ಜೂನ್ 13 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

Public TV
1 Min Read
Ram Nath Kovin

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗೆ ದಿನಾಂಕ ನಿಗದಿಯಾಗಿದ್ದು ಜೂನ್ 13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

Vidah Sauda state legislature building Karnataka Bengaluru

ಪ್ರವಾಸ ವಿವರ:
ರಾಷ್ಟ್ರಪತಿಯವರು ಜೂನ್ 13 ಸೋಮವಾರ ಬೆಳಗ್ಗೆ ಬೆಂಗಳೂರು ತಲುಪಲಿದ್ದಾರೆ. ನಂತರ, ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: 21ನೇ ಶತಮಾನದ ಭಾರತವು ಜನಕೇಂದ್ರಿತ ಆಡಳಿತದೊಂದಿಗೆ ಮುನ್ನಡೆಯುತ್ತಿದೆ: ಮೋದಿ

ಜೂನ್ 14 ರಂದು ಮಂಗಳವಾರ ಬೆಳಗ್ಗೆ, ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ. ಬಳಿಕ ಅಪರಾಹ್ನ ದೆಹಲಿಗೆ ತೆರಳಲಿದ್ದಾರೆ ಎಂದು ರಾಜ್ಯಕ್ಕೆ ಬಂದಿರುವ ಪ್ರವಾಸ ಮಾಹಿತಿಯಲ್ಲಿ ತಿಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *