ಧಾರ್ಮಿಕ ಕೇಂದ್ರಗಳ ನಿರ್ಲಕ್ಷ್ಯಕ್ಕೆ ಗುಲಾಮಗಿರಿ ಮನಸ್ಥಿತಿಯೇ ಕಾರಣ – ಮೋದಿ

Public TV
1 Min Read
Narendra Modi 4

ಡೆಹ್ರಾಡೂನ್: ದೇಶದಾದ್ಯಂತ ಇರುವ ಧಾರ್ಮಿಕ ಕೇಂದ್ರಗಳನ್ನು (Religious Center) ಹಿಂದಿನ ಸರ್ಕಾರಗಳು ನಿರ್ಲಕ್ಷಿಸಿದ್ದವು. ಗುಲಾಮಗಿರಿ ಮನಸ್ಥಿತಿಯೇ ಇದಕ್ಕೆ ಕಾರಣ. ಈಗ ಅವುಗಳ ವೈಭವ ಮರುಸ್ಥಾಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

ಉತ್ತರಾಖಂಡದ ಭಾರತ-ಚೀನಾ ಗಡಿಯಲ್ಲಿರುವ ಮನ ಗ್ರಾಮದಲ್ಲಿ ಕೇದಾರನಾಥ (Kedarnath Temple) ಮತ್ತು ಹೇಮಕುಂಡ್ ಸಾಹಿಬ್ ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾಶಿ ವಿಶ್ವನಾಥ ದೇವಾಲಯ (Kashi Vishwanath Temple), ಉಜ್ಜಯಿನಿ ಮತ್ತು ಅಯೋಧ್ಯೆಯಲ್ಲಿ ಈಚೆಗೆ ಪುನರ್‌ನಿರ್ಮಾಣ ಕಾರ್ಯಗಳು ನಡೆದಿರುವುದನ್ನು ಉದಾಹರಣೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ: 4ರ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕನಿಂದ ಅತ್ಯಾಚಾರ – ಶಾಲೆಯನ್ನೇ ಮುಚ್ಚಿಸಿದ ಸರ್ಕಾರ

ನಮ್ಮ ಧಾರ್ಮಿಕ ಕೇಂದ್ರಗಳು ಕೇವಲ ಕಟ್ಟಡಗಳಲ್ಲ. ಅವು ನಮ್ಮ ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆಯ ಸಂಕೇತಗಳು. ಆದರೆ ಹಿಂದಿನ ಸರ್ಕಾರಗಳು (Government) ಧಾರ್ಮಿಕ ಕೇಂದ್ರಗಳನ್ನು ನಿರ್ಲಕ್ಷಿಸಿದ್ದವು. ಗುಲಾಮಗಿರಿ ಮನಸ್ಥಿತಿಯೇ ಇದಕ್ಕೆ ಕಾರಣ ಎಂದು ಕುಟುಕಿದರು. ಇದನ್ನೂ ಓದಿ: ಅಭಿಮಾನಿಗಳ ಮೂಲಕ ಅಪ್ಪು ಇನ್ನೂ ಜೀವಂತವಾಗಿದ್ದಾರೆ: ನಟಿ ರಮ್ಯಾ

NARENDRA MODI 2 1

ಹಿಮಾಲಯದ ತಪ್ಪಲಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯು ಯಾತ್ರಿಕರಿಗೆ ಅನುಕೂಲ ಉಂಟುಮಾಡುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಸಿದೆ. ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡಿದೆ. ಹೇಮಕುಂಡ್ ಸಾಹಿಬ್ ಗುರುದ್ವಾರಕ್ಕೆ ರೋಪ್‌ವೇ ನಿರ್ಮಿಸುವ ಯೋಜನೆಗೆ ಚಾಲನೆ ನೀಡಿರುವುದು ದೇಶದಲ್ಲಿ ಮಾತ್ರವಲ್ಲದೆ ಬ್ರಿಟನ್, ಜರ್ಮನಿ ಕೆನಡಾದಲ್ಲಿ ನೆಲೆಸಿರುವ ಸಿಖ್ ಸಮುದಾಯದವರಲ್ಲಿ ಹರ್ಷ ಉಂಟುಮಾಡಿದೆ ಎಂದು ಶ್ಲಾಘಿಸಿದರು.

ಇದಕ್ಕೂ ಮೊದಲು ಮೋದಿ ಅವರು ಕೇದಾರನಾಥ ಮತ್ತು ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *