Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಅತ್ಯುತ್ತಮ ಕೆಲಸ ಮಾಡಲಿದ್ದಾರೆ- ಲೋಕಸಭಾ ಎಲೆಕ್ಷನ್ ನಂತ್ರದ ಮೊದಲ ಭಾಷಣದಲ್ಲಿ ಮುರ್ಮು ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಅತ್ಯುತ್ತಮ ಕೆಲಸ ಮಾಡಲಿದ್ದಾರೆ- ಲೋಕಸಭಾ ಎಲೆಕ್ಷನ್ ನಂತ್ರದ ಮೊದಲ ಭಾಷಣದಲ್ಲಿ ಮುರ್ಮು ಹೇಳಿದ್ದೇನು?

Latest

ಮೋದಿ ಅತ್ಯುತ್ತಮ ಕೆಲಸ ಮಾಡಲಿದ್ದಾರೆ- ಲೋಕಸಭಾ ಎಲೆಕ್ಷನ್ ನಂತ್ರದ ಮೊದಲ ಭಾಷಣದಲ್ಲಿ ಮುರ್ಮು ಹೇಳಿದ್ದೇನು?

Public TV
Last updated: June 27, 2024 4:26 pm
Public TV
Share
4 Min Read
Droupadi Murmu
SHARE

– ಸಾಮಾಜಿಕ, ಆರ್ಥಿಕ ಬದಲಾವಣೆಯತ್ತ ಹೆಜ್ಜೆ ಇಡುತ್ತಿದ್ದೇವೆ

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಯವರು ಅತ್ಯುತ್ತಮ ಕೆಲಸಗಳನ್ನು ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಅಂತಾ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

18ನೇ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸಂಸತ್ತಿನಲ್ಲಿ ಇಂದು ಮಾತನಾಡಿದ ಅವರು, ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸಿ ಬಳಿಕ ಮಾತನಾಡಿದ ಮುರ್ಮು ಅವರು ಮೊದಲಿಗೆ ಓಂ ಬಿರ್ಲಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಬಳಿಕ ಓಂ ಬಿರ್ಲಾ ಅವರು ಅತ್ಯುತ್ತಮವಾಗಿ ಕೆಲಸ ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

Droupadi Murmu 1

ಅಪಪ್ರಚಾರಕ್ಕೆ ಚುನಾವಣೆ ಮೂಲಕ ಉತ್ತರ: ಇದೇ ವೇಳೆ ಚುನಾವಣಾ ಆಯೋಗಕ್ಕೂ ಅಭಿನಂದನೆಗಳನ್ನು ಸಲ್ಲಿಸಿದ ಅವರು, ವಿಶ್ವದ ಅತಿದೊಡ್ಡ ಚುನಾವಣೆ, ಜನರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ದಾಖಲೆಯ ಮತದಾನವಾಗಿದೆ. ಕಾಶ್ಮೀರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿತ್ತು. ಆದರೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗಿದೆ ಎಂದು ಹೇಳಿದರು.

ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದೆ. ದೊಡ್ಡ ಆರ್ಥಿಕ, ಸಾಮಾಜಿಕ ಬದಲಾವಣೆಯತ್ತ ಹೆಜ್ಜೆ ಇಡುವ ಬಜೆಟ್ ಇದಾಗಲಿದೆ. ರಾಜ್ಯದ ವಿಕಾಸವೇ ದೇಶದ ವಿಕಾಸ್ ಎನ್ನುವ ಭಾವನೆಯಿಂದ ನಮ್ಮ ಸರ್ಕಾರ ಮುಂದುವರಿಯಲಿದೆ. 12 ರಿಂದ 5 ನೇ ಬಲಿಷ್ಠ ಆರ್ಥಿಕತೆಯಾಗಿ ದೇಶ ಬದಲಾಗಿದೆ. ಕೊರೊನಾ ಮತ್ತು ಯುದ್ಧದ ಪರಿಸ್ಥಿತಿಯಲ್ಲೂ ಭಾರತ ಅಭಿವೃದ್ಧಿ ಸಾಧಿಸಿದೆ. ಸರ್ವಿಸ್ ಸೆಕ್ಟರ್ ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

#WATCH | President Droupadi Murmu addresses a joint session of both Houses of Parliament, she says "My Govt has provided Rs 3.20 lakh crores to the farmers of the country under PM Kisan Samman Nidhi. Since the beginning of the new term of my government, an amount of more than Rs… pic.twitter.com/EMNGRjXV1z

