ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಡಿ.9 ರಂದು ತಮ್ಮ ಬಾಲ್ಯದ ಗೆಳತಿ ಪ್ರೇರಣಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದಲ್ಲಿ ಧ್ರುವ ವಜ್ರದ ಉಂಗುರ ತೊಡಿಸಿದರೆ, ಪ್ರೇರಣಾ ದೇವತೆಗಳಿರುವ ಚಿನ್ನದ ಉಂಗುರವನ್ನು ತೊಡಿಸಿದ್ದಾರೆ.
ಧ್ರುವ ಸರ್ಜಾ ಅವರು ಆಂಜನೇಯನ ಪರಮ ಭಕ್ತ. ಧ್ರುವರಂತೆಯೇ ಪ್ರೇರಣಾ ಕೂಡ ದೇವರ ಭಕ್ತರಾಗಿದ್ದು, ನಿಶ್ಚಿತಾರ್ಥದಲ್ಲಿ ತಮ್ಮ ಬಾಲ್ಯದ ಗೆಳೆಯ ಧ್ರುವ ಅವರಿಗೆ ಶಿವ, ಪಾರ್ವತಿ, ಗಣೇಶ, ನಂದಿ ಇರುವ ಚಿನ್ನದ ಉಂಗುರವನ್ನು ತೊಡಿಸಿದ್ದಾರೆ.
ಧ್ರುವ ಸರ್ಜಾ ತನ್ನ ಬಾಲ್ಯದ ಗೆಳತಿಗೆ ನಿಶ್ಚಿತಾರ್ಥದಲ್ಲಿ 21 ಲಕ್ಷ ರೂ. ಮೌಲ್ಯದ ವಜ್ರದ ಉಂಗುರವನ್ನು ತೊಡಿಸಿದರು. ಈ ಉಂಗುರದ ವಿಶೇಷವೆನೆಂದರೆ ಮಧ್ಯದಲ್ಲಿರುವ ವಜ್ರದ ಹರಳು 1.45 ಕ್ಯಾರೆಟ್ನ ಡೈಮಂಡ್ ಸಾಲಿಟೇರ್ ಇದ್ದು, ಉಂಗುರದ ಸುತ್ತಲಿನ ವಜ್ರದ ಹರಳುಗಳು 2.600 ಕ್ಯಾರೆಟ್ ಹೊಂದಿದೆ.
ಭಾನುವಾರ ಬನಶಂಕರಿಯ ಆಂಜನೇಯನ ಸನ್ನಿಧಿಯಲ್ಲಿ ಸುಂದರ ಹಸಿರು ಮಂಟಪ, ಪವಿತ್ರ ಗೋವುಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಧ್ರುವ ತಮ್ಮ ಬಾಲ್ಯದ ಗೆಳತಿ ಪ್ರೇರಣಾ ಅವರಿಗೆ 21 ಲಕ್ಷದ ವಜ್ರದ ಉಂಗುರವನ್ನು ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಲಾ ನಿರ್ದೇಶಕ ಅರುಣ್ ಸಾಗರ್ ಅವರು ತೆಂಗಿನ ಗರಿ, ಮಾವಿನ ಎಲೆಯ ಹಸಿರು ತಳಿರು-ತೋರಣಗಳಿಂದ ಕೂಡಿದ ವೇದಿಕೆಯನ್ನು ನಿರ್ಮಿಸಿಕೊಟ್ಟಿದ್ದರು. ಈ ವೇದಿಕೆಯಲ್ಲೇ ಧ್ರುವ ಹಾಗೂ ಪ್ರೇರಣಾ ಉಂಗುರ ಬದಲಾಯಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv