Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಎನ್.ಮಹೇಶ್ ರಾಜೀನಾಮೆ ನೀಡಲು ಕಾರಣ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವ ಎನ್.ಮಹೇಶ್ ರಾಜೀನಾಮೆ ನೀಡಲು ಕಾರಣ ಏನು?

Bengaluru City

ಸಚಿವ ಎನ್.ಮಹೇಶ್ ರಾಜೀನಾಮೆ ನೀಡಲು ಕಾರಣ ಏನು?

Public TV
Last updated: October 11, 2018 9:17 pm
Public TV
Share
2 Min Read
n mahesh
SHARE

ಬೆಂಗಳೂರು: ಬಿಎಸ್‍ಪಿ ಶಾಸಕ ಎನ್.ಮಹೇಶ್ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರದಲ್ಲಿ ಸಂಚಲನವನ್ನೇ ಹುಟ್ಟು ಹಾಕಿದೆ. ದಿಢೀರ್ ಅಂತಾ ಎನ್.ಮಹೇಶ್ ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ‘ಆಪರೇಷನ್ ಕಮಲ’ ನಡೆಯುತ್ತಿದ್ದೀಯಾ..? ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಮೈತ್ರಿ ಸರ್ಕಾರದ ಭಾಗವಾಗಿ ಇರಲು ಇಚ್ಛಿಸದಕ್ಕೆ ತಾವು ಹೊರ ಬಂದಿರುವುದಾಗಿ ಎನ್.ಮಹೇಶ್ ಹೇಳಿಕೊಂಡಿದ್ದಾರೆ. ಆದ್ರೆ ಸಿಎಂ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಅಸಮಾಧಾನವಿಲ್ಲ. ಮುಂದಿನ ಉಪ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡಲಿದ್ದೇನೆ ಅಂತಾನೂ ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಗೆ ಪಕ್ಷದ ಸಂಘಟನೆ ಜವಾಬ್ದಾರಿ ನನ್ನ ಮೇಲಿರುವುದರಿಂದ ಸಚಿವ ಸ್ಥಾನಕ್ಕಿಂತ ತನಗೆ ಪಕ್ಷ ಕಾರ್ಯವೇ ಮುಖ್ಯವಾಗಿದ್ದು, ಅದ್ದರಿಂದ ಸಚಿವ ಸ್ಥಾನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಪಬ್ಲಿಕ್ ಟಿವಿಗೆ ಎನ್.ಮಹೇಶ್ ತಿಳಿಸಿದ್ದಾರೆ.

N MAHESH LETTER

ಮಹೇಶ್ ಅವರು ರಾಜೀನಾಮೆ ನೀಡುವ ಮುನ್ನವೇ ದೋಸ್ತಿ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಪಡೆದಿದ್ದ, ಹಿಂದುಗಳಿದ ವರ್ಗಗಗಳ ಕಲ್ಯಾಣ ಸಚಿವ ಸಿಎಸ್ ಪುಟ್ಟರಂಗ ಶೆಟ್ಟಿ ಅವರ ಕಡೆಗಣನೆ ಕಾರಣ ಎನ್ನಲಾಗಿದೆ. ಜಿಲ್ಲೆಯಲ್ಲಿ ನಡೆದಿದ್ದ ದಸರಾ ಕಾರ್ಯಕ್ರಮದ ಆಹ್ವಾನ ಪಟ್ಟಿಯಲ್ಲೇ ಮಹೇಶ್ ಅವರ ಹೆಸರನ್ನ ಮುದ್ರಣ ಮಾಡದೆ ನಿರ್ಲಕ್ಷ್ಯ ಮಾಡಲಾಗಿತ್ತು. ಈ ಕುರಿತು ಅಸಮಾಧಾನಗೊಂಡಿದ್ದ ಮಹೇಶ್ ಬೆಂಬಲಿಗರು ಜಿಲ್ಲಾ ಆಡಳಿತ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.

ಇದರ ಬೆನ್ನಲ್ಲೇ ಸೋಮವಾರ ಹಾಗೂ ಮಂಗಳವಾರ ಎರಡು ದಿನ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಮಹೇಶ್ ಅವರು ಪಕ್ಷದ ರಾಷ್ಟ್ರೀಯ ಮುಖಂಡರು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಅವರೊಂದಿಗೆ ಚರ್ಚೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಜೊತೆ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದಿಂದ ಹೊರಗೆ ಬನ್ನಿ ಎಂದು ಮಾಯಾವತಿ ಅವರು ಸೂಚನೆ ನೀಡಿದ್ದರು ಎನ್ನಲಾಗಿದೆ.

mayawati sonia

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಮಹೇಶ್ ಅವರು ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಸಿಎಂ ಕುಮಾರಸ್ವಾಮಿ ಹಾಗೂ ರಾಜ್ಯಪಾಲರಿಗೂ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದರು. ಮಾಯಾವತಿ ಅವರೊಂದಿನ ಚರ್ಚೆ ವೇಳೆ ರಾಜೀನಾಮೆ ನೀಡಿದ ಬಳಿಕ ಯಾವುದೇ ಕಾರಣಕ್ಕೂ ಯಾರ ಮನವಿಗೂ ಅವಕಾಶ ನೀಡದೆ ರಾಜೀನಾಮೆ ಹಿಂದೆ ತೆಗೆದುಕೊಳ್ಳುವ ಕುರಿತು ಯೋಚನೆ ಮಾಡಬಾರದು ಎಂದು ಸಲಹೆಯನ್ನು ನೀಡಿದ್ದರು ಎಂದು ಮಾಹಿತಿ ಲಭಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಲಭ್ಯವಾಗುವ ಪರಿಶಿಷ್ಠ ವರ್ಗದ ಮತಗಳನ್ನು ಸೆಳೆಯುವ ಕಾರ್ಯ ತಂತ್ರದ ಲೆಕ್ಕಾಚಾರ ಎನ್ನುವ ಅನುಮಾನ ವ್ಯಕ್ತವಾಗಿದೆ.

ಲೋಕಸಭೆಗೆ ಫೈಟ್?
ಮಾಯಾವತಿಯವರು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೆಲ ದಿನಗಳ ಹಿಂದೆ ಖಡಕ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಹೇಶ್ ಅವರು ರಾಜೀನಾಮೆ ನೀಡಿ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ಪ್ರಚಾರ ಕಾರ್ಯ ನಡೆಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಇದೇ ವೇಳೆ ಮಹೇಶ್ ಅವರು ಸಮಿಶ್ರ ಸರ್ಕಾರಕ್ಕೆ ನನ್ನ ರಾಜೀನಾಮೆಯಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ. ಸದ್ಯ ಘೋಷಣೆ ಆಗಿರುವ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

maya

TAGGED:bspchamarajanagarjdsN.MaheshPublic TVResignationಎನ್.ಮಹೇಶ್ಚಾಮರಾಜನಗರಜೆಡಿಎಸ್ಪಬ್ಲಿಕ್ ಟಿವಿಬಿಎಸ್‍ಪಿಮಾಯಾವತಿರಾಜೀನಾಮೆಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
7 minutes ago
BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
1 hour ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
1 hour ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
1 hour ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
2 hours ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?