ಕೋಲಾರ: 75ನೇ ಗಣರಾಜ್ಯೋತ್ಸವ (75th Republic Day) ಆಚರಣೆಯ ಈ ಸಂದರ್ಭದಲ್ಲಿ ಇಂದು ದೆಹಲಿಯಲ್ಲಿ ಕೋಲಾರದ ಇಬ್ಬರು ಮಹಿಳೆಯರಿಗೆ ಸನ್ಮಾನ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಇಬ್ಬರಿಗೆ ಸನ್ಮಾನ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: 75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ
ಕೋಲಾರ ತಾಲೂಕು ಬೆಗ್ಲಿ ಹೊಸಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮಂಜುಳಾ ಹಾಗೂ ಶಶಿಕಲಾ ಕೆಲಸ ಮಾಡುತ್ತಿದ್ದಾರೆ. ಸ್ವಚ್ಚ ವಾಹಿನಿ ಚಾಲಕಿಯಾಗಿ ಮಂಜುಳಾ ಹಾಗೂ ಶಶಿಕಲಾ ಅವರು ನಿತ್ಯ ಕಸವನ್ನು ವೈಜ್ಞಾನಿಕವಾಗಿ ವಿಂಗಡನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಈ ಕಾರ್ಯವನ್ನು ಮೆಚ್ಚಿ ಇಂದು ಸನ್ಮಾನ ಮಾಡಲಾಗುತ್ತಿದೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ಈ ಇಬ್ಬರು ಮಹಿಳೆಯರು ದೆಹಲಿ ತಲುಪಿದ್ದಾರೆ.