— ANI (@ANI) June 27, 2024

ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್‌: ನಮ್ಮ ಸರ್ಕಾರ ಮೂರನೇ ಬಲಿಷ್ಠ ಆರ್ಥಿಕತೆಯಾಗಲು ಹೊರಟಿದೆ. ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್ ಆಗುತ್ತಿದೆ. ಉದ್ಯೋಗ ಸೃಷ್ಟಿಯಾಗುತ್ತಿವೆ. ಕೃಷಿ ಆಧಾರಿತ ಉದ್ಯಮ ವಿಸ್ತರಣೆ ಮಾಡಲಾಗುತ್ತಿದೆ. ರೈತರಿಗಾಗಿ ಸರ್ಕಾರಿ ಸಂಸ್ಥೆಗಳ ನೆಟ್ವರ್ಕ್ ಮಾಡುತ್ತಿದೆ. ಸಹಕಾರಿ ವಲಯದಲ್ಲಿ ದೊಡ್ಡ ಬದಲಾವಣೆ ಮಾಡುತ್ತಿದೆ. ಸಣ್ಣ ಖರ್ಚು ನಿಭಾಯಿಸಲು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಸಹಾಯ ಮಾಡಲಾಗುತ್ತಿದೆ. ಎಂಎಸ್‍ಪಿಯಲ್ಲಿ ದಾಖಲೆಯ ಸಾಧನೆ ಮಾಡಿದೆ. ವರ್ತಮಾನ ಅಗತ್ಯ ಆಧರಿಸಿ ಕೃಷಿ ವಲಯದಲ್ಲಿ ಬದಲಾವಣೆ ಮಾಡುತ್ತಿದೆ ಎಂದು ತಿಳಿಸಿದರು.

ವಿಶ್ವದ ಹಲವು ದೇಶಗಳನ್ನು ಭಾರತ ಪ್ರೇರೆಪಿಸುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿವೆ. ಗ್ರೀನ್ ಎನರ್ಜಿಗೆ ಭವಿಷ್ಯವಿದೆ. ಈ ಹಿನ್ನೆಲೆ ನಮ್ಮ ಸರ್ಕಾರ ಇದಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಮಹಿಳೆಯರ ಆರ್ಥಿಕ ಸ್ಥಿತಿ ಹೆಚ್ಚಿಸಿದೆ. ಪಿಎಂ ಆವಾಸ್ ಯೋಜನೆಯಡಿ ಮಹಿಳೆಯರಿಗೆ ಹೆಚ್ಚು ಮನೆ ನೀಡಿದೆ. ಮುಂದಿನ ಅವಧಿಯಲ್ಲಿ ಮೂರು ಕೋಟಿ ಮನೆ ನಿರ್ಮಿಸಿ ಹೆಚ್ಚು ಮಹಿಳೆಯರಿಗೆ ನೀಡಲಾಗುವುದು. ಸ್ವಂಸಹಾಯ ಗುಂಪುಗಳಿಗೆ ಆದ್ಯತೆ ನೀಡಲಾಗುತ್ತಿದೆ. ನಮೋ ಡ್ರೋನ್ ಮೂಲಕ, ಲಕ್ ಪತಿ ದೀದಿ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಮಾಡಲಾಗುತ್ತಿದೆ ಎಂದರು.

LOKSABHA

ಮೂಲಭೂತ ಸೌಕರ್ಯಗಳ ಹೆಚ್ಚಳ: ಎರಡು, ಮೂರನೇ ಹಂತದ ನಗರಗಳಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದೆ. ಮಹಾನಗರಗಳಲ್ಲಿ ಮೆಟ್ರೋ ವಿಸ್ತರಣೆಯಾಗುತ್ತಿದೆ. ವಂದೇ ಭಾರತ್ ರೈಲು ಯೋಜನೆ ಆರಂಭವಾಗಲಿದೆ. ನಗರಗಳ ಮೂಲ ಸೌಕರ್ಯ ಹೆಚ್ಚಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಎರಡು ಪಟ್ಟು ಹೆಚ್ಚಿಸಿದೆ. ಹೈಸ್ಪೀಡ್ ರೈಲ್ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಬಾಕಿ ಕಡೆ ಬುಲೆಟ್ ಟ್ರೈನ್ ಸಾಧ್ಯತೆ ಪರಿಶೀಲಿಸಲಾಗುತ್ತಿದೆ. ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಅಸ್ಸಾಂನಲ್ಲಿ ಸೆಮಿ ಕಂಡಕ್ಟರ್ ಉತ್ಪಾದನೆ ಮಾಡಲಾಗುವುದು. ಹತ್ತು ವರ್ಷಗಳಲ್ಲಿ ಅನೇಕ ಸಮಸ್ಯೆ ಬಗೆಹರಿಸಿದೆ. ದೇಶದ ಹಲವು ಕ್ಷೇತ್ರಗಳು ಅಭಿವೃದ್ಧಿ ಕಂಡಿದೆ. ಈಶಾನ್ಯ ರಾಜ್ಯಗಳ ವಿಷಯ ಬರುತ್ತಿದ್ದಂತೆಯೇ ಮಣಿಪುರ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು.

