ಬಜೆಟ್‌ ಮಂಡನೆಗೂ ಮುನ್ನ ವಿತ್ತ ಸಚಿವೆಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ

Public TV
1 Min Read
NIRMALA DRAUPADI

ನವದೆಹಲಿ: ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ತಿನ್ನಿಸಿದರು.

ನಿರ್ಮಲಾ ಸೀತಾರಾಮನ್‌ ಅವರು ಇಂದು ಬೆಳಗ್ಗೆ ಹಣಕಾಸು ಸಚಿವಾಲಯದ ಅಧಿಕಾರಿಗಳನ್ನು ಭೇಟಿಯಾಗಿ ಬಜೆಟ್ ಪ್ರತಿ ಸ್ವೀಕರಿಸಿದರು. ಬಳಿಕ ಅಧಿಕಾರಿಗಳ ಜೊತೆ ಫೋಟೋ ಸೆಷನ್ ನಡೆಯಿತು. ಇದಾದ ನಂತರ ನಿರ್ಮಲಾ ಅವರು ನೇರವಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಬಜೆಟ್‌ (Union Budget 2024) ಮಂಡಿಸಲು ಅನುಮೋದನೆಯನ್ನು ಪಡೆದರು.

ಬಜೆಟ್‌ ಪ್ರತಿಗೆ ಅನುಮೋದನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್‌ರಾವ್ ಕರಾಡ್ ಮತ್ತು ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: 6 ಬಜೆಟ್‌, 6 ಸೀರೆ – ಪ್ರತಿ ಬಜೆಟ್‌ನಲ್ಲೂ ಸೀರೆಯಿಂದ್ಲೆ ಸುದ್ದಿಯಾಗ್ತಾರೆ ಕೇಂದ್ರ ಸಚಿವೆ

Share This Article