Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ವೇಳೆಗೆ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ಸಿದ್ಧತೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಸರಾ ವೇಳೆಗೆ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ಸಿದ್ಧತೆ: ಡಿಕೆಶಿ

Bengaluru City

ದಸರಾ ವೇಳೆಗೆ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ಸಿದ್ಧತೆ: ಡಿಕೆಶಿ

Public TV
Last updated: May 3, 2025 7:09 pm
Public TV
Share
2 Min Read
DK Shivakumar 1
SHARE

ಬೆಂಗಳೂರು: ಈ ವರ್ಷ ದಸರಾ (Dasara) ಹಬ್ಬದ ಜೊತೆಗೆ ಕಾವೇರಿ ಆರತಿ (Cauvery Aarti) ಕಾರ್ಯಕ್ರಮ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಬಿಡಬೇಕಿದೆ. ಕಾವೇರಿ ಆರತಿ ಘೋಷಣೆ ಮಾಡಿದ ನಂತರ ತಮಿಳುನಾಡಿಗೆ 295 ಟಿಎಂಸಿ ನೀರು ಹರಿದಿದೆ. ಆ ಮೂಲಕ 118 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದಿದೆ. ಬೆಂಗಳೂರಿನಲ್ಲೂ ಸ್ಯಾಂಕಿ ಕೆರೆಯಲ್ಲಿ ವಿಶ್ವ ಜಲದಿನದಂದು ಆರತಿ ಕಾರ್ಯಕ್ರಮ ಮಾಡಲಾಗಿತ್ತು ಎಂದು ಡಿಕೆಶಿ (DK Shivakumar) ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದೆ. ಈ ಭಾಗದ ರೈತರು ಭತ್ತ, ಕಬ್ಬು ಬೆಳೆಯುತ್ತಿದ್ದಾರೆ. ಕಾವೇರಿ ಆರತಿ ಕಾರ್ಯಕ್ರಮ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಕೊಡಗಿನಿಂದ ಹಿಡಿದು ಇಡೀ ಕರ್ನಾಟಕದ ಸಂಸ್ಕೃತಿ, ತಮಿಳುನಾಡು ಹಾಗೂ ಕೇರಳ ಸಂಪ್ರದಾಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ನಡೆಸಲು ಚರ್ಚೆ ಮಾಡಲಾಗಿದೆ. ಈ ಕಾರ್ಯಕ್ರಮ ವಾರದಲ್ಲಿ ಎಷ್ಟು ದಿನ ಇರಬೇಕು? ಪೂಜಾ ಕಾರ್ಯಗಳು ಯಾವ ರೀತಿ ನೆರವೇರಬೇಕು ಎಂದು ಚರ್ಚೆ ಮಾಡಲಾಗಿದೆ. ಕಾವೇರಿ ನದಿಯಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುತ್ತಿದೆ. ನಮ್ಮ ಧಾರ್ಮಿಕ ಹಾಗೂ ಸಂಸ್ಕೃತಿ ಒಳಗೊಂಡಂತೆ ಈ ಕಾರ್ಯಕ್ರಮವನ್ನು ನೀರಾವರಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ನಡೆಸಲಾಗುವುದು ಎಂದರು. ಇದನ್ನೂ ಓದಿ: ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಸಭೆ

