ಜೈಪುರ: ರಾಜ್ಯದ ಬುಂದಿ ಜಿಲ್ಲೆಯ ದೇವಸ್ಥಾನವೊಂದರೊಳಗೆ 40 ವರ್ಷ ವಯಸ್ಸಿನ ಅರ್ಚಕರೊಬ್ಬರು ಶವವಾಗಿ ಪತ್ತೆಯಾಗಿದ್ದು, ದೇವರ ವಿಗ್ರಹ ಕಾಣೆಯಾಗಿದೆ.
ತಾರಾಗಢ ಬೆಟ್ಟದ ಮೇಲಿರುವ ದೋಬ್ರಾ ಮಹಾದೇವ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿವೇಕಾನಂದ ಶರ್ಮಾ ಅವರು ಸೋಮವಾರ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಸ್ಥಳೀಯರು ಇದನ್ನು ನೋಡಿದ್ದು, ಪೊಲೀಸರಿಗೆ ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: 348 ಹೊಸ ಪ್ರಕರಣ ದಾಖಲು – 311 ಮಂದಿ ಡಿಸ್ಚಾರ್ಜ್
ವಿಗ್ರಹವನ್ನು ರಕ್ಷಿಸುವ ಸಂದರ್ಭದಲ್ಲಿ ಅರ್ಚಕನನ್ನು ಕೊಂದಿರುವ ಸಾಧ್ಯತೆಯಿದೆ. ಅರ್ಚಕರ ದೇಹದ ಮೇಲಿನ ಗಾಯಗಳನ್ನು ಪರಿಶೀಲಿಸಿದಾಗ, ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ದಾಳಿಕೋರರು ಹಲ್ಲೆ ಮಾಡಿ ಕೊಂದಿರುವ ಸಾಧ್ಯತೆ ಇದೆ ಎಂದು ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಿಶೋರಿ ಲಾಲ್ ಹೇಳಿದ್ದಾರೆ.
ಪ್ರತಿಭಟನೆ
ಅರ್ಚಕರ ಕುಟುಂಬಕ್ಕೆ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಗುತ್ತಿಗೆ ಉದ್ಯೋಗವನ್ನು ಘೋಷಿಸುವವರೆಗೂ ಶವದ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲು ನಿರಾಕರಿಸಿ ಕೆಲವು ಸಮುದಾಯದವರು ಪ್ರತಿಭಟನೆ ನಡೆಸಿದರು. ಇವರ ಬೇಡಿಕೆಗಳಿಗೆ ಜಿಲ್ಲಾಡಳಿತ ಸಮ್ಮತಿಸಿದ ಹಿನ್ನೆಲೆ ಶವ ಪರೀಕ್ಷೆ ನಡೆಸಲಾಗಿದೆ. ಇದನ್ನೂ ಓದಿ: ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 8 ಮಂದಿ ದುರ್ಮರಣ
ಅಪರಿಚಿತ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಮೃತದೇಹವನ್ನು ಮಂಗಳವಾರ ಬೆಳಗ್ಗೆ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.