ಬಿಸಿಯೂಟ ತಯಾರಿಸುವ ವೇಳೆ ಕುಕ್ಕರ್ ಸ್ಫೋಟ!

Public TV
1 Min Read
CNG HOSPITAL

ಚಾಮರಾಜನಗರ: ಬಿಸಿಯೂಟ ತಯಾರಿಸುವ ವೇಳೆ ಕುಕ್ಕರ್ ಸ್ಫೋಟಗೊಂಡ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಹಾಗೂ ಅಡುಗೆ ಸಹಾಯಕಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೆ.ಗುಂಡಾಪುರದಲ್ಲಿ ಸಂಭವಿಸಿದೆ.

ಗುಂಡಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಕುಕ್ಕರ್ ಸ್ಫೋಟಗೊಂಡಿದೆ. ಇದರಿಂದ 7 ನೇ ತರಗತಿ ವಿದ್ಯಾರ್ಥಿನಿ ರಾಜೇಶ್ವರಿ ಹಾಗೂ ಅಡುಗೆ ಸಹಾಯಕಿ ಮಹದೇವಮ್ಮಗೆ ಗಂಭೀರವಾಗಿ ಗಾಯಗಳಾಗಿವೆ. ಅಡುಗೆ ಮಾಡುವ ವೇಳೆ ರಾಜೇಶ್ವರಿ ಬೆಳಗಿನ ಹಾಲು ಪಡೆಯಲು ಅಡುಗೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕುಕ್ಕರ್ ಸ್ಫೋಟಗೊಂಡಿದೆ.

ಈ ಘಟನೆಯಿಂದ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯಭೀತರಾಗಿದ್ದಾರೆ. ಸ್ಥಳಕೆ ಬಿಇಓ ಸ್ವಾಮಿ ಭೇಟಿ ನೀಡಿದ್ದು, ವಿದ್ಯಾರ್ಥಿನಿಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ವಿದ್ಯಾರ್ಥಿನಿ ಹಾಗೂ ಅಡುಗೆ ಸಹಾಯಕಿ ಇಬ್ಬರನ್ನು ಕಾಮಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *