ ಅಖಾರದಲ್ಲಿ ವಿಭಿನ್ನ ದಿನಗಳಲ್ಲಿ ದೀಕ್ಷೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ಶನಿವಾರ ಜುನಾ ಅಖಾರದಲ್ಲಿ ಸನ್ಯಾಸಿಗಳಿಗೆ ಕೇಶ ಮುಂಡನ ಮಾಡಲಾಗಿದೆ. ಈ ಸನ್ಯಾಸಿಗಳು ತಮ್ಮ ಪಿಂಡ ಪ್ರದಾನ ಮಾಡಬೇಕಾಗುತ್ತದೆ. ಹಿಂದೂ ಧರ್ಮದದಲ್ಲಿ ತಮ್ಮ ಮನೆಯವರು, ಕುಟುಂಬಸ್ಥರು ಅಗಲಿದಾಗ ಅವರಿಗೆ ಗೌರವ ಸಲ್ಲಿಸುವ ಪರಿಯನ್ನು ಪಿಂಡ ಪ್ರದಾನ ಎನ್ನಲಾಗುತ್ತದೆ. ಆದರೆ ನಾಗಗಳಾದವರು ಜೀವಂತವಾಗಿದ್ದರೂ, ಭೌತಿಕ ಪ್ರಪಂಚದೊಂದಿನ ಸಂಬಂಧವನ್ನು ಕಡಿತಗೊಳಿಸಬೇಕಾಗುತ್ತದೆ. ಸಂಬಂಧ ಕಡಿತಗೊಳಿಸುವ ಸಲುವಾಗಿ ತಮ್ಮ ಪಿಂಡವನ್ನೇ ಪ್ರದಾನ ಮಾಡುತ್ತಾರೆ.

ನಾಗಾದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?
ಕೇಶ ಮುಂಡನ ಮತ್ತು ಪಿಂಡ ದಾನದ ನಂತರ ಮೌನಿ ಅಮಾವಾಸ್ಯೆಯ ಅಮೃತ ಸ್ನಾನ ಹಬ್ಬದ ರಾತ್ರಿ ನಾಗ ಸಾಧುವಾಗಲು ಸಂಪೂರ್ಣ ದೀಕ್ಷೆಯನ್ನು ನಡೆಸಲಾಗುತ್ತದೆ. ಎಲ್ಲಾ ಅಭ್ಯರ್ಥಿಗಳು ಧರ್ಮದ ಧ್ವಜದ ಅಡಿಯಲ್ಲಿ ವಿವಸ್ತ್ರವಾಗಿ ನಿಲ್ಲುತ್ತಾರೆ. ಆಚಾರ್ಯ ಮಹಾಮಂಡಲೇಶ್ವರರು ಅವರನ್ನು ವಿಧಿವಿಧಾನಗಳೊಂದಿಗೆ ನಾಗರಾಗಲು ದೀಕ್ಷೆ ನೀಡುತ್ತಾರೆ. ಸಭಾಪತಿ (ಸಮಾರಂಭದ ಅಧ್ಯಕ್ಷತೆ ವಹಿಸುವ ವ್ಯಕ್ತಿ) ಅವರಿಗೆ ಅಖಾರದ ನಿಯಮಗಳು ಮತ್ತು ನಿಯಮಗಳ ಬಗ್ಗೆ ತಿಳಿಸುತ್ತಾರೆ ಮತ್ತು ಪ್ರತಿಜ್ಞೆಯನ್ನು ಬೋಧಿಸುತ್ತಾರೆ. ಪ್ರಕ್ರಿಯೆ ಪೂರ್ಣಗೊಂಡ ನಂತರ ಎಲ್ಲರನ್ನೂ ಅಮೃತ ಸ್ನಾನಕ್ಕೆ ಕಳುಹಿಸಲಾಗುತ್ತದೆ. ಅಮೃತ ಸ್ನಾನದ ರಾತ್ರಿಯಂದು ಇವರ ನಾಗಾದೀಕ್ಷೆ ಪೂರ್ಣಗೊಳ್ಳುತ್ತದೆ. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು

Naga Sadhus 2

ಮೂರು ಹಂತಗಳಲ್ಲಿ ಪರಿಶೀಲನೆ:
ಜುನಾ ಅಖಾರದಲ್ಲಿ ಸುಮಾರು 2,000 ಜನರಿಗೆ ನಾಗ ಸನ್ಯಾಸಕ್ಕೆ ದೀಕ್ಷೆ ನೀಡಿದರೆ ಶ್ರೀ ನಿರಂಜನಿ ಅಖಾರದಲ್ಲಿ ಸುಮಾರು 1,100 ಮಂದಿಯನ್ನು ನಾಗಾ ಸನ್ಯಾಸಿಗಳನ್ನಾಗಿ ಮಾಡಲಾಗುತ್ತದೆ. ಅದೇ ರೀತಿಯಾಗಿ ಶ್ರೀ ಮಹಾನಿರ್ವಾಣಿ, ಅಟಲ್, ಆನಂದ್ ಮತ್ತು ಆವಾಹನ ಅಖಾರಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗಿದೆ.

ಅರ್ಜಿದಾರರನ್ನು ಮೂರು ಹಂತಗಳಲ್ಲಿ ಸಂಪೂರ್ಣವಾಗಿ ಅವರ ವಿವರವನ್ನು ಪರಿಶೀಲಿಸಲಾಗುತ್ತದೆ. ಈ ಪರಿಶೀಲನಾ ಪ್ರಕ್ರಿಯೆ ಆರು ತಿಂಗಳ ಮೊದಲೇ ಆರಂಭವಾಗುತ್ತದೆ. ಅಖಾರದ ಠಾಣಾಪತಿ ಅಷ್ಟಕೋಶಲ್ ಮಹಂತ್, ಅಭ್ಯರ್ಥಿಯ ವಿವರ ಮತ್ತು ಆತನ ಚಟುವಟಿಕೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಾರೆ. ಪರಿಶೀಲನೆ ನಡೆಸಿದ ಬಳಿಕ ವರದಿಯನ್ನು ಅಖಾರದ ಆಚಾರ್ಯ ಮಹಾಮಂಡಲೇಶ್ವರರಿಗೆ ನೀಡಲಾಗುತ್ತದೆ. ಆಚಾರ್ಯ ಮಹಾಮಂಡಲೇಶ್ವರರು ಅಖಾರದ ಪಂಚರಿಂದ ಮತ್ತೆ ಪರಿಶೀಲನೆ ನಡೆಸುತ್ತಾರೆ.

ಅರ್ಜಿಗಳ ಪರಿಶೀಲನೆಯ ಸಮಯದಲ್ಲಿ ಜುನಾ ಅಖಾರ 53 ಮಂದಿಯನ್ನು ಮತ್ತು ನಿರಂಜನಿ ಅಖಾರ 22 ಜನರನ್ನು ಅನರ್ಹಗೊಳಿಸಿದೆ.

TAGGED:maha kumbh melaNaga SadhuSadhuuttar pradeshಉತ್ತರ ಪ್ರದೇಶನಾಗ ಸಾಧುಪ್ರಯಾಗ್ರಾಜ್ಮಹಾ ಕುಂಭಮೇಳ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
4 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
30 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
30 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
45 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?