ಬಳ್ಳಾರಿ: ಮಾಜಿ ಶಾಸಕ ಸೂರ್ಯ ನಾರಾಯಣ ಅವರ ಮಗ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಹಿನ್ನೆಲೆಯಲ್ಲಿ ಮಂಗಳಮುಖಿಯರ ಮೊರೆ ಹೋಗಿದ್ದಾರೆ.
ನಾರಾ ಭರತ್ ರೆಡ್ಡಿ ಮಂಗಳಮುಖಿಯರಿಗೆ ಉಡಿತುಂಬುವ ಮೂಲಕ ವಿಶೇಷ ಪೂಜೆ ಪುರಸ್ಕಾರ ಮಾಡಿದ್ದಾರೆ. ಭರತ್ ರೆಡ್ಡಿಯವರು ಕಾಂಗ್ರೆಸ್ ಪಕ್ಷದಿಂದ ಬಳ್ಳಾರಿ ಕ್ಷೇತ್ರಕ್ಕೆ ಸ್ಪರ್ಧೆ ಮಾಡಬೇಕೆಂದು ಯೋಜನೆ ನಡೆಸಿದ್ದಾರೆ. 101 ಮಂಗಳಮುಖಿಯರಿಗೆ ಸೀರೆ, ಬೆಳ್ಳಿ ದೀಪ, ಅರಿಶಿನ ಕುಂಕುಮ ಬಟ್ಟಲು ಸೇರಿದಂತೆ ಇತ್ಯಾದಿ ವಸ್ತುಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ
ಕೇರಳ ಮೂಲದ ಜ್ಯೋತಿಷಿಗಳ ಸಲಹೆ ಮೇರೆಗೆ ಮಂಗಳ ಮುಖಿಯರಿಗೆ ಪೂಜೆ ಸಲ್ಲಿಸಿದ್ದಾರೆ. ಮಂಗಳ ಮುಖಿಯರಿಗೆ ಪೂಜೆ ಮಾಡಿದರೇ ಟಿಕೆಟ್ ಸಿಗುತ್ತದೆ ಹಾಗೂ ನೀವು ಚುನಾವಣೆಯಲ್ಲಿ ಗೆಲ್ಲಬಹುದು ಎನ್ನುವ ನಂಬಿಕೆಯಿದೆ ಎಂದು ಸಲಹೆ ನೀಡಿದ್ದರು. ಇನ್ನೂ ಚುನಾವಣೆಗೆ ಒಂದುವರೆ ವರ್ಷ ಇರುವಾಗಲೇ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದಾರೆ.