Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಬಜೆಟ್‌ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದಿನಿಂದ ಬಜೆಟ್‌ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ

Latest

ಇಂದಿನಿಂದ ಬಜೆಟ್‌ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ

Public TV
Last updated: January 31, 2024 12:33 pm
Public TV
Share
2 Min Read
droupadi murmu budget session 2024
SHARE

– ವಿವಿಧ ವಲಯಗಳಲ್ಲಿ ಭಾರತೀಯರ ಸಾಧನೆ, ಕೇಂದ್ರದ ಅಭಿವೃದ್ಧಿ ಕಾರ್ಯ ಸ್ಮರಿಸಿದ ಮುರ್ಮು

ನವದೆಹಲಿ: ಹೊಸ ಸಂಸತ್‌ ಭವನದಲ್ಲಿ ಇಂದಿನಿಂದ ಬಜೆಟ್‌ ಅಧಿವೇಶನ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹೊಸ ಸಂಸತ್‌ನಲ್ಲಿ ನನ್ನ ಮೊದಲ ಭಾಷಣ ಎಂದು ಸ್ಮರಿಸಿದ್ದಾರೆ.

ಇಂದಿನಿಂದ ಬಜೆಟ್ ಅಧಿವೇಶನ (Budget Session 2024) ಹಿನ್ನೆಲೆ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದರು, ಹೊಸ ಸಂಸತ್ ‘ಏಕ ಭಾರತ್ ಶ್ರೇಷ್ಠ ಭಾರತ’ದ ಪರಿಕಲ್ಪನೆ ಇದೆ. ಭಾರತದ ಭವಿಷ್ಯದ ಕನಸುಗಳಿವೆ, ನಮ್ಮ ಸಂಸ್ಕೃತಿಗಳಿವೆ. ಇಲ್ಲಿ ಭಾರತದ ಉಜ್ವಲ ಭವಿಷ್ಯ ನಿರ್ಮಾಣವಾಗಲಿದೆ ಎಂದು ಭಾವಿಸುತ್ತೇನೆ. ಎಲ್ಲ ಸದಸ್ಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾಕ್ಕೆ 600 ಕೋಟಿ ಮೌಲ್ಯದ ಕೊಕೇನ್ ಅಕ್ರಮ ರಫ್ತು – ಭಾರತೀಯ ಮೂಲದ ದಂಪತಿಗೆ ಶಿಕ್ಷೆ

new parliament building 2

ಕರ್ತವ್ಯ ಪಥದಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪಿಸಿದೆ. ಪ್ರಧಾನಮಂತ್ರಿಗಳ‌ ಮ್ಯೂಸಿಯಂ ಸ್ಥಾಪಿಸಿದೆ. ಬಿರ್ಸಾ ಮುಂಡಾ ಜನ್ಮ ದಿನಕ್ಕೆ ವಿಶೇಷ ಗೌರವ ನೀಡಿದೆ. ಭಾರತದ ಚಂದ್ರನ ದಕ್ಷಿಣ ಧ್ರುವದಲ್ಲಿ ಧ್ವಜ ಹಾರಿಸಿದ ಮೊದಲ ದೇಶವಾಗಿದೆ. ಸೂರ್ಯನತ್ತ ಉಪಗ್ರಹ ಕಳುಹಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ 100 ಕ್ಕೂ ಅಧಿಕ ಪದಕ ಗಳಿಸಿದೆ. ಅಮೃತ್ ಭಾರತ್ ರೈಲ್ವೆ ಆರಂಭವಾಗಿದೆ. ಭಾರತದ ಏರ್ ಕಂಪನಿ ಅತ್ಯಧಿಕ ವಿಮಾನಗಳ ನಿರ್ಮಾಣಕ್ಕೆ ಆರ್ಡರ್ ನೀಡಿದೆ. ಗುಲಾಮಿ ಕಾಲಘಟ್ಟದ ನ್ಯಾಯ ಪದ್ಧತಿ ಬದಲಾಯಿಸಿದೆ. ಹೊಸ ನ್ಯಾಯಸಂಹಿತೆ ದೇಶಕ್ಕೆ ಸಿಕ್ಕಿದೆ. ಡಿಜಿಟಲ್ ದತ್ತಾಂಶ ಮತ್ತಷ್ಟು ಸುರಕ್ಷಿತವಾಗಿದೆ. ರಾಮಮಂದಿರ ನಿರ್ಮಾಣವಾಗಿದೆ. ಜಮ್ಮು-ಕಾಶ್ಮೀರ 371 ರದ್ದು ಮಾಡಿದ್ದು ಇತಿಹಾಸವಾಗಿದೆ. ತ್ರಿವಳಿ ತಲಾಕ್ ರದ್ದು ಮಾಡಿದೆ. ಬೇರೆ ದೇಶದಿಂದ ಬರುವ ಅಲ್ಪಸಂಖ್ಯಾತರಿಗೆ ನಾಗರಿಕತೆ ನೀಡಿದೆ. ದೇಶದಲ್ಲಿ ಮೊದಲ ಬಾರಿಗೆ ಸಿಡಿಎಸ್ ನೇಮಕವಾಗಿದೆ ಎಂದು ಕೇಂದ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಬಡತನ ನಿರ್ಮೂಲನೆ ಬಗ್ಗೆ ಕೇಳ್ತಾ ಬಂದಿದ್ದೆವು. ಈಗ ಅದನ್ನು ನೋಡುತ್ತಿದ್ದೇವೆ. ನೀತಿ ಆಯೋಗದ ಮಾಹಿತಿ ಪ್ರಕಾರ, 25 ಕೋಟಿ ಜನರು ಬಡತನದಿಂದ ಹೊರ ಬಂದಿದ್ದಾರೆ. ಟಾಪ್ 5 ಆರ್ಥಿಕತೆಯಲ್ಲಿ ಭಾರತ ಸೇರಿಕೊಂಡಿದೆ. ಎಫ್‌ಡಿಐ ದ್ವಿಗುಣಗೊಂಡಿದೆ. ಖಾದಿ ಉತ್ಪಾದನೆ ಮತ್ತು ಮಾರಾಟದಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದೆ. ದಶಕದ ಹಿಂದೆ ಕೆಲವೇ ಕೆಲವು ಸ್ಟಾರ್ಟ್‌ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಸ್ಟಾರ್ಟ್ಅಪ್‌ಗಳಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

ಜಿಎಸ್‌ಟಿಯಿಂದ ಒಂದು ದೇಶ ಒಂದು ಟ್ಯಾಕ್ಸ್ ಕಲ್ಪನೆ ಸಕಾರಗೊಂಡಿದೆ. ಭಾರತದಲ್ಲಿ ಮೂಬೈಲ್ ತಯಾರಿಕೆ ಹೆಚ್ಚಳವಾಗಿದೆ. ಆಟಿಕೆಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ಅವು ಭಾರತದಲ್ಲಿ ನಿರ್ಮಾಣವಾಗುತ್ತಿವೆ. ರಕ್ಷಣಾ ವಲಯದಲ್ಲಿ ಭಾರತ ಸ್ವಾವಲಂಬಿಯಾಗಿದೆ. ಹಲವು ಯುದ್ಧ ವಿಮಾನಗಳನ್ನು ಭಾರತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ವಿಮಾನದ ಇಂಜಿನ್ ಕೂಡಾ ನಿರ್ಮಾಣ ಮಾಡಲಾಗುತ್ತಿದೆ. ಉತ್ತರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣವಾಗಿದೆ ಎಂದು ಮಾತನಾಡಿದ್ದಾರೆ.

TAGGED:Budget Session 2024Droupadi MurmuNew Parliament Buildingದ್ರೌಪದಿ ಮುರ್ಮುಬಜೆಟ್ ಅಧಿವೇಶನಹೊಸ ಸಂಸತ್ ಭವನ
Share This Article
Facebook Whatsapp Whatsapp Telegram

Cinema news

Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories
film producer harshavardhan
ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ್ದ ಸಿನಿಮಾ ನಿರ್ಮಾಪಕ; ಕಳ್ಳತನ ಕೇಸಲ್ಲಿ ಅರೆಸ್ಟ್
Cinema Latest Main Post Sandalwood Uttara Kannada
Priya Anand Vinod Prabhakar
`ಶುರು ಶುರು’ ಎಂದು ನೆನಪಿಸುವ `ಬಲರಾಮನ ದಿನಗಳು’
Cinema Latest Sandalwood

You Might Also Like

UP Man Murder case
Crime

ಹೆತ್ತ ತಂದೆ-ತಾಯಿಯನ್ನೇ ಹತ್ಯೆ ಮಾಡಿ ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ

Public TV
By Public TV
26 minutes ago
Ration Card
Belgaum

ಕೇಂದ್ರ, ರಾಜ್ಯ ಸರ್ಕಾರಗಳ 16 ಮಾನದಂಡ ಆಧರಿಸಿ 21 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ಡಿಲೀಟ್‌

Public TV
By Public TV
37 minutes ago
Ramamurthy Nagar Sanjana
Bengaluru City

ಇನ್ಸ್‌ಪೆಕ್ಟರ್‌ಗೆ ಲೆಟರ್ ಬರೆದು ಕಿರುಕುಳ ಕೇಸ್ – ʻಚಿನ್ನಿʼ ವಿರುದ್ಧ ಹನಿಟ್ರ್ಯಾಪ್ ಸೇರಿ ಸಾಲು ಸಾಲು ಪ್ರಕರಣ

Public TV
By Public TV
1 hour ago
Dharmasthala chinnaiah
Crime

ಧರ್ಮಸ್ಥಳ ಕೇಸ್‌ | ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಸಿಕ್ತು ಬಿಡುಗಡೆ ಭಾಗ್ಯ

Public TV
By Public TV
1 hour ago
BY Vijayendra
Belgaum

ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ: ವಿಜಯೇಂದ್ರ ಕಿಡಿ

Public TV
By Public TV
2 hours ago
Rahul Gandhi 2
Latest

ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್‌ ವಿವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?