DK Shivakumar Meeting

ಈ ಕಾರ್ಯಕ್ರಮ ಸಂಬಂಧ ಬಿಡಬ್ಲ್ಯೂಎಸ್‌ಎಸ್‌ಬಿ ಮುಖ್ಯಸ್ಥರಾದ ರಾಮ್ ಪ್ರಸಾತ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮಂಡ್ಯ ಉಪ ಆಯುಕ್ತರು ಇದರ ಉಸ್ತುವಾರಿ ವಹಿಸಲಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ಪೂಜಾ ಕಾರ್ಯಕ್ರಮಗಳ ರೂಪುರೇಷೆ ನೋಡಿಕೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ರೂಪ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜವಾಬ್ದಾರಿ ವಹಿಸಿಕೊಳ್ಳಲಿದೆ. ನೀರಾವರಿ ಇಲಾಖೆಯಿಂದ ಈ ಕಾರ್ಯಕ್ರಮಕ್ಕೆ ಅಗತ್ಯ ಮೂಲಸೌಕರ್ಯ ವಹಿಸಲಾಗುವುದು. ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ಪ್ರವಾಸೋದ್ಯಮ ಇಲಾಖೆ ಸಲಹೆ ನೀಡಲಿದೆ. ಇದರ ಜೊತೆಗೆ ವಿಶೇಷ ದೀಪಾಲಂಕಾರ, ಕಾರಂಜಿ ವ್ಯವಸ್ಥೆ ಮಾಡಲಾಗುವುದು. ಪ್ರವಾಸಿಗರಿಗೆ ಆಕರ್ಷಣೀಯವಾಗಿ ಕಾರ್ಯಕ್ರಮ ರೂಪಿಸಲಾಗಿದ್ದು, ಬೆಂಗಳೂರು, ಮೈಸೂರಿನಿಂದ ಜನರು ಹೋಗಿ ಪೂಜೆ ಸಲ್ಲಿಸಿ ವಾಪಸ್ ಆಗಲು ಅನುಕೂಲವಾಗುವಂತೆ ರಸ್ತೆ ಉನ್ನತೀಕರಣ ಮಾಡಲು ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಳ್ಳಾರಿ | ಪಿಯುಸಿ ಟಾಪರ್‌ಗಳಿಗೆ ಸ್ಕೂಟಿ ಜೊತೆ 5 ಲಕ್ಷ ಸಹಾಯ ಮಾಡಿದ ಜಮೀರ್

ಇನ್ನು ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ಸೇರಿಸಿ ಯೋಜನಾ ಪ್ರಾಧಿಕಾರವನ್ನು ಮಾಡಲು ತೀರ್ಮಾನಿಸಲಾಗಿದೆ. ಉಳಿದಂತೆ ಇದಕ್ಕೆ ಸಂಬಂಧಪಟ್ಟ ಟೆಂಡರ್ ಕರೆಯಲು ಸೂಚಿಸಲಾಗಿದೆ. ನೀರಾವರಿ ಇಲಾಖೆಯಿಂದ ಇದಕ್ಕೆ ಸುಮಾರು 100 ಕೋಟಿಯಷ್ಟು ಹಣ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಕೂಡ ಇದರ ಜವಾಬ್ದಾರಿ ವಹಿಸಲಿವೆ ಎಂದು ಹೇಳಿದರು. ಇದನ್ನೂ ಓದಿ: ತುಮಕೂರಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ

ವಾರಣಾಸಿಯ ಗಂಗಾ ಆರತಿ ತಂಡವೇ ಇಲ್ಲಿಯೂ ಕಾರ್ಯಕ್ರಮ ಮಾಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಾವು ತುಂಗಾ ಆರತಿ, ಕಾವೇರಿ ಆರತಿ ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಇಂತಹ ಕಾರ್ಯಕ್ರಮ ನೋಡಿದ್ದೇವೆ. ನಮ್ಮ ರಾಜ್ಯದ ತಂಡದವರೇ ಈ ಕಾರ್ಯಕ್ರಮ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು| ಯುದ್ಧ ಸನ್ನಿವೇಶ ತಂದ ಕಣ್ಣೀರು – ಭಾರತದಲ್ಲಿ ಹೆಂಡತಿ, ಪಾಕ್‌ನಲ್ಲಿ ಗಂಡ

TAGGED:bengaluruCauvery AartiDasaraDK Shivakumarಕಾವೇರಿ ಆರತಿಡಿಕೆ ಶಿವಕುಮಾರ್ದಸರಾಬೆಂಗಳೂರು
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Techie arrested for cheating on wife DCRE Police Bengaluru 1
Bengaluru City

ಪತ್ನಿಗೆ ವಂಚನೆ – ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗ ಸಿಕ್ಕಿ ಬಿದ್ದ ಟೆಕ್ಕಿ ಅರೆಸ್ಟ್‌

Public TV
By Public TV
14 minutes ago
Gavi Gangadhareshwara Temple
Bengaluru City

ಸಂಕ್ರಾತಿಯಂದು ಗವಿಗಂಗಾಧರನಿಗೆ ಭಾಸ್ಕರನ ನಮನ – 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ

Public TV
By Public TV
23 minutes ago
iran burns as protests rage against khamenei 350 mosques were burned
Latest

ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

Public TV
By Public TV
49 minutes ago
Rahul Gandhi 3
Districts

ಇಂದು ಮೈಸೂರಿಗೆ ರಾಹುಲ್ ಗಾಂಧಿ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 13-01-2026

Public TV
By Public TV
2 hours ago
Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?