ದೇವರ ಸೇವೆಗೆ ಬಂದ ಹಣವನ್ನು ತನ್ನ ಖಾತೆಗೆ ಹಾಕಿಕೊಂಡ ಅರ್ಚಕ

Public TV
1 Min Read
MYS money order copy

ಮೈಸೂರು: ದೇವಸ್ಥಾನಕ್ಕೆ ಭಕ್ತರು ಮನಿ ಆರ್ಡರ್ ಮೂಲಕ ಕಳುಹಿಸಿದ ಹಣವನ್ನು ಅರ್ಚಕ ತನ್ನ ಖಾತೆಗೆ ಹಾಕಿಕೊಂಡ ಪ್ರಕರಣ ಮೈಸೂರಿನಲ್ಲಿ ನಡೆದಿದೆ.

ಜಿಲ್ಲೆಯ ನಂಜನಗೂಡು ತಾಲೂಕಿನ ಹೆಮ್ಮರಗಾಲದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಅರ್ಚಕ ಎನ್. ವೀರರಾಘವನ್ ಹೀಗೆ ದೇವಸ್ಥಾನದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅರ್ಚಕನ ಮೇಲೆ ಗ್ರಾಮಸ್ಥರು ತಹಶೀಲ್ದಾರ್ ಗೆ ದೂರು ನೀಡಿದ್ದಾರೆ.

ಗ್ರಾಮಸ್ಥರ ದೂರಿಗೆ ಸ್ಪಂದಿಸಿ ತಹಶೀಲ್ದಾರ್ ಲೆಕ್ಕ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ವೇಳೆಯಲ್ಲಿ 2011ರಿಂದ 2015 ರವರೆಗೆ 188 ಮನಿ ಆರ್ಡರ್ ಗಳು ವೀರರಾಘವನ್ ಖಾತೆಗೆ ಜಮಾ ಆಗಿರುವುದು ಗೊತ್ತಾಗಿದೆ.

ಈ ಬಗ್ಗೆ ತಹಶೀಲ್ದಾರ್ ನೀಡಿದ ನೋಟೀಸ್‍ಗೆ ಹೆದರಿದ ಅರ್ಚಕ ತನ್ನ ಖಾತೆಗೆ ಜಮಾ ಮಾಡಿಸಿಕೊಂಡಿದ್ದ ಹಣವನ್ನು ಬ್ಯಾಂಕಿಗೆ ಕಟ್ಟಿ ಈಗ ಪ್ರಕರಣ ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್‍ಗೆ ಪತ್ರ ಬರೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *