Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

Districts

Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

Public TV
Last updated: August 19, 2024 10:02 pm
Public TV
Share
3 Min Read
HD Kumaraswamy 2
SHARE

ಹಾಸನ: Who Is That Preetham Gowda? ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪ್ರಶ್ನೆ ಮಾಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರ ಪ್ರಶ್ನೆಗೆ ಪ್ರೀತಂ ಗೌಡ (Preetham Gowda) ಉತ್ತರ ಕೊಟ್ಟಿದ್ದಾರೆ.

ಹಾಸನದಲ್ಲಿ (Hassan) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರೀತಂಗೌಡ ಯಾರು ಎಂಬ ಪ್ರಶ್ನೆಗೆ ನಮ್ಮ ನಾಯಕರು ಉತ್ತರ ಕೊಟ್ಟಿದ್ದಾರೆ. ಪ್ರೀತಂ ಗೌಡ ಓರ್ವ ಸಾಮಾನ್ಯ ಕಾರ್ಯಕರ್ತ ಅನ್ನೋದನ್ನ ಅವರ ಗಮನಕ್ಕೆ ತಂದಿದ್ದಾರೆ. ಹಾಗಾಗಿ ನಾನು ಅದರ ಬಗ್ಗೆ ಹೆಚ್ಚೇನು ಹೇಳುವುದಿಲ್ಲ ಎಂದು ಉತ್ತರಿಸಿದ್ದಾರೆ.

Preetham Gowda

ಕೆಂಡಾಮಂಡಲವಾಗಿದ್ದ ಹೆಚ್‌ಡಿಕೆ:
ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ಇತ್ತೀಚೆಗೆ ಹೆಚ್‌ಡಿ ಕುಮಾರಸ್ವಾಮಿ ಮಾತನಾಡಿದ್ದರು. ದೇವೇಗೌಡರ (Devegowda) ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಯಾರದು ಪ್ರೀತಂ ಗೌಡ? ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟವನನ್ನ ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ. ಸಹಿಸಿಕೊಳ್ಳೋದಕ್ಕೆ ಒಂದು ಮಿತಿಯಿದೆ ಎಂದು ಕಿಡಿಕಾರಿದ್ದರು.

ಸುದ್ದಿಗೋಷ್ಠಿಯಲ್ಲಿ ಮುಂದುವರಿದು ಮಾತನಾಡಿದ ಪ್ರೀತಂ ಗೌಡ, ಮೈತ್ರಿ ಧರ್ಮ ಪಾಲನೆ ಮಾಡುಬೇಕು ಅನ್ನೋದು ರಾಷ್ಟ್ರೀಯ, ರಾಜ್ಯ ನಾಯಕರ ಸದುದ್ದೇಶ. ಅಧಿಕಾರ ಸಮಬಲವಾಗಿ ಹಂಚಿಕೆಯಾಗಬೇಕು. ಮೈತ್ರಿ ಧರ್ಮವನ್ನು ಎಲ್ಲರೂ ಪಾಲನೆ ಮಾಡಬೇಕು. ಎಲ್ಲಾ ಸದಸ್ಯರ ಅಭಿಪ್ರಾಯದೊಂದಿಗೆ ಪಾಲನೆ ಮಾಡಬೇಕು. ಎರಡು ಪಕ್ಷಕ್ಕೆ ಬಹುಮತ ಇಲ್ಲದಿರುವುದರಿಂದ ಅಧಿಕಾರ ಹಂಚಿಕೆಯಾಗಬೇಕು. ಕಾರ್ಯಕರ್ತರ ಚುನಾವಣೆ, ವೈಯಕ್ತಿಕ ಪ್ರತಿಷ್ಠೆಗೆ ಆಸ್ಪದ ಕೊಡಬಾರದು ಎಂದು ಹೇಳಿದ್ದಾರೆ.

ಮೈತ್ರಿ ಆಗಿರುವುದು ರಾಷ್ಟ್ರೀಯ ಮಟ್ಟದಲ್ಲಿ, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಅವರಿಗೂ ಕೂಡ ಬದ್ಧತೆ ಇರಬೇಕು. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಆಗಿರುವ ಮೈತ್ರಿ, ಇದರಲ್ಲಿ ಯಾವುದೇ ಗೊಂದಲ ಬೇಡ. ಹಾಸನ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಧರ್ಮ ಪಾಲಿಸಲಾಗುವುದು. ಅಧಿಕಾರ ಸಮಾನಾಗಿ ಹಂಚಿಕೆಯಾಗಲಿದೆ. ಹಾಸನ ನಗರಸಭೆಯಲ್ಲಿ ಮೊದಲ ಹತ್ತು ತಿಂಗಳು ಬಿಜೆಪಿ ಅಧಿಕಾರ ಕೊಡಬೇಕು ಎನ್ನುವ ಭಾವನೆ ಇದೆ. ಅದನ್ನು ಬಿಜೆಪಿ ಜಿಲ್ಲಾಧ್ಯಕ್ಷರು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನಿಂದ ತಪ್ಪಾಗಬಾರದು ಅಂತ ಸಹಮತ ನೀಡುತ್ತಿದ್ದೇನೆ:
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಕಡಿಮೆ ಮತಗಳು ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಧಾನ ಪರಿಷತ್ ಚುನಾವಣೆ ಆಯ್ತು. ವಿವೇಕಾನಂದ ಅವರು ನಮ್ಮ ಮನೆಗೆ ಭೇಟಿ ನೀಡಿ ಸಹಕಾರ ಕೇಳಿದ್ರು. ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೇಗೌಡರು ಫೋನ್ ಮಾಡಿದ್ರು. ನಮ್ಮ ರಾಜ್ಯಾಧ್ಯಕ್ಷರ ಸೂಚನೆಯು ಇತ್ತು. ಪ್ರಾಮಾಣಿಕವಾಗಿ ವಿವೇಕಾನಂದರ ಗೆಲುವಿಗೆ ಕೆಲಸ ಮಾಡಿದ್ರು. ಆದ್ರೆ ಇದು ಕಾರ್ಯಕರ್ತರ ಚುನಾವಣೆ, ವೈಯುಕ್ತಿಕ ಪ್ರತಿಷ್ಠಿಗೆ ಆಸ್ಪದ ಕೊಡಬಾರದು. ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರ ಹಂಚಿಕೆಯಾಗಬೇಕು. ನನ್ನಿಂದ ಯಾವುದೇ ತರಹದ ತಪ್ಪುಗಳು ಆಗಬಾರದೆಂದು ಸಹಮತ ನೀಡುತ್ತಿದ್ದೇನೆ ಎಂದಿದ್ದಾರೆ.

ನನ್ನಿಂದ ಯಾವುದೇ ರೀತಿಯ ಚಿಕ್ಕ ಲೋಪವಾಗಬಾರದು. ಸಾಂದರ್ಭಿಕ ಸಮಯದಲ್ಲಿ ಕೆಲವು ಸಾಂದರ್ಭಿಕ ಮತಗಳನ್ನು ಪಡೆದು ಹಾಸನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಾಂದರ್ಭಿಕ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಸಾಂದರ್ಭಿಕ ಶಾಸಕರು ವಿಫಲರಾಗಿದ್ದಾರೆ. ಅವರಿಗೆ ಯಾವ ಸಂದರ್ಭದಲ್ಲಿ ಯಾರು ವೋಟು ಹಾಕಿದ್ರು ಅಂತ ಎಲ್ಲರಿಗೂ ಗೊತ್ತಿದೆ. ಆ ವೋಟುಗಳನ್ನು ಅವರು ಹಿಡಿದು ಇಟ್ಟುಕೊಳ್ಳಬೇಕಿತ್ತು. ಸಾಂದರ್ಭಿಕ ಮತಗಳು ಗಟ್ಟಿ ಇಲ್ಲದ ಸಂದರ್ಭದಲ್ಲಿ ಬೇರೆ ಬೇರೆ ಪಕ್ಷಗಳಿಗೆ ಹೋಗುತ್ತೆ. ಸಾಂದರ್ಭಿಕ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಚುನಾಯಿತರಾದವರಿಗೆ ಅವರ ಶಕ್ತಿ ಈ ಚುನಾವಣೆಯಲ್ಲಿ ಗೊತ್ತಾಗಿದೆ. ಶಾಸಕರು 84 ಸಾವಿರ ಮತಗಳನ್ನು ಪಡೆದಿದ್ದರು. ಲೋಕಸಭಾ ಚುನಾವಣೆಯಲ್ಲಿ 68 ಸಾವಿರ ಮತಗಳು ಬಂದಿವೆ. ಮೈತ್ರಿ ಧರ್ಮ ಪಾಲನೆ ಮಾಡಿದ್ದಕ್ಕೆ 68 ಸಾವಿರ ಮತಗಳು ಬಂದಿವೆ. ಶ್ರಮಪಟ್ಟು ಮತಗಳಿಸಿರುವುದು ಗಟ್ಟಿಯಾಗಿರುತ್ತೆ. ಇದರಿಂದ ನಗರಸಭೆ ಚುನಾವಣೆಯ ಮೈತ್ರಿ ಅನಿವಾರ್ಯತೆ ಏನು ಎಂಬುದು ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ.

ಇನ್ನೂ ಪಾದಯಾತ್ರೆಯಲ್ಲಿ ಕಡಗಣನೆ ವಿಚಾರ ಕುರಿತು ಮಾತನಾಡಿ, ಪಾದಯಾತ್ರೆಯಲ್ಲಿ ಎಲ್ಲಾ ಕಡೆ ಕಾಣಿಸಿಕೊಂಡಿದೆ. ಅದಕ್ಕೆ ಸೂಕ್ತ ಸಮಯದಲ್ಲಿ ಸೂಕ್ತವಾದ ಉತ್ತರ ಸಿಗುತ್ತೆ. ನನ್ನ ರಾಜಕಾರಣ ಲಾಂಗ್ ಟರ್ಮ್. ನಮ್ಮ ಪಕ್ಷದ ಹಿರಿಯರು ಮಾರ್ಗದರ್ಶನ ಕೊಟ್ಟಿದ್ದಾರೆ. ನಮ್ಮ ಮನೆಯ ಹಿರಿಯರು ಬುದ್ಧಿ ಮಾತು ಹೇಳ್ತಾರೆ. ಅದನ್ನು ಆಶೀರ್ವಾದ ಅಂತ ತಗೋತಿನಿ. ನನ್ನದು ಬಹಳ ದೀರ್ಘವಾದ ರಾಜಕಾರಣ. ಸಾಂದರ್ಭಿಕವಾಗಿ ನಡೆಯುವ ಘಟನೆಗಳಿಗೆ, ಸಾಂದರ್ಭಿಕವಾಗಿ ದೃತಿಗೆಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

TAGGED:BJP-JDS Alliancehassanhd kumaraswamyPreetham gowdaಪ್ರೀತಂ ಗೌಡಬಿಜೆಪಿ-ಜೆಡಿಎಸ್‌ ಮೈತ್ರಿಹಾಸನಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
20 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
47 minutes ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
58 minutes ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?