ಮಹಿಳೆಯರಿಗೆ ಬ್ಯಾಂಕ್ ನಲ್ಲಿ ಹೆಚ್ಚು ಬಡ್ಡಿ ನೀಡಲಾಗುತ್ತಿದೆ. ಉಚಿತ ರೇಷನ್, ಕಡಿಮೆ ದರದಲ್ಲಿ ಗ್ಯಾಸ್ ನೀಡಿದ್ದು, ಮಹಿಳೆಯರ ಉಳಿತಾಯ ಹೆಚ್ಚಿದೆ. ವಿದ್ಯುತ್ ಉಚಿತ ಮಾಡಲು ಸೋಲಾರ್ ಹಾಕಿ ಕೊಡಲಾಗುತ್ತಿದೆ. ಎಸ್‍ಸಿ, ಎಸ್ಟಿ ಓಬಿಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಅವರ ಜೀವನ ಬದಲಿಸುವ ಕೆಲಸ ಮಾಡಿದೆ. ಜೀವನ ಭೀಮಾ ಯೋಜನೆ ಮೂಲಕ ಸುರಕ್ಷೆ ನೀಡಲಾಗುತ್ತಿದೆ. ಸರ್ಕಾರ ಬಡವರ ಸೇವೆ ಮಾಡುತ್ತಿದೆ ಎಂದು ಜನರ ಭಾವನೆಗೆ ಬಂದಿದೆ. ಸ್ವಚ್ಛ ಭಾರತ್ ಯೋಜನೆಯನ್ನು ರಾಷ್ಟ್ರೀಯ ವಿಷಯ ಮಾಡಿದೆ. ಕೋಟ್ಯಂತರ ಶೌಚಾಲಯ ನಿರ್ಮಾಣ ಮಾಡಿದೆ. 55 ಕೋಟಿ ಆಯುಷ್ಮಾನ್ ಭಾರತ್ ಯೋಜನೆ ಲಾಭ ಪಡೆದಿದ್ದಾರೆ. ಜನೋಷಧಿ ಮೂಲಕ ಕಡಿಮೆ ದರದಲ್ಲಿ ಔಷಧಿ ನೀಎಲಾಗುತ್ತಿದೆ. ಈ ಬಾರಿ ಆಯುಷ್ಮಾನ್ ಯೋಜನೆ ವಿಸ್ತರಿಸಿದೆ, ವೃದ್ಧರಿಗೆ ಈಗ ಲಾಭ ಸಿಗಲಿದೆ ಎಂದರು.

ಎರಡು ವರ್ಷದ ಹಿಂದೆ ಬ್ಯಾಂಕಿಂಗ್ ವಲಯ ಮುಳುಗಡೆ ತಡೆಯಲು ಪುನಶ್ಚೇತನ ಮಾಡಲಾಯಿತು. ಈಗ ಬ್ಯಾಂಕುಗಳು ಸಾಕಷ್ಟು ಅಭಿವೃದ್ಧಿಯಾಗಿವೆ. ಆರ್ಥಿಕ ಬೆಳವಣಿಗಗಳಿಗೆ ಸಹಕಾರಿಯಾಗಿವೆ. ಸರ್ಕಾರಿ ಬ್ಯಾಂಕ್ ಗಳ ಎನ್‍ಪಿಎ ಕಡಿಮೆಯಾಗಿದೆ. ದೇಶದ ರಕ್ಷಣಾ ವಲಯದಲ್ಲಿ ಹೆಚ್.ಎ.ಎಲ್ ಶಕ್ತಿ ನೀಡುತ್ತಿದೆ. ಡಿಜಿಟಲ್ ಇಂಡಿಯಾಗೆ ಇಡೀ ವಿಶ್ವ ಆಕರ್ಷಣೆಯಾಗಿದೆ. ಎರಡು ಕೋಟಿಗೂ ಅಧಿಕ ವಹಿವಾಟು ನಡೆಸಿ ದಾಖಲೆ ಸಾಧಿಸಿದೆ. ರಕ್ಷಣಾ ವಲಯ ಆತ್ಮ ನಿರ್ಭರ್ ಮಾಡಲು ಸಾಕಷ್ಟು ಕ್ರಮ ತೆಗೆದುಕೊಂಡಿದೆ. ಒಂದು ಲಕ್ಷ ಕೋಟಿಗೂ ಅಧಿಕ ರಕ್ಷಣಾ ವಲಯದಲ್ಲಿ ಭಾರತ ಉತ್ಪಾದನೆ ಮಾಡುತ್ತಿದೆ. ಬ್ರಹ್ಮಾಸ್ ಅನ್ನು ರಫ್ತು ಮಾಡಲಾಗುತ್ತಿದೆ. ಸೈನಿಕರ ಹಿತ ಕಾಯುತ್ತಿದೆ. ಒನ್ ಯಾರ್ಂಕ್ ಒನ್ ಪೆನ್ಷನ್ ಯೋಜನೆ ಜಾರಿ ಮಾಡಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಿಸಿದೆ ಎಂದರು.

ಕೇಂದ್ರ ಸರ್ಕಾರದ ಗ್ರೂಪ್ ಸಿ ಡಿ ಯಲ್ಲಿ ಸಂದರ್ಶನ ರದ್ದು ಮಾಡಿದೆ. ಯುವಕರಿಗೆ ಹೆಚ್ಚು ಉದ್ಯೋಗ ನೀಡಲಾಗುತ್ತಿದೆ. ಹೊಸ ಶಿಕ್ಷಣ ನೀತಿ ಜಾರಿ ಮಾಡಿದೆ. ಭಾರತೀಯ ಭಾಷೆಯಲ್ಲಿ ಎಂಜಿನಿಯರಿಂಗ್ ಮಾಡಬಹುದು. 7 IIT, 16IIIT, 6 IIM, 315 ಮೆಡಿಕಲ್ ಕಾಲೇಜು, 390 ವಿವಿ ನಿರ್ಮಾಣ ಮಾಡಲಿದೆ. ಪೇಪರ್ ಲೀಕ್ ತಡೆಯಲು ಕಾನೂನು ಕ್ರಮ ತೆಗೆದುಕೊಳ್ಳಲು ನನ್ನ ಸರ್ಕಾರ ಬದ್ಧವಾಗಿದೆ. ಅಕ್ರಮ ತಡೆಯಲು ಕಾನೂನು ಜಾರಿ ಮಾಡಿದೆ. ಪರೀಕ್ಷಾ ಸುಧಾರಣೆಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ನಳಂದಾ ಕ್ಯಾಂಪಸ್ ಅಭಿವೃದ್ಧಿಪಡಿಸಿದೆ. ಅದೊಂದು ವಿವಿ ಮಾತ್ರವಲ್ಲ, ಅದು ವಿಶ್ವದ ಜ್ಞಾನಕೇಂದ್ರ. ಇದು ಮುಂದಿನ ದಿನಗಳ ವಿಶ್ವದ ಗಮನ ಸೆಳೆದಿದೆ. ತೀರ್ಥ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದೆ. ಚಂದ್ರಯಾನ ಯಶಸ್ವಿಗೆ ನಾವು ಗರ್ವಪಡಬೇಕು. ದೇಶದ ಬಲಿಷ್ಠ ಆರ್ಥಿಕತೆಯಾಗುತ್ತಿದೆ. ಅತ್ಯುತ್ತಮ ಚುನಾವಣಾ ವ್ಯವಸ್ಥೆಗೆ ಪ್ರಜಾಪ್ರಭುತ್ವದ ತಾಯಿಯಾಗಿರಲು ನಾವು ಗರ್ವ ಪಡಬೇಕು ಎಂದರು.

TAGGED:Droupadi Murmunarendra modipresidentದ್ರೌಪದಿ ಮುರ್ಮನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
51 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
1 hour ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
3 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?